ಲಸಿಕೆ ವಿತರಣೆ: ದ. ಭಾರತಕ್ಕೇ ಕರ್ನಾಟಕ ನಂ.1!

Published : May 31, 2021, 11:22 AM ISTUpdated : May 31, 2021, 11:34 AM IST
ಲಸಿಕೆ ವಿತರಣೆ: ದ. ಭಾರತಕ್ಕೇ ಕರ್ನಾಟಕ ನಂ.1!

ಸಾರಾಂಶ

* ಲಸಿಕೆ ವಿತರಣೆ, ದಕ್ಷಿಣ ಭಾರತದಲ್ಲಿ ಕರ್ನಾಟಕಕ್ಕೆ ಅಗ್ರ ಸ್ಥಾನ * ರಾಜ್ಯದಲ್ಲಿ ಈವರೆಗೆ 1.32 ಕೋಟಿ ಲಸಿಕೆ ನೀಡಿಕೆ * ಕೇರಳ, ಆಂಧ್ರ, ತಮಿಳ್ನಾಡಿಗಿಂತ ನಾವು ಮುಂದೆ ರಾಷ್ಟ್ರೀಯ ಪಟ್ಟಿಯಲ್ಲಿ ಕರ್ನಾಟಕಕ್ಕೆ 6ನೇ ಸ್ಥಾನ

ಬೆಂಗಳೂರು(ಮೇ.31): ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಡೋಸ್ ಕೊರೋನಾ ಲಸಿಕೆ ನೀಡಿದ ರಾಜ್ಯಗಳ ಪಟ್ಟಿ ಯಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.

ಅಲ್ಲದೆ, 1.32 ಕೋಟಿ ಲಸಿಕೆ ನೀಡುವ ಮೂಲಕ ದೇಶದಲ್ಲೇ 6ನೇ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯವಾಗಿ ಹೊರಹೊಮ್ಮಿದೆ. ಕರ್ನಾಟಕ ಹೊರತುಪಡಿಸಿ ದಕ್ಷಿಣ ಭಾರತದ ಇತರೆ ರಾಜ್ಯಗಳ ಲಸಿಕೆ ವಿತರಣೆ 1 ಕೋಟಿಯನ್ನೂ ಮೀರಿಲ್ಲ.

ರಾಜ್ಯದಲ್ಲಿ ಕೊರೋನಾ ಲಸಿಕೆ ಅಭಿ ಯಾನಕ್ಕೆ ಲಸಿಕೆ ಕೊರತೆಯಿಂದ ಹಿನ್ನಡೆ ಉಂಟಾಗಿದೆ ಎಂಬ ಟೀಕೆಗಳಿವೆ. ಆದರೆ, ದಕ್ಷಿಣದ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹೆಚ್ಚು ಜನಕ್ಕೆ ಲಸಿಕೆ ನೀಡಲಾಗಿದೆ. ಮೇ 29ರ ವೇಳೆಗೆ ರಾಜ್ಯದಲ್ಲಿ ಒಟ್ಟು 1.32 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಚೀನಾ ಲ್ಯಾಬ್‌ನಲ್ಲೇ ಕೊರೋನಾ ಹುಟ್ಟು, ಅಮೆರಿಕಾದ ಫಂಡಿಂಗ್: ಮೋಸ ಮಾಡಿದ್ದ ಡ್ರ್ಯಾಗನ್!

45 ವರ್ಷ ಮೇಲ್ಪಟ್ಟ 20.36 ಲಕ್ಷ ಮಂದಿಗೆ ಎರಡೂ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಂಕಿ- ಅಂಶಗಳು ತಿಳಿಸಿವೆ. ವೈದ್ಯಕೀಯ ಸಿಬ್ಬಂದಿಯ ಪೈಕಿ 4.70 ಲಕ್ಷ ಮಂದಿಗೆ ಎರಡೂ ಡೋಸ್ ನೀಡಲಾಗಿದೆ. ಮುಂಚೂಣಿ ಕಾರ್ಯಕರ್ತರ ಪೈಕಿ 2.09 ಲಕ್ಷ ಮಂದಿಗೆ ಎರಡೂ ಲಸಿಕೆ ನೀಡಲಾಗಿದೆ.

18 ರಿಂದ 44 ವರ್ಷದ 8.58 ಲಕ್ಷ ಮಂದಿಗೆ ಹಾಗೂ 45 ವರ್ಷ ಮೇಲ್ಪಟ್ಟವರಿಗೆ 20.36 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಈವರೆಗೆ 1.05 ಕೋಟಿ ಜನರಿಗೆ ಮೊದಲ ಲಸಿಕೆ ಹಾಗೂ 27.16 ಲಕ್ಷ ಮಂದಿಗೆ ಎರಡೂ ಲಸಿಕೆ ನೀಡಲಾಗಿದೆ.

ಸ್ಥಾನರಾಜ್ಯಲಸಿಕೆ
1ಮಹಾರಾ‍ಷ್ಟ್ರ1.9 ಕೋಟಿ
2ಉತ್ತರ ಪ್ರದೇಶ1.77 ಕೋಟಿ
3ರಾಜಸ್ಥಾನ1.66 ಕೋಟಿ
4ಗುಜರಾತ್1.65 ಕೋಟಿ
5ಪಶ್ಚಿಮ ಬಂಗಾಳ1.40 ಕೋಟಿ
6ಕರ್ನಾಟಕ1.32 ಕೋಟಿ
7ಮಧ್ಯಪ್ರದೇಶ1.06 ಕೋಟಿ
8ಆಂಧ್ರಪ್ರದೇಶ94.86 ಲಕ್ಷ
9ಕೇರಳ90.56 ಲಕ್ಷ
10ತಮಿಳುನಾಡು88 ಲಕ್ಷ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ