
ಬೆಂಗಳೂರು(ಅ.28): ಕರ್ನಾಟಕ ಕನ್ನಡ ಬರಹಗಾರರ (Karnataka Writers Association) ಮತ್ತು ಪ್ರಕಾಶಕರ ಸಂಘ ನೀಡುವ 2020ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳಿಗೆ 'ಕನ್ನಡಪ್ರಭ' (Kananda Prabha) ಪುರವಣಿ ಸಂಪಾದಕ ಹಾಗೂ ಸಾಹಿತಿ ಗಿರೀಶ್ ರಾವ್ ಹತ್ವಾರ್(Girish Rao Hatwar)(ಜೋಗಿ), ಲೇಖಕಿ ಮಂಜುಳಾ ಹಿರೇಮಠ್(Manjula Hiremath) ಮತ್ತು ಪತ್ರಕರ್ತ ಲೇಖಕ ಜಿ.ಎನ್. ಮೋಹನ್(GN Mohan) ಅವರು ಆಯ್ಕೆಯಾಗಿದ್ದಾರೆ.
ಜೋಗಿ(Jogi) ಅವರ '108 ನಾಲ್ಕು ದಶಕದ ಕಥೆಗಳು' ಕೃತಿಗೆ ಸಂಘದ 'ಸಾಹಿತ್ಯ ರತ್ನ', ಮಂಜುಳಾ ಹಿರೇಮಠ್ ಅವರ 'ಗಾಯಗೊಂಡವರಿಗೆ' ಕೃತಿಗೆ 'ಚಿಗುರು' ಪ್ರಶಸ್ತಿ, ಮತ್ತು ಜಿ.ಎನ್. ಮೋಹನ್ ಅವರ 'ಬಹುರೂಪಿ' ಪ್ರಕಾಶನಕ್ಕೆ 'ಪುಸ್ತಕ ರತ್ನ' ಪ್ರಶಸ್ತಿ (Award) ಸಂದಿದೆ.
ಜೋಗಿ ವಿರಚಿತ ‘ಗಿರಿಜಾ ಪರಸಂಗ’ ಕೃತಿ ಲೋಕಾರ್ಪಣೆ
ಹತ್ತು ಜನ ತಜ್ಞ ತೀರ್ಪುಗಾರರಿಂದ ಬಂದ ಪ್ರಥಮ, ದ್ವಿತೀಯ ಪ್ರಾಶಸ್ತ್ಯದ ಗುಪ್ತ ಮತಗಳನ್ನು ಆಧರಿಸಿ ಪ್ರಶಸ್ತಿಗೆ ಆಯ್ಕೆ ನಡೆಸಲಾಗಿದೆ. ಡಿಸೆಂಬರ್ ಎರಡನೇ ವಾರದಲ್ಲಿ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರತಿ ಪ್ರಶಸ್ತಿಯು 10ನ ಸಾವಿರ ರು.ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ