ರಾಜ್ಯದಲ್ಲಿ ‘ಮಳೆ ಭಾಗ್ಯ' : ಯಾರಿಗಿದೆ? ಯಾರಿಗಿಲ್ಲ?

Published : Mar 27, 2019, 05:43 PM ISTUpdated : Mar 27, 2019, 06:09 PM IST
ರಾಜ್ಯದಲ್ಲಿ ‘ಮಳೆ ಭಾಗ್ಯ' : ಯಾರಿಗಿದೆ? ಯಾರಿಗಿಲ್ಲ?

ಸಾರಾಂಶ

ಬಿಸಿಲಿನಲ್ಲಿ ಬಳಲಿ ಬೆಂಡಾಗಿರುವ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬರುವ ಸಾಧ್ಯತೆ; ಕಲಬುರಗಿಯಲ್ಲಿ 38 ಡಿಗ್ರಿಗೇರಿದ ಬಿಸಿಲಿನ ಝಳ  

ಬೆಂಗಳೂರು: ಅಬ್ಬಬ್ಬಾ ಏನ್ ಬಿಸಿಲು? ಇನ್ನು ಮಾರ್ಚ್ ಮುಗಿದಿಲ್ಲ, ಏಪ್ರಿಲ್, ಮೇ ಹೇಗೇನೋ?  ರಾಜ್ಯದಲ್ಲೆಡೆ ಜನ ಗೋಳು ಹೊಯ್ಯುತ್ತಿರುವುದು ಸೆಖೆಯ ಬಗ್ಗೆನೇ.

ಇದರೆಲ್ಲರ ನಡುವೆ, ಹವಾಮಾನ ಇಲಾಖೆಯಿಂದ ಮಳೆ ಬರುವ ಸುದ್ದಿ ಬಂದಿದೆ.  ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲ ಭಾಗಗಳಲ್ಲಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದೆ.

 ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜೆಲ್ಲೆಗಳು, ಮಲೆನಾಡು ಭಾಗ ಹಾಗೂ ಅದಕ್ಕೆ ಹೊಂದಿಕೊಂಡಿರುವ ಒಳನಾಡು ಜಿಲ್ಲೆಗಳಲ್ಲಿ ಲಘು ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 

ಇದನ್ನೂ ಓದಿ: ಬೆಂಗಳೂರಿಗರೇ ಎಚ್ಚರ : ನಿಮ್ಮ ಮನೆಗೂ ನೀರು ಪೂರೈಕೆ ನಿಲ್ಲಬಹುದು!

ಪಶ್ಚಿಮ ಘಟ್ಟದ ಚಿಕ್ಕಮಗಳೂರಿನಲ್ಲಿ ಬುಧವಾರ 28 ಡಿಗ್ರಿ ತಾಪಮಾನ ದಾಖಲಾಗಿದ್ದರೆ, ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಅತೀ ಹೆಚ್ಚು, ಅಂದರೆ 38 ಡಿಗ್ರಿ, ತಾಪಮಾನ ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ತಾಪಮಾನ 35 ಡಿಗ್ರಿಯನ್ನು ಮುಟ್ಟಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ