ವಕ್ಫ್ ಬೋರ್ಡ್‌ ಅಧ್ಯಕ್ಷ ಯೂಸುಫ್ ಕೊರೋನಾ ಸೋಂಕಿನಿಂದ‌ ನಿಧನ!

Published : Aug 08, 2020, 10:55 AM IST
ವಕ್ಫ್ ಬೋರ್ಡ್‌ ಅಧ್ಯಕ್ಷ ಯೂಸುಫ್ ಕೊರೋನಾ ಸೋಂಕಿನಿಂದ‌ ನಿಧನ!

ಸಾರಾಂಶ

ವಕ್ಫ್ ಬೋರ್ಡ್‌ ಅಧ್ಯಕ್ಷ ಮುಹ​ಮದ್‌ ಯೂಸುಫ್‌ ನಿಧನ| ಕಿಡ್ನಿ ಸಮಸ್ಯೆಗೆ 15 ದಿನದಿಂದ ಚಿಕಿತ್ಸೆ ಪಡೆ​ಯು​ತ್ತಿ​ದ್ದ​ರು

ಬೆಂಗಳೂರು(ಆ.08): ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ವಕ್ಫ್ ಬೋರ್ಡ್‌ ಅಧ್ಯಕ್ಷ ಜನಾಬ್‌ ಡಾ.ಮುಹಮ್ಮದ್‌ ಯೂಸುಫ್‌ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ನಿಧನರಾಗಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದ ಮಣಿಪಾಲ್‌ ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಮುಹಮ್ಮದ್‌ ಯೂಸುಫ್‌ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಯೂಸುಫ್‌ ಅವರನ್ನು ಈ ಮೊದಲು ಕುಟುಂಬ ಸದಸ್ಯರು ಕನಕಪುರ ರಸ್ತೆಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಂಡುಬರದ ಹಿನ್ನೆಲೆಯಲ್ಲಿ ಅವರನ್ನು ಕಳೆದ 10 ದಿನಗಳ ಹಿಂದೆ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಲ್ಪ ಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ಮುಹಮ್ಮದ್‌ ಯೂಸುಫ್‌ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ನಸುಕಿನ ಜಾವ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಸಂಸ್ಕಾರ ಬೆಂಗಳೂರಿನ ಗೋವಿಂದಪುರದಲ್ಲಿ ಅವರೇ ನಿರ್ಮಿಸಿರುವ ಮುಝಮ್ಮಿಲ್‌ ಮಸೀದಿಯ ಕಬರ್‌ಸ್ಥಾನದಲ್ಲಿ ನಡೆಯಲಿದೆ ಎಂದು ಸದಸ್ಯ ಎನ್‌.ಕೆ.ಎಂ. ಶಾಫಿ ಸ ಆದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂ ಸೇರಿ ಗಣ್ಯರ ಸಂತಾಪ: ಮುಹಮ್ಮದ್‌ ಯೂಸುಫ್‌ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಯೂಸುಫ್‌ ಅವರ ನಿಧನದ ಸುದ್ದಿ ದುಃಖಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ, ಬಂದುಬಳಗದ ಎಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಗಣ್ಯರು ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮುಡಾ ಕೇಸ್‌ನಲ್ಲಿ ಸಿಎಂ ವಿರುದ್ಧದ ತನಿಖೆಗೆ ವಿಳಂಬ ಲೋಕಾಯುಕ್ತ ಪೊಲೀಸರ ವಿರುದ್ಧ ಕೋರ್ಟ್‌ ಗರಂ
ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ