ಭಕ್ತರಿಗಿಲ್ಲಿದೆ ಗುಡ್ ನ್ಯೂಸ್ : ದೇಗುಲಗಳಲ್ಲಿ ಸೇವೆ ಪುನಾರಂಭ , ಕಂಡೀಶನ್ಸ್

Kannadaprabha News   | Asianet News
Published : Sep 01, 2020, 07:52 AM IST
ಭಕ್ತರಿಗಿಲ್ಲಿದೆ ಗುಡ್ ನ್ಯೂಸ್ : ದೇಗುಲಗಳಲ್ಲಿ ಸೇವೆ ಪುನಾರಂಭ , ಕಂಡೀಶನ್ಸ್

ಸಾರಾಂಶ

ಕೊರೋನಾ ಮಹಾಮಾರಿ ಅಟ್ಟಹಾಸದ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಎಲ್ಲಾ ದೇವಾಲಯಗಳ ಸೇವೆಯನ್ನು ಇಂದಿನಿಂದ ಮತ್ತೆ ಆರಮಭ ಮಾಡಲಾಗುತ್ತಿದೆ.

ಉಡುಪಿ (ಸೆ.01): ಅನ್‌ಲಾಕ್‌ 4.0 ಮಾರ್ಗಸೂಚಿ ಅನುಸಾರ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಸೆ.1ರಿಂದ ಭಕ್ತರಿಗೆ ಸೇವಾ ಕಾರ್ಯಕ್ರಮ ಆರಂಭಿಸಲಾಗುವುದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಆದರೆ, ಅನ್ನದಾನ ಮತ್ತು ಹೆಚ್ಚು ಜನ ಸೇರುವ ಉತ್ಸವ, ರಥಸೇವೆ, ಸಮಾರಂಭಗಳಿಗೆ ಮಾತ್ರ ಅವಕಾಶ ಇಲ್ಲ ಎಂದಿದ್ದಾರೆ.

ಈಗಾಗಲೇ ದೇವಾಲಯಗಳಲ್ಲಿ ಸೇವೆ ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ಮತ್ತು ರಾಜ್ಯ ಮುಖ್ಯ ಕಾರ್ಯದರ್ಶಿ ಅವರಿಗೆ ಪ್ರಸ್ತಾಪ ಸಲ್ಲಿಸಲಾಗಿದ್ದು, ಒಳಾಂಗಣದ ಎಲ್ಲ ಸೇವೆ ಆರಂಭ ಮಾಡಿ ಎಂದು ಮನವಿ ಮಾಡಿದ್ದೇವೆ. 

ಕೊರೋನಾದಿಂದ ಆರ್ಥಿಕ ಸಂಕಷ್ಟ: ತಿರುಪತಿ ದೇಗುಲಕ್ಕೆ ಈಗ ಠೇವಣಿ ಬಡ್ಡಿಯೇ ಆಧಾರ!...

ಕೋವಿಡ್‌ ನಿಯಮಾವಳಿಗಂತೆ ಸಾಮಾಜಿಕ ಅಂತರ, ಸೀಮಿತ ಜನರ ಭಾಗವಹಿಸುವಿಕೆಯಲ್ಲಿ ದೇವಾಲಯದೊಳಗೆ ನಡೆಯುವ ಎಲ್ಲ ಸೇವೆಗಳನ್ನು ಆರಂಭ ಮಾಡಲು ಯೋಚಿಸಲಾಗಿದೆ. ಈ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಶೀಘ್ರದಲ್ಲೇ ಸಂಬಂಧಪಟ್ಟದೇವಸ್ಥಾನಗಳಿಗೆ ತಲುಪಲಿದೆ ಎಂದರು.

ಕಳೆದ 5 ತಿಂಗಳಿನಿಂದಲೂ ಕೂಡ ಕೊರೋನಾ ಹಿನ್ನೆಲೆಯಲ್ಲಿ ಎಲ್ಲಾ ದೇಗುಲಗಳನ್ನು ಬಂದ್ ಮಾಡಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚಿನ ಜನರು ಸೇರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ದೇವಾಲಗಳನ್ನು ಮುಚ್ಚಲಾಗಿತ್ತು. ಇದೀಗ ಮತ್ತೆ ಸೇವೆ ಆರಂಭ ಮಾಡಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ