
ಬೆಂಗಳೂರು (ಜೂ.19): ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ದರ ಏರಿಕೆ ಬೆನ್ನಲ್ಲೇ ಶೀಘ್ರವೇ ಬಸ್ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸುಳಿವು ನೀಡಿದ್ದಾರೆ.
ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವರು, 2014 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲಾಗಿದೆ. ಇದೀಗ ಡೀಸೆಲ್ ದರ ಹೆಚ್ಚಳವಾಗಿರುವುದರಿಂದ ಹೊರೆಯಾಗುತ್ತಿದೆ. ಹೀಗಾಗಿ ಪ್ರಯಾಣದರ ಹೆಚ್ಚಳ ಮಾಡುವುದು ಅನಿವಾರ್ಯ ಎಂದಿದ್ದಾರೆ.
ಮಂತ್ರಾಲಯದ ಕರ್ನಾಟಕ ಛತ್ರದ ಕಳಪೆ ಕಾಮಗಾರಿ: ಲೋಕಾಯುಕ್ತ ತನಿಖೆಗೆ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ
ಈಗಾಗಲೇ ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ಈ ನಡುವೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡಿರುವುದು ನೇರವಾಗಿ ರೈತರು ಬಡವರ ಮೇಲೆ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಈಗಾಗಲೇ ರಾಜ್ಯಾದ್ಯಂತ ಸಂಘ ಸಂಸ್ಥೆಗಳು ಪ್ರತಿಭಟನೆಗಿಳಿದಿವೆ. ಈ ನಡುವೆ ಇದೀಗ ಬಸ್ ಪ್ರಯಾಣದರ ಹೆಚ್ಚಳದ ಬಗ್ಗೆ ಸಚಿವರು ಸುಳಿವು ನೀಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ