ವಾಲ್ಮೀಕಿ ನಿಗಮ ಹಗರಣ: BSNL ಮಹಿಳಾ ಅಧಿಕಾರಿ ಪತಿಯ ಬಂಧನ; ₹10 ಕೋಟಿ ಗುಳುಂ ಮಾಡಿದ್ದ ಭೂಪ!

Published : Jul 16, 2024, 05:24 AM IST
ವಾಲ್ಮೀಕಿ ನಿಗಮ ಹಗರಣ: BSNL  ಮಹಿಳಾ ಅಧಿಕಾರಿ ಪತಿಯ ಬಂಧನ; ₹10 ಕೋಟಿ ಗುಳುಂ ಮಾಡಿದ್ದ ಭೂಪ!

ಸಾರಾಂಶ

ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎನ್ನಲಾದ ಭಾರತ ಸಂಚಾರ ನಿಗಮದ (ಬಿಎಸ್ಎನ್ಎಲ್‌) ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ವಿಶೇಷ ತನಿಖಾ ದಳವು (ಎಸ್ಐಟಿ) ಸೋಮವಾರ ಬಂಧಿಸಿದೆ.

ಬೆಂಗಳೂರು (ಜು.16): ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಎನ್ನಲಾದ ಭಾರತ ಸಂಚಾರ ನಿಗಮದ (ಬಿಎಸ್ಎನ್ಎಲ್‌) ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ವಿಶೇಷ ತನಿಖಾ ದಳವು (ಎಸ್ಐಟಿ) ಸೋಮವಾರ ಬಂಧಿಸಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣ ಮೂಲದ ಕಾಕಿ ಶ್ರೀನಿವಾಸ್ ರಾವ್(Kaki Srinivas Rao) ಬಂಧಿತನಾಗಿದ್ದು, ಎರಡು ವರ್ಷಗಳಿಂದ ಯಶವಂತಪುರ ಬಳಿ ತನ್ನ ಕುಟುಂಬದ ಜತೆ ಆತ ನೆಲೆಸಿದ್ದ. ಈ ಕೃತ್ಯ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡು ದೇಶ ಸಂಚಾರ ಹೋಗಿದ್ದ ಶ್ರೀನಿವಾಸ್‌ ನಗರಕ್ಕೆ ಮರಳಿದ ಕೂಡಲೇ ಎಸ್‌ಐಟಿ(SIT) ಬಂಧಿಸಿದೆ. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಆರೋಪಿಯನ್ನು 9 ದಿನ ಕಸ್ಟಡಿಗೆ ಪಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ತನಿಖೆ ವೇಳೆ ಹಣ ಜಪ್ತಿ ಮಾಡುವ ವಿಚಾರಕ್ಕೆ ಎಸ್‌ಐಟಿ-ಇ.ಡಿ ನಡುವೆ. ತಿಕ್ಕಾಟ

ನಿಗಮದ 10 ಕೋಟಿ ರು. ಗುಳುಂ:

ಆರೋಪಿ ಶ್ರೀನಿವಾಸ್ ವೃತ್ತಿಯಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿದ್ದು, ಬೆಂಗಳೂರು ವಲಯದ ಬಿಎಸ್‌ಎನ್‌ಎಲ್‌(BSNL benglauru)ನಲ್ಲಿ ಆತನ ಪತ್ನಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೈದರಾಬಾದ್‌ ನಗರದಲ್ಲಿ ಡಿಜಿಟಲ್ ಕಂಪನಿಯಲ್ಲಿ ಗ್ರಾಫಿಕ್ಸ್ ಡಿಸೈನರ್ ಆಗಿದ್ದ ಶ್ರೀನಿವಾಸ್, ಸುಲಭವಾಗಿ ಹಣ ಸಂಪಾದನೆಗೆ ಅಡ್ಡದಾರಿ ತುಳಿದಿದ್ದ. ಹಲವು ವರ್ಷಗಳಿಂದ ಹೈದರಾಬಾದ್‌ನ ಸತ್ಯನಾರಾಯಣ್ ವರ್ಮಾನ ಜತೆ ಆತನಿಗೆ ಸ್ನೇಹವಿತ್ತು. ಇದೇ ಗೆಳೆತನದಲ್ಲೇ ವರ್ಮಾನ ಅಕ್ರಮ ಹಣ ವರ್ಗಾವಣೆ ದಂಧೆಗೆ ಶ್ರೀನಿವಾಸ್ ಸಾಥ್ ಕೊಟ್ಟಿದ್ದ. ಎರಡು ವರ್ಷಗಳ ಹಿಂದೆ ವಾಲ್ಮೀಕಿ ನಿಗಮ(Valmiki corporation scam)ದ ಮಾದರಿಯಲ್ಲೇ ಛತ್ತೀಸ್‌ಗಢ ರಾಜ್ಯದ ಕೃಷಿ ಅಭಿವೃದ್ಧಿ ಮಂಡಳಿಯಲ್ಲಿ 14 ಕೋಟಿ ರು. ಹಣ ದೋಚಿದ್ದ ಪ್ರಕರಣದಲ್ಲಿ ವರ್ಮಾ ಜತೆ ಶ್ರೀನಿವಾಸ್ ಕೂಡ ಜೈಲು ಸೇರಿದ್ದ. ಕಳೆದ ಅಕ್ಟೋಬರ್‌ನಲ್ಲಿ ಛತ್ತೀಸ್‌ಗಢದ ರಾಯಪುರ ಜೈಲಿನಿಂದ ಜಾಮೀನು ಪಡೆದು ಬಿಡುಗಡೆಗೊಂಡ ನಂತರ ಬೆಂಗಳೂರಿಗೆ ಮರಳಿದ ಶ್ರೀನಿವಾಸ್, ಇದಾದ ಕೆಲವೇ ದಿನಗಳಲ್ಲಿ ‘ಆಪರೇಷನ್ ವಾಲ್ಮೀಕಿ’ ಶುರು ಮಾಡಿದ್ದ ಎನ್ನಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ 89 ಕೋಟಿ ರು. ಹಣ ಅಕ್ರಮ ವರ್ಗಾವಣೆಯಲ್ಲಿ ಹೈದರಾಬಾದ್‌ ಗ್ಯಾಂಗ್‌ನ ಮಾಸ್ಟರ್ ಮೈಂಡ್ ಸತ್ಯನಾರಾಯಣ್ ವರ್ಮಾನ ಸಹಚರನಾಗಿ ಶ್ರೀನಿವಾಸ್ ಕೆಲಸ ಮಾಡಿದ್ದ. ನಿಗಮದಲ್ಲಿ ದೋಚಿದ್ದ ಹಣವನ್ನು ನಗದು ಮಾಡಿಕೊಳ್ಳಲು ಹೈದರಾಬಾದ್ ಗ್ಯಾಂಗ್ ಹವಾಲಾ ಹಾದಿ ಹಿಡಿದಿತ್ತು. ಆಗ ನಿಗಮದ ಹಣವನ್ನು ಹವಾಲಾ ಮೂಲಕ ನಗದು ರೂಪದಲ್ಲಿ ಜೇಬಿಗಿಳಿಸಿಕೊಳ್ಳಲು ಶ್ರೀನಿವಾಸ್ ಪ್ರಮುಖ ಪಾತ್ರ ವಹಿಸಿದ್ದ ಸಂಗತಿಯನ್ನು ವರ್ಮಾ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದ. ಆದರೆ ವರ್ಮಾ ಬಂಧನದ ಬಳಿಕ ಶ್ರೀನಿವಾಸ್ ನಾಪತ್ತೆಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ ಶ್ರೀನಿವಾಸ್‌ಗೆ ನಿಗಮದ 10 ಕೋಟಿ ರು. ಹಣ ಸಂದಾಯವಾಗಿದ್ದ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಆ ಹಣವನ್ನು ಹವಾಲಾ ಮೂಲಕ ಆತ ನಗದು ಮಾಡಿಕೊಂಡಿದ್ದ. ಆದರೆ ಈಗ ತನಗೆ ಯಾವುದೇ ಹಣ ಬಂದಿಲ್ಲವೆಂದು ಆತ ಹೇಳುತ್ತಿದ್ದಾನೆ. ಹೀಗಾಗಿ ಆತನಿಂದ ನಿಗಮದ ಹಣ ಜಪ್ತಿ ಪ್ರಕ್ರಿಯೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಲ್ಮೀಕಿ ನಿಗಮ ಹಗರಣ; ಇಡಿ ವಿಚಾರಣೆ ವೇಳೆ ನಾಗೇಂದ್ರ ಮೌನ; ದದ್ದಲ್ ಇನ್ನೂ ನಾಪತ್ತೆ!

ಛತ್ತೀಸ್‌ಗಢದಲ್ಲೂ ಜೈಲಿಗೆ ಹೋಗಿದ್ದ!

2 ವರ್ಷಗಳ ಹಿಂದೆ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ರೀತಿಯಲ್ಲೇ ಛತ್ತೀಸ್‌ಗಢದ ಕೃಷಿ ಅಭಿವೃದ್ಧಿ ಮಂಡಳಿಯಲ್ಲಿ 14 ಕೋಟಿ ರು. ದೋಚಲಾಗಿತ್ತು. ಆ ಕೇಸ್‌ನಲ್ಲಿ ಶ್ರೀನಿವಾಸರಾವ್‌ ಜೈಲಿಗೆ ಹೋಗಿದ್ದ. ಕಳೆದ ಅಕ್ಟೋಬರ್‌ನಲ್ಲಷ್ಟೇ ಜಾಮೀನು ಪಡೆದು ಹೊರಬಂದಿದ್ದ. ಬಳಿಕ ವಾಲ್ಮೀಕಿ ನಿಗಮದ ಕೇಸ್‌ಗೆ ಕೈ ಹಾಕಿದ್ದ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ