ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಯವ್ರು ರಾಜಕೀಯ ಮಾಡುತ್ತಿದ್ದಾರೆ : ಗೃಹ ಸಚಿವ ಪರಮೇಶ್ವರ್

Published : Nov 03, 2024, 10:19 AM IST
ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿಯವ್ರು ರಾಜಕೀಯ ಮಾಡುತ್ತಿದ್ದಾರೆ : ಗೃಹ ಸಚಿವ ಪರಮೇಶ್ವರ್

ಸಾರಾಂಶ

ಯಾವುದೇ ಜಿಲ್ಲೆ ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ಕೊಟ್ಟಿದ್ರೆ ಹಿಂತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.  ನಿನ್ನೆ ಸಹ ಸೂಚನೆ ಕೊಟ್ಟಿದ್ದಾರೆ. ಅಲ್ಲಿಗೆ ಇದೆಲ್ಲ ಸ್ಥಗಿತ ಆಗಲಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು

ಬೆಂಗಳೂರು (ನ.3): ಯಾವುದೇ ಜಿಲ್ಲೆ ವಕ್ಫ್ ಬೋರ್ಡ್‌ನಿಂದ ರೈತರಿಗೆ ನೋಟಿಸ್ ಕೊಟ್ಟಿದ್ರೆ ಹಿಂತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.  ನಿನ್ನೆ ಸಹ ಸೂಚನೆ ಕೊಟ್ಟಿದ್ದಾರೆ. ಅಲ್ಲಿಗೆ ಇದೆಲ್ಲ ಸ್ಥಗಿತ ಆಗಲಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.

ವಕ್ಫ್ ಬೋರ್ಡ್ ಆಸ್ತಿ ವಿವಾದ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ವಕ್ಫ್ ವಿಚಾರದಲ್ಲಿ ಬಿಜೆಪಿಯವ್ರು ರಾಜಕೀಯ ದುರುದ್ದೇಶಕ್ಕೆ ಆರೋಪ ಮಾಡ್ತಾರೆ. ಪ್ರತಿಭಟನೆ ಮಾಡೋದು ಅವರ ಹಕ್ಕು ಮಾಡಿಕೊಳ್ಳಲಿ. ಆದ್ರೆ ನಾವು ಈ ಸಂಬಂಧ ಏನು ಕ್ರಮ ತಗೋಬೇಕೋ ಅದನ್ನು ತಗೊಳ್ತಿವಿ. ಬಿಜೆಪಿಯವ್ರು ರೈತರ ಪರವಾಗಿ ಮೂರು ಕೃಷಿ ಕಾಯ್ದೆ ಮಂಡಿಸಿದ್ರು ಅದರಿಂದ ಏನೆಲ್ಲ ತೊಂದರೆ ಅಯ್ತು, ಎಷ್ಟು ರೈತರು ಸತ್ರು, ಬಿಜೆಪಿಯವರ ಸ್ಪಂದನೆ ಹೇಗಿತ್ತು ಅಂತ ನೋಡಿದ್ರೆ ರೈತರ ಬಗ್ಗೆ ಅವರ ಬದ್ಧತೆ ಏನು ಅನ್ನೋದು ಗೊತ್ತಾಗುತ್ತೆ ಎಂದು ತಿರುಗೇಟು ನೀಡಿದರು.

ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಮುಸ್ಲಿಮರಿಂದ 13 ದಿನಗಳಲ್ಲಿ 3.66 ಕೋಟಿಗೂ ಇಮೇಲ್!

ವಕ್ಫ್‌ನಿಂದ ತಾತ್ಕಾಲಿಕ ನೋಟಿಸ್ ಕೊಡಲಾಗಿತ್ತು ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು,  ಇದು ತಾತ್ಕಾಲಿಕ ಅಂತ ಏನಿಲ್ಲ, ನೊಟೀಸ್ ಕೊಟ್ಟಿದ್ದಾರೆ ವಾಪಸ್ ತಗೋತಿವಿ ಅಂದ ಮೇಲೆ ಇಲ್ಲಿಗೆ ಮುಗಿತು. ಅದು ತಾತ್ಕಾಲಿಕ ಆಗಲಿ, ಪರ್ಮನೆಂಟ್ ಆಗಲಿ ವಾಪಸ್ ಪಡೆದಿದ್ದಾಯ್ತಲ್ಲ? ಬಿಜೆಪಿಯವರು ಪ್ರತಿಭಟನೆ ಮಾಡಿ ರಾಜಕೀಯಕ್ಕೆ ಈ ವಿಚಾರ ಬಳಸಿಕೊಳ್ತಾರೆ ಏನು ಮಾಡೋಕೆ ಆಗುತ್ತೆ? ನಾವು ಏನು ಮಾಡಬಹುದು ಅದನ್ನು ಮಾಡುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!