
ಬೆಂಗಳೂರು (ನ.21): ಮೂರು ದಶಕಗಳ ಹಳೇ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣ ಸಂಬಂಧ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಈ ರಿಯಾಯಿತಿ ಶುಕ್ರವಾರದಿಂದಲೇ ಜಾರಿಗೆ ಬರಲಿದ್ದು, ದಂಡ ಪಾವತಿಗೆ 20 ದಿನಗಳ ಸಮಯ ನೀಡಲಾಗಿದೆ. ಈ ಆಫರ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಸಂಚಾರ ಪೊಲೀಸ್ ಠಾಣೆಗಳು, ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ (ಕೆಎಸ್ಪಿ) ಹಾಗೂ ಬೆಂಗಳೂರು ಒನ್ ಸೇರಿ ಆನ್ಲೈನ್ ಮೂಲಕ ಕೂಡ ದಂಡ ಪಾವತಿಗೆ ಅವಕಾಶ ಕೊಡಲಾಗಿದೆ.
1991-92 ರಿಂದ 2019-20 ರ ಅವಧಿಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಕುರಿತು ದಂಡದ ಪಾವತಿಗೆ ಶೇ.50 ರಷ್ಟು ರಿಯಾಯಿತಿ ನ.21 ರಿಂದ ಡಿ.12 ವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿಯ (ಸಾರಿಗೆ ಇಲಾಖೆ) ರಂಗಪ್ಪ ಕರಿಗಾರ ಆದೇಶದಲ್ಲಿ ಹೇಳಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಸಹ ಸಂಚಾರ ನಿಯಮಗಳ ಉಲ್ಲಂಘನೆ ದಂಡ ಪಾವತಿಗೆ ಶೇ.50 ರಷ್ಟು ಸರ್ಕಾರ ವಿನಾಯ್ತಿ ನೀಡಿತ್ತು. ಆಗ ಬೆಂಗಳೂರು ನಗರದಲ್ಲಿ 5 ಲಕ್ಷ ಕ್ಕೂ ಅಧಿಕ ಪ್ರಕರಣಗಳು ಇತ್ಯರ್ಥಗೊಂಡು 100 ಕೋಟಿ ರು ಹಣ ಸಂಗ್ರಹವಾಗಿತ್ತು. ಈಗ ಮತ್ತೆ ಹಳೇ ಸಂಚಾರ ಪ್ರಕರಣಗಳ ವಿಲೇವಾರಿಗೆ ಸಾರ್ವಜನಿಕರಿಗೆ ದಂಡ ಪಾವತಿಸಲು ಅವಕಾಶ ಕೊಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ