ಬಿಸಿಲಿಗೆ ಬ್ರೇಕ್, ರಾಜ್ಯದಲ್ಲಿ 7 ದಿನಗಳ ಕಾಲ ಮಳೆ ಅಬ್ಬರ! ಕರಾವಳಿ ಜಿಲ್ಲೆಯಲ್ಲಿ ಮೋಡ ವಾತಾವರಣ

Published : May 07, 2026, 10:03 AM IST
Karnataka Weather

ಸಾರಾಂಶ

ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದ ನಡುವೆ, ಹವಾಮಾನ ಇಲಾಖೆಯು ಮುಂದಿನ ಏಳು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಭಾರೀ ಮಳೆಯ ಎಚ್ಚರಿಕೆಯನ್ನೂ ನೀಡಲಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು, ಉಷ್ಣ ವಾತಾವರಣ ಜನರನ್ನು ಕಂಗೆಡಿಸಿದೆ. ಆದರೆ ಇದರ ನಡುವೆಯೇ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ ಸುರಿಯಬಹುದೆಂದು ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿದರೂ ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ಇದರ ಪರಿಣಾಮವಾಗಿ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

7 ದಿನಗಳ ಹವಾಮಾನ ಮುನ್ಸೂಚನೆ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕೂಡ ಮುಂದಿನ  7 ದಿನಗಳ ಹವಾಮಾನ ಮುನ್ಸೂಚನೆ ಹಾಗೂ ಎಚ್ಚರಿಕೆಗಳನ್ನು ಪ್ರಕಟಿಸಿದೆ. ಅದರ ಪ್ರಕಾರ, ರಾಜ್ಯದಾದ್ಯಂತ ಹಲವೆಡೆ ಗುಡುಗು, ಸಿಡಿಲು ಹಾಗೂ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಕರಾವಳಿ ಕರ್ನಾಟಕ ಭಾಗಗಳಲ್ಲಿ ಇಂದಿನಿಂದ ಮೇ 12ರವರೆಗೆ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳೂರು, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ

ಉತ್ತರ ಒಳನಾಡು ಕರ್ನಾಟಕದಲ್ಲಿಯೂ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿಯೂ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.

ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಇಂದು ಹಾಗೂ ಮೇ 9ರಿಂದ 12ರವರೆಗೆ ಕೆಲವೆಡೆ ಗುಡುಗು, ಸಿಡಿಲು ಮತ್ತು ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮೇ 7 ಮತ್ತು 8ರಂದು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ಬಿಸಿಲಿನ ತಾಪಮಾನ ಹೆಚ್ಚಳದ ನಡುವೆಯೇ ಸ್ಥಳೀಯ ವಾತಾವರಣದ ಬದಲಾವಣೆಯಿಂದ ಗುಡುಗು ಸಹಿತ ಮಳೆಯಾಗುತ್ತಿದೆ. ಇದರಿಂದ ಕೆಲವೆಡೆ ಉಷ್ಣಾಂಶದಲ್ಲಿ ಸ್ವಲ್ಪ ಮಟ್ಟಿನ ಇಳಿಕೆಯಾಗುವ ಸಾಧ್ಯತೆ ಇದ್ದರೂ, ಸಂಪೂರ್ಣವಾಗಿ ಮಳೆಗಾಲದ ವಾತಾವರಣ ಇನ್ನೂ ಆರಂಭವಾಗಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಡುಗು-ಸಿಡಿಲಿನ ವೇಳೆ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಬಲವಾದ ಗಾಳಿ ಹಾಗೂ ಮಳೆಯ ಸಮಯದಲ್ಲಿ ಮರಗಳ ಕೆಳಗೆ ನಿಲ್ಲದೇ, ವಿದ್ಯುತ್ ಕಂಬಗಳು ಮತ್ತು ನೀರಿನ ಪ್ರದೇಶಗಳಿಂದ ದೂರವಿರಲು ಸಲಹೆ ನೀಡಲಾಗಿದೆ. ರೈತರು ಹಾಗೂ ಮೀನುಗಾರರು ಸಹ ಹವಾಮಾನ ಮುನ್ಸೂಚನೆ ಗಮನಿಸಿ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳ ತಾಪಮಾನ

ಬೆಂಗಳೂರಿನಲ್ಲಿ ಪ್ರಸ್ತುತ 24°C ಉಷ್ಣಾಂಶ ದಾಖಲಾಗಿದೆ. ಗರಿಷ್ಠ 33° C  ಉಷ್ಣಾಂಶ ದಾಖಲು ಸಾಧ್ಯತೆ . ಕನಿಷ್ಠ 23 °Cಉಷ್ಣಾಂಶ ದಾಖಲು ಸಾಧ್ಯತೆ ಇದೆ.

ಬೆಂಗಳೂರು ಗ್ರಾಮಾಂತರ

ಗರಿಷ್ಠ:33°C

ಕನಿಷ್ಠ : 23°C

ಪ್ರಸ್ತುತ:24°C

ಮೈಸೂರು

34°C

24 °C

ಪ್ರಸ್ತುತ:25°C

ಮಂಡ್ಯ

34°C

24°C

ಪ್ರಸ್ತುತ: 25°C

ಚಾಮರಾಜನಗರ

33°C

24°C

ಪ್ರಸ್ತುತ:25°C

ಹಾಸನ

33°C

22 °C

ಪ್ರಸ್ತುತ:24°C

ಕೊಡಗು

30°C

21 °C

ಪ್ರಸ್ತುತ:23°C

ಚಿಕ್ಕಮಗಳೂರು

30°C

21°C

ಪ್ರಸ್ತುತ:23°C

ಶಿವಮೊಗ್ಗ

36°C

24°C

ಪ್ರಸ್ತುತ: 27°C

ದಾವಣಗೆರೆ

36 °C

25°C

ಪ್ರಸ್ತುತ:28°C

ಚಿತ್ರದುರ್ಗ

36°C

25°C

ಪ್ರಸ್ತುತ:27°C

ತುಮಕೂರು

34°C

23°C

ಪ್ರಸ್ತುತ:25°C

ರಾಮನಗರ

34°C

24°C

ಪ್ರಸ್ತುತ:26°C

****

ಕೋಲಾರ

33°C

23°C

ಪ್ರಸ್ತುತ:,24°C

ಚಿಕ್ಕಬಳ್ಳಾಪುರ

33°C

22°C

ಪ್ರಸ್ತುತ:24°C

ಬಳ್ಳಾರಿ

38°C

27°C

ಪ್ರಸ್ತುತ:29°C

ಕೊಪ್ಪಳ

37°C

27°C

ಪ್ರಸ್ತುತ:29°C

ರಾಯಚೂರು

38°C

28°C

ಪ್ರಸ್ತುತ:30°C

ಯಾದಗಿರಿ

38°C

27°C

ಪ್ರಸ್ತುತ 29°C

ಕಲಬುರಗಿ

37°C

27°C

ಪ್ರಸ್ತುತ:30°C

ಬೀದರ್

34°C

25°C

ಪ್ರಸ್ತುತ: 29°C

ವಿಜಯಪುರ

36*C

27°C

ಪ್ರಸ್ತುತ:31°C

ಬಾಗಲಕೋಟೆ

36°C

27°C

ಪ್ರಸ್ತುತ:30°C

ಬೆಳಗಾವಿ

34°C

23°C

ಪ್ರಸ್ತುತ:26°C

ಧಾರವಾಡ

34°C

24°C

ಪ್ರಸ್ತುತ:27°C

ಗದಗ

35°C

25°C

ಪ್ರಸ್ತುತ:28°C

ಹಾವೇರಿ

36 °C

24°C

ಪ್ರಸ್ತುತ:27°C

ಉತ್ತರ ಕನ್ನಡ

33°C

24°C

ಪ್ರಸ್ತುತ:27

ದಕ್ಷಿಣ ಕನ್ನಡ

36°C

26°C

ಪ್ರಸ್ತುತ:28°C

ಉಡುಪಿ

33°C

27°C

ಪ್ರಸ್ತುತ:29°C

ವಿಜಯನಗರ

40°C

27°C

ಪ್ರಸ್ತುತ:29°C

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

GBA towing scheme failure: ಶುರುವಾದ ಒಂದೇ ತಿಂಗಳಲ್ಲಿ ಹಳ್ಳ ಹಿಡಿದ 'ಜಿಬಿಎ' ಟೋಯಿಂಗ್ ಯೋಜನೆ! ಟ್ರಾಫಿಕ್ ಕಿರಿಕಿರಿ ಇನ್ನಷ್ಟು ಹೆಚ್ಚುವ ಭೀತಿ!
ಏಡ್ಸ್‌ ಪೀಡಿತನ ವಿಚ್ಛೇದನ ಆದೇಶ ಹೈಕೋರ್ಟಲ್ಲಿ ರದ್ದು ! ಏನಿದು ಪ್ರಕರಣ?