ಬ್ಲಾಕ್ ಫಂಗಸ್ ಆತಂಕ : ಪತ್ತೆಯಾಗಲಿದೆ ವಾರಕ್ಕೆ 400 ಪ್ರಕರಣ

Kannadaprabha News   | Asianet News
Published : May 25, 2021, 08:17 AM IST
ಬ್ಲಾಕ್ ಫಂಗಸ್ ಆತಂಕ : ಪತ್ತೆಯಾಗಲಿದೆ  ವಾರಕ್ಕೆ 400 ಪ್ರಕರಣ

ಸಾರಾಂಶ

ಪ್ರತಿ ವಾರ 400ಕ್ಕೂ ಹೆಚ್ಚು ಜನ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಸೋಂಕಿಗೆ ತುತ್ತಾಗುವ ಅಂದಾಜು  ‘ಲೈಪೊಸೋಮಲ್‌ ಆ್ಯಂಫೋಟೆರಿಸಿನ್‌ ಬಿ’ ಔಷಧದ 20 ಸಾವಿರ ವಯಲ್‌ಗಳನ್ನು ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ರಾಜ್ಯ ಸರ್ಕಾರದಿಂದ ಹೈಕೋರ್ಟ್‌ಗೆ ಮಾಹಿತಿ

 ಬೆಂಗಳೂರು (ಮೇ.25):  ರಾಜ್ಯದಲ್ಲಿ ಪ್ರತಿ ವಾರ 400ಕ್ಕೂ ಹೆಚ್ಚು ಜನ ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್‌) ಸೋಂಕಿಗೆ ತುತ್ತಾಗುವ ಅಂದಾಜಿದೆ. ಇದರ ಚಿಕಿತ್ಸೆಗೆ ಅಗತ್ಯವಿರುವ ‘ಲೈಪೊಸೋಮಲ್‌ ಆ್ಯಂಫೋಟೆರಿಸಿನ್‌ ಬಿ’ ಔಷಧದ 20 ಸಾವಿರ ವಯಲ್‌ಗಳನ್ನು ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ವಿವರಿಸಿದೆ.

ಕೊರೋನಾ ಸಂಬಂಧ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಸಲ್ಲಿಸಿರುವ ಲಿಖಿತ ಹೇಳಿಕೆಯಲ್ಲಿ ಸರ್ಕಾರ ಈ ವಿಷಯ ತಿಳಿಸಿದೆ.

ಬ್ಲ್ಯಾಕ್‌ ಆಯ್ತು ಈಗ ಅದಕ್ಕೂ ಭಯಾನಕ ವೈಟ್ ಫಂಗಸ್ ಕಾಟ : ಯಾರಿಗೆ ಅಪಾಯ ... 

ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಪತ್ತೆಯಾಗುತ್ತಿದ್ದಂತೆ ಮೇ 12ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕಪ್ಪು ಶಿಲೀಂಧ್ರ ರೋಗ ತಗುಲಿರುವವರಿಗೆ ಕನಿಷ್ಠ 10 ರಿಂದ 12 ದಿನ ಚಿಕಿತ್ಸೆ ನೀಡಬೇಕಾದ ಅಗತ್ಯವಿದೆ. ಈ ಚಿಕಿತ್ಸಾ ಅವಧಿಯಲ್ಲಿ ಪ್ರತಿ ರೋಗಿಗೆ 50 ವಯಲ್‌ಗಳು ಅಗತ್ಯವಿರಲಿವೆ. ಈ ಅಧಾರದಲ್ಲಿ 20 ಸಾವಿರ ವಯಲ್‌ಗಳನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದೆ.

ಅಲ್ಲದೆ, ಖಾಸಗಿ ಔಷಧ ತಯಾರಕರಾದ ಮೈಲಾನ್‌ ಫಾರ್ಮಾಸ್ಯುಟಿಕಲ್ಸ್‌ನಿಂದ 450, ಭಾರತ್‌ ಸೀರಮ್‌ ಮತ್ತು ವಾಕ್ಸಿನ್ಸ್‌ ಸಂಸ್ಥೆಯಿಂದ 600 ಸೇರಿ ಒಟ್ಟು 1,050 ವಯಲ್‌ಗಳನ್ನು ಕರ್ನಾಟಕ ರಾಜ್ಯ ಔಷಧ ಪೂರೈಕೆ ನಿಗಮದ ಮುಖಾಂತರ ಖರೀದಿಗೆ ಮುಂದಾಗಿದ್ದೇವೆ. ಮೇ 17ಕ್ಕೆ ಒಟ್ಟು 450 ವಯಲ್‌ಗಳನ್ನು ಸ್ವೀಕರಿಸಿದ್ದು ರಾಜ್ಯ ವಾರ್‌ರೂಮ್‌ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ ಎಂದು ಲಿಖಿತ ಹೇಳಿಕೆಯಲ್ಲಿ ತಿಳಿಸಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ