
ಬೆಂಗಳೂರು (ಮೇ.14): ಕೋವಿಡ್ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ನಾರಾಯಣ ಹೆಲ್ತ್ ಸಂಸ್ಥೆ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ಕಮಿಟಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
'ಕೊರೋನಾ 2ನೇ ಅಲೆಯಲ್ಲಿ ತಲ್ಲಣ : ಕಾಯದೇ ಲಸಿಕೆ ಪಡೆಯಿರಿ' ..
ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರುವ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಮೂರನೇ ಅಲೆ ಎದುರಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. ಈ ಮೂರನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಸಮಸ್ಯೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಡಾ.ದೇವಿಪ್ರಸಾದ್ ಶೆಟ್ಟಿಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಭಾರತದಲ್ಲಿ 2 ಲಕ್ಷ ನರ್ಸ್, 1.5 ಲಕ್ಷ ವೈದ್ಯರ ಅಗತ್ಯ ಬೀಳಬಹುದು: ಡಾ. ದೇವಿ ಶೆಟ್ಟಿ ...
ಕಾರ್ಯಪಡೆಯಲ್ಲಿ ಇನ್ನಿತರ ತಜ್ಞ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಇರಲಿದ್ದಾರೆ. ಮೂರನೇ ಅಲೆಯಲ್ಲಿ ಹೆಚ್ಚಿನ ಪರಿಣಾಮ ಉಂಟಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅಗತ್ಯ ಸೌಲಭ್ಯ ಜತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ