ಸಾರಿಗೆ ಸಿಬ್ಬಂದಿಗೆ 6ನೇ ವೇತನ ಭಾರಿ ಬಂಪರ್‌?

Kannadaprabha News   | Asianet News
Published : Mar 30, 2021, 08:28 AM IST
ಸಾರಿಗೆ ಸಿಬ್ಬಂದಿಗೆ 6ನೇ ವೇತನ ಭಾರಿ  ಬಂಪರ್‌?

ಸಾರಾಂಶ

ಶೀಘ್ರದಲ್ಲೇ ರಾಜ್ಯ ಸಾರಿಗೆ ನೌಕರರು ಶುಭ ಸುದ್ದಿಯೊಂದನ್ನು ಪಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಸಾರಿಗೆ ಸಚಿವರೇ ಸ್ವತಃ ಮಾಹಿತಿ ನೀಡಿದ್ದಾರೆ. 

 ಬೆಂಗಳೂರು (ಮಾ.30):  ಸಾರಿಗೆ ನೌಕರರ ಆರನೇ ವೇತನ ಆಯೋಗಕ್ಕೆ ಸಮಾನಾಂತರ ವೇತನದ ಬೇಡಿಕೆ ಸಂಬಂಧ ಸಾಧಕ-ಬಾಧಕ ಚರ್ಚಿಸಿ ವಾರದೊಳಗೆ ಸ್ಪಷ್ಟಚಿತ್ರಣ ನೀಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರುವುದರಿಂದ ಸಾರಿಗೆ ನೌಕರರು ಏಪ್ರಿಲ್‌ 7ರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರದ ನಿರ್ಧಾರ ಕೈಬಿಡುವಂತೆ ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ ಮಾಡಿದರು.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರನೇ ವೇತನ ಆಯೋಗಕ್ಕೆ ಸಮಾನಾಂತರ ವೇತನ ಈಡೇರಿಕೆಯಿಂದ ಸರ್ಕಾರಕ್ಕೆ ಹಾಗೂ ಸಾರಿಗೆ ನಿಗಮಗಳಿಗೆ ಎಷ್ಟುಆರ್ಥಿಕ ಹೊರೆಯಾಗುತ್ತದೆ ಎಂಬುದರ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವಾಗ ಬೇಡಿಕೆ ಈಡೇರಿಸಿದರೂ 2020ರ ಜನವರಿಯಿಂದ ಪೂರ್ವಾನ್ವಯವಾಗುವಂತೆ ಬಾಕಿ ಕೊಡುತ್ತೇವೆ. ಹೀಗಾಗಿ ನೌಕರರು ಏಪ್ರಿಲ್‌ ಏಳರಿಂದ ನಡೆಸಲು ಉದ್ದೇಶಿಸಿರುವ ಮುಷ್ಕರ ನಿರ್ಧಾರ ಕೈಬಿಡುವಂತೆ ಕೋರಿದರು.

ಏ.7ರಿಂದ ರಸ್ತೆಗಿಳಿಯಲ್ಲ KSRTC ಬಸ್‌ಗಳು : ಪ್ರಯಾಣಿಕರೆ ಎಚ್ಚರ .

ಪರ್ಯಾಯ ವ್ಯವಸ್ಥೆ:  ಒಂದು ವೇಳೆ ನೌಕರರು ಮುಷ್ಕರಕ್ಕೆ ಮುಂದಾದರೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನ ಬಳಸಿಕೊಂಡು ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಖಾಸಗಿ ಬಸ್‌, ಮಿನಿ ಬಸ್‌ ಸೇರಿದಂತೆ ಖಾಸಗಿ ವಾಹನಗಳಿಗೆ ಉಚಿತ ರಹದಾರಿ ನೀಡಿ ಕಾರ್ಯಾಚರಣೆ ಮಾಡುತ್ತೇವೆ. ಈಗಾಗಲೇ ಆಸಕ್ತ ವಾಹನ ಮಾಲೀಕರಿಗೆ ಆಹ್ವಾನ ನೀಡಲಾಗಿದೆ ಎಂದು ಸಚಿವ ಸವದಿ ಹೇಳಿದರು.

ಮೂರು ತಿಂಗಳ ಹಿಂದೆ ನಾಲ್ಕು ದಿನ ನಡೆದ ಪ್ರತಿಭಟನೆ ವೇಳೆ ಸಾರಿಗೆ ನೌಕರರು 10 ಬೇಡಿಕೆ ಇರಿಸಿದ್ದರು. ಈ ಪೈಕಿ ಸರ್ಕಾರಿ ನೌಕರರಾಗಿ ಪರಿಗಣಿಸುವ ಬೇಡಿಕೆ ಹೊರತುಪಡಿಸಿ ಉಳಿದ 9 ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈಗಾಗಲೇ 8 ಬೇಡಿಕೆ ಈಡೇರಿಸಲಾಗಿದೆ. ಸಾರಿಗೆ ನಿಗಮಗಳ ಆದಾಯ ಡೀಸೆಲ್‌ ಹಾಗೂ ನೌಕರರ ವೇತನಕ್ಕೆ ಸಾಲುತ್ತಿಲ್ಲ. ಸರ್ಕಾರಕ್ಕೆ ಭಾರವಾದರೂ ನೌಕರರಿಗೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸಲಿದ್ದೇವೆ ಎಂದು ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!