ಕೊರೋನಾ 2ನೇ ಅಲೆ ಹೆಚ್ಚಳದ ಮಧ್ಯೆ ಕರ್ನಾಟಕಕ್ಕೆ ಸಿಹಿ ಸುದ್ದಿ!

Published : Apr 04, 2021, 08:25 PM IST
ಕೊರೋನಾ 2ನೇ ಅಲೆ ಹೆಚ್ಚಳದ ಮಧ್ಯೆ ಕರ್ನಾಟಕಕ್ಕೆ ಸಿಹಿ ಸುದ್ದಿ!

ಸಾರಾಂಶ

ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದರ ಮಧ್ಯೆ ರಾಜ್ಯಕ್ಕೆ ಸಿಹಿಸುದ್ದಿಯೊಂದು ಸಿಕ್ಕಿದೆ. ಸಚಿವ ಸುಧಾಕರ್ ಅವರು ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರು, (ಏ.04) : ರಾಜ್ಯದಲ್ಲಿ ಕೊರೋನಾ ವೈರಸ್ ಹೆಚ್ಚಳದ ನಡುವೆಯೇ ರಾಜ್ಯಕ್ಕೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕಕ್ಕೆ ತುರ್ತಾಗಿ 15.25 ಲಕ್ಷ ಡೋಸ್ ಕೊರೋನಾ ಲಸಿಕೆ ಬರಲಿದೆ.

ಈ ಕುರಿತು ರಾಜ್ಯ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕಕ್ಕೆ ನಾಳೆ ಅಂದ್ರೆ ಏ.05ರಂದು ಎರಡು ಪ್ರತ್ಯೇಕ ಕಂತುಗಳಲ್ಲಿ ಒಟ್ಟು 15,25,500 ಡೋಸ್ ಕೊರೊನಾ ಲಸಿಕೆ ರವಾನೆಯಾಗಲಿದೆ. 

ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !

ಒಂದು ಕಂತಿನಲ್ಲಿ ರಸ್ತೆ ಮೂಲಕ 5,25,500 ಡೋಸ್ ಲಸಿಕೆ ಬೆಳಗಾವಿಗೆ ತಲುಪಲಿದ್ದು, ಮತ್ತೊಂದು ಕಂತಿನಲ್ಲಿ 10,00,000 ಡೋಸ್ ಲಸಿಕೆ ವಿಮಾನದ ಮೂಲಕ ಸೋಮವಾರ ಸಂಜೆ ಬೆಂಗಳೂರು ತಲುಪಲಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.

ಸದ್ಯ ರಾಜ್ಯ ಸರ್ಕಾರದ ಬಳಿ  7 ಲಕ್ಷ ಲಸಿಕೆಗಳು ದಾಸ್ತಾನು ಇವೆ. ನಿನ್ನೆ (ಶನಿವಾರ) 2.5 ಲಕ್ಷ ಜನರಿಗೆ ಲಸಿಕೆ ಹಾಕಲಾಗಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಇಲ್ಲ. ರಾಜ್ಯದ ಮನವಿ ಮೇರೆಗೆ ಕೇಂದ್ರವು ಲಸಿಕೆಗಳನ್ನು ತುರ್ತಾಗಿ ಪೂರೈಕೆ ಮಾಡುತ್ತಿದೆ ಎಂದು ರಾಜ್ಯ ಸರ್ಕಾರದಿಂದ ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ