ಕರುನಾಡಿಗೆ ಮತ್ತೊಂದು ಆಘಾತ; ಸಿದ್ದರಾಮಯ್ಯ ಪರಮಾಪ್ತ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ನಿಧನ!

Published : Dec 10, 2024, 01:59 PM IST
ಕರುನಾಡಿಗೆ ಮತ್ತೊಂದು ಆಘಾತ; ಸಿದ್ದರಾಮಯ್ಯ ಪರಮಾಪ್ತ ಉಗ್ರಾಣ ನಿಗಮದ ಅಧ್ಯಕ್ಷ ಜಯಣ್ಣ ನಿಧನ!

ಸಾರಾಂಶ

ಮಾಜಿ ಶಾಸಕ, ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ (72) ಹೃದಯಾಘಾತದಿಂದ ನಿಧನರಾದರು. ಮೈಸೂರಿಗೆ ತೆರಳುತ್ತಿದ್ದಾಗ ಉತ್ತಂಬಳ್ಳಿ ಬಳಿ ಈ ಘಟನೆ ಸಂಭವಿಸಿದೆ. ಸಿಎಂ ಸಿದ್ದರಾಮಯ್ಯ ಆಪ್ತರಾಗಿದ್ದ ಜಯಣ್ಣ, 1999ಮತ್ತು 2023ರಲ್ಲಿ ಶಾಸಕರಾಗಿದ್ದರು. ನಾಳೆ ಮಾಂಬಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೂರು ದಿನಗಳ ಹಿಂದೆ ಸಿದ್ದರಾಮಯ್ಯ ಜಯಣ್ಣ ಮನೆ ಉದ್ಘಾಟಿಸಿದ್ದರು.

ಚಾಮರಾಜನಗರ (ಡಿ.10): ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಸುದ್ದಿ ರಾಜ್ಯದ ಜನರಿಗೆ ಆಘಾತವನ್ನು ನೀಡಿದೆ. ಆದರೆ, ಇದೀಗ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೂ ಆಗಿದ್ದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಎಸ್. ಜಯಣ್ಣ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರ ಬಣದಲ್ಲಿ ಗುರುತಿಸಿಕೊಂಡಿದ್ದ ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಜಯಣ್ಣ ಅವರಿಗೆ ಇದೀಗ ಪಕ್ಷದ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. ಜಯಣ್ಣ ಅವರು, ಇಂದು ಬೆಳಗ್ಗೆ ಮೈಸೂರಿನ ಕಡೆಗೆ ಕಾರಿನಲ್ಲಿ ಹೋಗುವಾಗ ದಿಢೀರ್ ಹೃದಯಾಘಾತ ಉಂಟಾಗಿದೆ. ಈ ವೇಳೆ ಹತ್ತಿರದ ಜನನಿ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸದರೂ ಮಾರ್ಗ ಮಧ್ಯದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.  ಈ ಘಟನೆ ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಸಂಭವಿಸಿದೆ. ಈಗಾಗಲೇ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಕಳೆದುಕೊಂದು ಆಘಾತಕ್ಕೆ ಒಳಗಾಗಿರುವ ಕರುನಾಡಿನ ಜನತೆಗೆ ಇದೀಗ ಮತ್ತೊಬ್ಬ ರಾಜಕೀಯ ನಾಯಕನ ಸಾವು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ. ಕನ್ನಡ ಮಾತೆ ಇಬ್ಬಿಬ್ಬರು ಮಕ್ಕಳನ್ನು ಕಳೆದುಕೊಂಡಂತಾಗಿದ್ದಾಳೆ.

ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್. ಜಯಣ್ಣ ಅವರಿಗೆ 72 ವರ್ಷ ವಯಸ್ಸಾಗಿತ್ತು. ಕಳೆದ 1999 ರಲ್ಲಿ ಜೆಡಿಎಸ್ ನಿಂದ ಹಾಗೂ 2013 ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದ ಎಸ್. ಜಯಣ್ಣ ಅವರಿಗೆ ಅನಾರೋಗ್ಯದ ಹಿನ್ನಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಆದರೆ, ಈ ಬಾರಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಸರ್ಕಾರದಲ್ಲಿ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು. 9-9-1952 ರಲ್ಲಿ ಜನಿಸಿದ್ದ ಎಸ್ ಜಯಣ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಚಾಮರಾಜನಗರ ಜಿಲ್ಲೆ ಮಾಂಬಳ್ಳಿ ಗ್ರಾಮದಲ್ಲಿ ನಡೆಸಲಾಗುತ್ತದೆ ಎಂದು ಕುಟುಂಬ ಮೂಲದಿಂದ ತಿಳಿದುಬಂದಿದೆ.

ಇದನ್ನೂ ಓದಿ: ಎಸ್.ಎಂ.ಕೃಷ್ಣ ಆಗಲಿಕೆಯಿಂದ ಕರ್ನಾಟಕ ಮಾರ್ಗದರ್ಶಕರನ್ನು ಕಳೆದುಕೊಂಡಂತಾಗಿದೆ: ಬೊಮ್ಮಾಯಿ

ಜಯಣ್ಣ ಅವರ ಗೃಹ ಪ್ರವೇಶಕ್ಕೆ ಹೋಗಿದ್ದ ಸಿದ್ದರಾಮಯ್ಯ: ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಮೂರು ದಿನಗಳ ಹಿಂದೆ ಶನಿವಾರ ಕೊಳ್ಳೇಗಾಲದ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಜಯಣ್ಣ ಅವರ ಮನೆಗೆ ಹೋಗಿದ್ದ ಸಿದ್ದರಾಮಯ್ಯ ಅವರ ಕೈಯಿಂದ ಮನೆಯನ್ನು ನೀವೇ ಉದ್ಘಾಟನೆ ಮಾಡಬೇಕು ಎಂದು ಕೇಳಿಕೊಂಡು ರಿಬ್ಬನ್ ಕಟ್ ಮಾಡಿಸಿದ್ದರು. ಆದರೆ, ನಾಳೆ ದೊಡ್ಡ ಮಟ್ಟದಲ್ಲಿ ಗೃಹ ಪ್ರವೇಶವನ್ನು ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಮೈಸೂರಿಗೆ ಆಹ್ವಾನ ಪತ್ರಿಕೆ ಕೊಡಲು ಹೋಗುತ್ತಿದ್ದ ವೇಳೆ ಜಯಣ್ಣ ಅವರಿಗೆ ಹೃದಯಾಘಾತವಾಗಿ ಅವಘಡ ನಡೆದು ಹೋಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ