Published : Aug 02, 2025, 07:08 AM ISTUpdated : Aug 02, 2025, 09:26 PM IST

Karnatata Latest News Live: ಭಟ್ಕಳ ಅಳ್ವೇಕೋಡಿ ದೋಣಿ ದುರಂತ, ಮತ್ತಿಬ್ಬರು ಮೀನುಗಾರರ ಮೃತದೇಹ ಪತ್ತೆ!

ಸಾರಾಂಶ

ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸುತ್ತಲೂ ಹಲವೆಡೆ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಾಕ್ಷಿ ದೂರುದಾರ ನೀಡಿದ ಸೂಚನೆಯಂತೆ ಏಳು ಮತ್ತು ಎಂಟನೇ ಸ್ಥಳಗಳಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಗೆದು ಪರಿಶೀಲನೆ ನಡೆಸಿದರೂ ಯಾವುದೇ ಅವಶೇಷಗಳು ಲಭಿಸಿಲ್ಲ. ಏಳು ಮತ್ತು ಎಂಟನೆಯ ಸ್ಥಳಗಳು ನದಿ ಬದಿಯಲ್ಲಿಯೇ ಇದ್ದು ಮರಳು ಮಿಶ್ರಿತ ಮಣ್ಣಾದ ಕಾರಣ ಸುಲಭವಾಗಿ ಅಗೆದು ಕಾರ್ಯಾಚರಣೆ ನಡೆಸಲಾಯಿತು. ಶುಕ್ರವಾರವೂ ಕಾರ್ಯಾಚರಣೆ ವೀಕ್ಷಿಸಲು ಜನಜಂಗುಳಿ ಸೇರಿತ್ತು. ಅನಾಮಿಕ ಗುರುತಿಸಿದ 13 ಜಾಗಗಳ ಪೈಕಿ ಈವರೆಗೂ ಒಂದರಿಂದ ಎಂಟರವರೆಗಿನ ಸ್ಥಳಗಳು ನದಿ ಬದಿಯಲ್ಲಿಯೇ ಇವೆ. ಅಗೆದ ಪ್ರದೇಶಗಳಲ್ಲಿ ಕೇವಲ ಆರನೇಯ ಸ್ಥಳದಲ್ಲಿ ಮಾತ್ರ ಒಂದು ಅವಶೇಷ ಪತ್ತೆಯಾಗಿತ್ತು. ಶನಿವಾರ ಅಂದರೆ ಇಂದು ನದಿ ಬದಿಯಿಂದ ಮೇಲ್ಬಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಇರುವ ಒಂಬತ್ತನೆಯ ಸ್ಥಳದಿಂದ ಅಗೆಯುವ ಕಾರ್ಯ ಆರಂಭವಾಗಲಿದೆ.

Bhatkal Boat

09:26 PM (IST) Aug 02

ಭಟ್ಕಳ ಅಳ್ವೇಕೋಡಿ ದೋಣಿ ದುರಂತ, ಮತ್ತಿಬ್ಬರು ಮೀನುಗಾರರ ಮೃತದೇಹ ಪತ್ತೆ!

ಭಟ್ಕಳದ ತೆಂಗಿನಗುಂಡಿ ಬಳಿ ದೋಣಿ ಮಗುಚಿ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದ ಘಟನೆಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಜುಲೈ 30 ರಂದು ನಡೆದ ಈ ದುರಂತದಲ್ಲಿ ಇಬ್ಬರನ್ನು ರಕ್ಷಿಸಲಾಗಿತ್ತು.
Read Full Story

09:02 PM (IST) Aug 02

ತುಳು ಭಾಷೆಗೆ ಅಧಿಕೃತ ಸ್ಥಾನಮಾನ - ಸರ್ಕಾರದಿಂದ ಸಮಿತಿ ರಚನೆ, ಆಂಧ್ರಕ್ಕೆ ಹೊರಟ ಅಧ್ಯಯನ ತಂಡ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಈ ಸಮಿತಿ ಆಂಧ್ರಪ್ರದೇಶದಲ್ಲಿ ಅನುಸರಿಸಿದ ಮಾದರಿಯನ್ನು ಅಧ್ಯಯನ ಮಾಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ.  

Read Full Story

08:48 PM (IST) Aug 02

ಈ ಶಿಕ್ಷೆ ಪಾಠವಾಗಲಿ - ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆಗೆ ನಜ್ಮಾ ನಜೀರ್ ಪ್ರತಿಕ್ರಿಯೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪಿಗೆ ಕಾಂಗ್ರೆಸ್ ವಕ್ತಾರೆ ನಜ್ಮಾ ನಜೀನ್ ಚಿಕ್ಕನೇರಳೆ ಪ್ರತಿಕ್ರಿಯಿಸಿದ್ದಾರೆ. ಅಧಿಕಾರದ ಮದದಿಂದ ತೂರಾಡುವವರಿಗೆ ಈ ಶಿಕ್ಷೆ ಪಾಠವಾಗಲಿ ಎಂದು ಅವರು ಹೇಳಿದ್ದಾರೆ.
Read Full Story

08:37 PM (IST) Aug 02

ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಮತ್ತೊಬ್ಬ ಭೀಮ, ಭಾರೀ ಆರೋಪ ಮಾಡಿದ ದೂರುದಾರ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಬಗ್ಗೆ 'ಭೀಮ' ಎಂಬುವವರ ದೂರಿನ ತನಿಖೆ ನಡೆಯುತ್ತಿರುವಾಗಲೇ, ಹೊಸ ದೂರು ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಜಯನ್ ಟಿ, 15 ವರ್ಷಗಳ ಹಿಂದೆ ಹೆಣ್ಣು ಮಗಳ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಿದ್ದಾರೆ. 

Read Full Story

08:35 PM (IST) Aug 02

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಹೆಗ್ಗಳಿಕೆ, ಎಸಿಐನಿಂದ ಲೆವೆಲ್ 4 ಮಾನ್ಯತೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಗ್ರಾಹಕ ಅನುಭವದಲ್ಲಿ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್‌ನಿಂದ ಲೆವೆಲ್-4 ಮಾನ್ಯತೆ ಪಡೆದಿದೆ. ಫೆಬ್ರವರಿಯಲ್ಲಿ ಲೆವೆಲ್-3 ಪಡೆದಿದ್ದ ವಿಮಾನ ನಿಲ್ದಾಣವು ಈಗ ಮುಂದಿನ ಹಂತಕ್ಕೆ ಏರಿದೆ. 

Read Full Story

08:02 PM (IST) Aug 02

ಪೆನ್‌ಡ್ರೈವ್‌ ಹಂಚಿಕೆಯಿಂದ ಜೀವಾವಧಿ ಶಿಕ್ಷೆಯವರೆಗೆ - ಪ್ರಜ್ವಲ್‌ ರೇವಣ್ಣ ಪ್ರಕರಣದ ಟೈಮ್‌ಲೈನ್‌!

ಈ ಪ್ರಕರಣವು 2021 ರಲ್ಲಿ ಹಾಸನದ ಗನ್ನಿಕಾಡಾದ ಫಾರ್ಮ್‌ಹೌಸ್‌ನಲ್ಲಿ ಮತ್ತು ಬೆಂಗಳೂರಿನ ಪ್ರಜ್ವಲ್ ಅವರ ನಿವಾಸದಲ್ಲಿ ನಡೆದ ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದೆ.

 

Read Full Story

08:01 PM (IST) Aug 02

14 ಲಕ್ಷ ರೂ ಪರಿಹಾರ ಪಾವತಿಸದ ಪುತ್ತೂರು ಕಮಿಷನರ್ ಕಚೇರಿಯ ಸೊತ್ತು ಜಪ್ತಿಗೆ ಕೋರ್ಟ್ ಆದೇಶ

ಮಾಣಿ-ಮೈಸೂರು ರಾಜ್ಯ ಹೆದ್ದಾರಿ 88ರ ರಸ್ತೆ ಅಗಲೀಕರಣಕ್ಕೆ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡದ ಕಾರಣ ಪುತ್ತೂರಿನ ಸಹಾಯಕ ಆಯುಕ್ತರ ಕಚೇರಿಯ ಸೊತ್ತುಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶಿಸಿದೆ. ಭೂಮಾಲಕ ಶಿವಶಂಕರ ಭಟ್ ಅವರಿಗೆ ನ್ಯಾಯಾಲಯದ ಆದೇಶದಂತೆ 14,93,438 ರೂ. ಪರಿಹಾರ ನೀಡಬೇಕಿತ್ತು.
Read Full Story

07:43 PM (IST) Aug 02

ಮಾಡಿದ್ದುಣ್ಣೋ ಮಾರಾಯ, ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Prajwal Revanna Case Judgement: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿಗೆ ಕಾಂಗ್ರೆಸ್ 'ಮಾಡಿದ್ದುಣ್ಣೋ ಮಾರಾಯ' ಎಂದು ಪ್ರತಿಕ್ರಿಯಿಸಿದೆ. ನ್ಯಾಯಾಲಯವು 11.5 ಲಕ್ಷ ದಂಡವನ್ನೂ ವಿಧಿಸಿದೆ.

Read Full Story

07:35 PM (IST) Aug 02

ಕರ್ನಾಟಕಕ್ಕೆ ಏಮ್ಸ್‌ ಇನ್ನೂ ಅನುಮೋದನೆ ಸಿಕ್ಕಿಲ್ಲ ಎಂದ ಕೇಂದ್ರ ಸರ್ಕಾರ!

ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ರಾಜ್ಯ ಸರ್ಕಾರ ಪದೇ ಪದೇ ಮನವಿ ಮಾಡಿದ್ದರೂ, ಕೇಂದ್ರದಿಂದ ಇನ್ನೂ ಸ್ಪಂದನೆ ಸಿಕ್ಕಿಲ್ಲ. 

Read Full Story

07:01 PM (IST) Aug 02

ಪ್ರಜ್ವಲಿಸಲು ಸಹಕರಿಸಿದವರಿಗೆ ಶಿಕ್ಷೆಯಿಲ್ಲವೇ? ಯುವರ್ ಆನರ್, ಪ್ರಕಾಶ್ ರೈ ಪ್ರಶ್ನೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯಾದರೂ, ಅಪರಾಧ ಮುಚ್ಚಿಟ್ಟವರಿಗೆ ಶಿಕ್ಷೆಯಾಗದಿರುವುದನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ. 

Read Full Story

06:35 PM (IST) Aug 02

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ - ನಟ ಚೇತನ್ ಪ್ರತಿಕ್ರಿಯೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿನ ಕುರಿತು ನಟ ಚೇತನ್ ಕುಮಾರ್ ಮತ್ತು ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆ ಪುನಃಸ್ಥಾಪನೆಯಾಗಿದೆ ಎಂದು ಚೇತನ್ ಹೇಳಿದ್ದಾರೆ.

Read Full Story

06:31 PM (IST) Aug 02

ಕೊನೆ ಉಸಿರು ಇರೋ ತನಕ ಪ್ರಜ್ವಲ್ ರೇವಣ್ಣ ಹೊರಬರಲ್ಲ, ವಿಡಿಯೋ ಹರಿಬಿಟ್ಟವರ ಬಗ್ಗೆ ಗೊತ್ತಾಗಿದೆ - ಎಸ್ಐಟಿ ಸ್ಪಷ್ಟನೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾ1ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಎಸ್ಐಟಿ ತಂಡವು ತನಿಖೆಯ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದೆ. ಸಂತ್ರಸ್ಥೆಯ ಸಹಕಾರದಿಂದ ನ್ಯಾಯ ದೊರಕಿದೆ ಎಂದು ಎಸ್ಐಟಿ ಮುಖ್ಯಸ್ಥರು ತಿಳಿಸಿದ್ದಾರೆ.

Read Full Story

06:25 PM (IST) Aug 02

ಮೆಟ್ರೋದಲ್ಲಿ ಲಿವರ್ ಸಾಗಣೆ ಮಾಡಿ, ರೋಗಿಯ ಜೀವ ಉಳಿಸಿದ ಸವಾಲು ಹೇಗಿತ್ತು? ಪ್ರತಿ ಹಂತದ ಮಾಹಿತಿ ಇಲ್ಲಿದೆ!

ಬೆಂಗಳೂರಿನಲ್ಲಿ ಮೆಟ್ರೋ ಮೂಲಕ ದಾನಿಯ ಅಂಗಾಂಗವನ್ನು ಸಾಗಿಸಿ ಯುವಕನಿಗೆ ಯಕೃತ್ ಕಸಿ ಮಾಡುವ ಮೂಲಕ ಜೀವದಾನ ನೀಡಲಾಗಿದೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋವನ್ನು ಬಳಸಲಾಯಿತು. ಲಿವರ್ ಸಾಗಣೆ ಪ್ರತಿ ಹೆಜ್ಜೆ ಹೇಗಿತ್ತು ನೋಡಿ…

Read Full Story

06:17 PM (IST) Aug 02

ಯಾವುದೇ ವಿಡಿಯೋದಲ್ಲಿ ಮುಖ ತೋರಿಸದೇ ಇದ್ದರೂ ಪ್ರಜ್ವಲ್‌ ರೇವಣ್ಣ ಸಿಕ್ಕಿಬಿದ್ದಿದು ಹೇಗೆ?

ಹೆಚ್ಚಿನ ವೀಡಿಯೊಗಳನ್ನು ಪ್ರಜ್ವಲ್ ಸ್ವತಃ ತಮ್ಮ ಬಲಗೈಯಿಂದ ಚಿತ್ರೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ತಂಡವು ಜಪಾನ್ ಮತ್ತು ಟರ್ಕಿಯಂತಹ ದೇಶಗಳಲ್ಲಿ ಯಶಸ್ವಿಯಾಗಿ ಬಳಸಲಾಗುವ ತನಿಖಾ ತಂತ್ರಗಳನ್ನು ಎರವಲು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

 

Read Full Story

06:04 PM (IST) Aug 02

ವಿದೇಶದಿಂದ ಬರುತ್ತಲೇ ಪ್ರಜ್ವಲ್‌ ರೇವಣ್ಣಗೆ ಮುಟ್ಟಿ ನೋಡಿಕೊಳ್ಳುವಂತೆ ಬಿಗ್ ಶಾಕ್ ನೀಡಿತ್ತು SIT

ಲೋಕಸಭಾ ಚುನಾವಣೆಗೂ ಮುನ್ನ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಕಲೆ ವಿಡಿಯೋಗಳು ವೈರಲ್ ಆಗಿದ್ದವು. ವಿದೇಶದಿಂದ ಬಂದಿಳಿದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 

Read Full Story

05:22 PM (IST) Aug 02

ಕೆಆರ್‌ಐಡಿಎಲ್‌ನಲ್ಲಿ ₹72 ಕೋಟಿ ಹಗರಣದ ಕರಿನೆರಳು, ಸಿಎಂ ಕೊಪ್ಪಳ ಪ್ರವಾಸ ಮುಂದೂಡಿಕೆ

ಕೆಆರ್‌ಐಡಿಎಲ್‌ನಲ್ಲಿ ₹72 ಕೋಟಿ ಹಗರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕೊಪ್ಪಳ ಜಿಲ್ಲಾ ಪ್ರವಾಸ ಮುಂದೂಡಲಾಗಿದೆ. ಲೋಕಾಯುಕ್ತ ತನಿಖೆ ಆರಂಭವಾಗಿದ್ದು, ತನಿಖೆ ಪೂರ್ಣಗೊಂಡ ನಂತರವೇ ಸಿಎಂ ಭೇಟಿ ನೀಡುವ ಸಾಧ್ಯತೆ ಇದೆ.
Read Full Story

05:13 PM (IST) Aug 02

ಮಗನ ಬರ್ತ್‌ಡೇ ಸಂಭ್ರಮಿಸುವ ಖುಷಿಯಲ್ಲಿದ್ದ ತಾಯಿ ಭವಾನಿ ರೇವಣ್ಣಗೆ ಜೀವಾವಧಿ ಶಿಕ್ಷೆ ಕೇಳಿ ಶಾಕ್‌!

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ರೇವಣ್ಣ ಕುಟುಂಬಕ್ಕೆ ಆಘಾತ ಉಂಟು ಮಾಡಿದೆ. ಮಗನ ಜನ್ಮದಿನದ ಸಂಭ್ರಮದಲ್ಲಿದ್ದ ಕುಟುಂಬದ ಮೇಲೆ ದುಃಖದ ಮುಸುಕು ಆವರಿಸಿದೆ.
Read Full Story

05:12 PM (IST) Aug 02

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ - ನಟಿ ರಮ್ಯಾ ಹೇಳಿದ್ದು ಇಷ್ಟು

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಟಿ ರಮ್ಯಾ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

Read Full Story

04:16 PM (IST) Aug 02

Breaking ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಕೆ.ಆರ್. ನಗರದ ಮನೆಗೆಲಸದವಳ ಮೇಲಿನ ಅತ್ಯಾ1ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿದೆ. ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ತಿಳಿಯಿರಿ.

Read Full Story

03:00 PM (IST) Aug 02

ಶಾಲೆಗಳಿಗೆ ದೀರ್ಘಾವಧಿ ರಜೆ; ಮುಂದಿನ ವಾರ ಸತತವಾಗಿ 3 ದಿನ ರಜೆ ಸಂಭ್ರಮ!

ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಸಾಲು ಸಾಲು ರಜೆಗಳು ಬರುತ್ತಿವೆ. ಮುಂದಿನ ವಾರ ಕೇವಲ 4 ದಿನಗಳು ಮಾತ್ರ ಶಾಲೆಗಳು ನಡೆಯಲಿದ್ದು, 3 ದಿನಗಳು ರಜಾ ದಿನಗಳಾಗಿವೆ. ಯಾವ ದಿನ ಏಕೆ ರಜೆ? ಇದೆ ಎಂದು ಇಲ್ಲಿ ತಿಳಿದುಕೊಳ್ಳೋಣ.

Read Full Story

02:33 PM (IST) Aug 02

ಡಾ. ರಾಜ್ ಸಹೋದರಿ ನಾಗಮ್ಮ ನಿಧನ - ಅಂತಿಮ ದರ್ಶನ ಪಡೆ ಅಶ್ವಿನಿ ಪುನೀತ್‌ರಾಜಕುಮಾರ್, ಮಗಳು ವಂದಿತಾ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಹೋದರಿ ನಾಗಮ್ಮ ನಿಧನರಾಗಿದ್ದಾರೆ. ದೊಡ್ಡಗಾಜನೂರಿನಲ್ಲಿ ಅಂತ್ಯಕ್ರಿಯೆ ನೆರವೇರಿತು. ಅಶ್ವಿನಿ ಪುನೀತ್‌ರಾಜಕುಮಾರ್ ಮತ್ತು ಕುಟುಂಬದವರು ಅಂತಿಮ ದರ್ಶನ ಪಡೆದರು.
Read Full Story

01:26 PM (IST) Aug 02

ಕಣ್ಣೀರಿಟ್ಟ ಪಜ್ವಲ್, ಶಿಕ್ಷೆ ತಗ್ಗಿಸಲು ವಕೀಲರ ವಾದ, ಏನೆಲ್ಲಾ ಕಸರತ್ತು ಮಾಡಿದ್ರು ಗೊತ್ತಾ?

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾ1ಚಾರ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲಿ ಆರಂಭವಾಗಿದೆ. ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರ ವಾದಗಳು ಮುಕ್ತಾಯಗೊಂಡಿವೆ. ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ.

Read Full Story

12:55 PM (IST) Aug 02

ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಮರಗಳ ಮಾರಣ ಹೋಮ! ಬಿಬಿಎಂಪಿ ‌ಡಿಸಿಎಫ್ ಏನು ಮಾಡ್ತಿದೆ?

ರಾಹುಲ್ ಗಾಂಧಿ ಪ್ರತಿಭಟನೆಗೆ ಅಡ್ಡಿಯಾಗುವ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಮರಗಳನ್ನು ಕಡಿದು ಹಾಕಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದ್ದು, ಪರಿಸರ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read Full Story

12:23 PM (IST) Aug 02

ಅಪರಾಧಿ ಪ್ರಜ್ವಲ್ ರೇವಣ್ಣ ಶಿಕ್ಷೆಗೆ ಕೌನ್‌ಡೌನ್ ಸ್ಟಾರ್ಟ್, ಮಧ್ಯಾಹ್ನ 2.45ಕ್ಕೆ ತೀರ್ಪು ಎಂದ ಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾ1ಚಾರ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.  ಇಂದು ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2.45ಕ್ಕೆ ಪ್ರಕಟಿಸುವುದಾಗಿ ಹೇಳಿದೆ. ಹೀಗಾಗಿ ಇಂದು ಮಧ್ಯಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಗೊಳ್ಳಲಿದೆ.

Read Full Story

12:21 PM (IST) Aug 02

ಯಾದಗಿರಿ - ಮಕ್ಕಳನ್ನ ಅಂಗನವಾಡಿ ಕೇಂದ್ರದಲ್ಲಿ ಲಾಕ್ ಮಾಡಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ!

ಯಾದಗಿರಿ ಜಿಲ್ಲೆಯ ಬುದೂರ್ ಗ್ರಾಮದ ಅಂಗನವಾಡಿಯಲ್ಲಿ ಮಕ್ಕಳನ್ನು ಲಾಕ್ ಮಾಡಿ ಸಹಾಯಕಿ ಜಮೀನಿಗೆ ಹೋದ ಘಟನೆ. ಗ್ರಾಮಸ್ಥರಿಂದ ಆಕ್ರೋಶ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ.
Read Full Story

12:07 PM (IST) Aug 02

ಧರ್ಮಸ್ಥಳದಲ್ಲಿ ಶವ ಹೂತ ಕೇಸ್ ವಾಪಸ್ ಪಡೆಯಲು, ಅನಾಮಿಕ ವ್ಯಕ್ತಿಗೆ ಬೆದರಿಕೆ ಹಾಕಿದ ತನಿಖಾಧಿಕಾರಿ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ ತನಿಖಾ ತಂಡದ ಇನ್ಸ್‌ಪೆಕ್ಟರ್ ಒಬ್ಬರು ದೂರು ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ದೂರುದಾರರು ವಕೀಲರ ಮೂಲಕ ತಿಳಿಸಿದ್ದಾರೆ.

Read Full Story

11:32 AM (IST) Aug 02

Horrific Bengaluru Murder - ಹೆಣ್ಣು ಕೊಟ್ಟ ಮಾವನನ್ನೇ ಕೊಲೆ ಮಾಡಿದ ಅಳಿಯ, ಕಿರಿಮಗಳಿಂದ ಸಿಕ್ತು ತಾತನ ಹತ್ಯೆ ಸುಳಿವು!

ಬೆಂಗಳೂರಿನ ಕಾಡುಗೋಡಿಯಲ್ಲಿ ಮಾವನನ್ನು ಅಳಿಯ, ಪತ್ನಿ ಮತ್ತು ಮಗಳು ಸೇರಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತದೇಹವನ್ನು ಕೋಲಾರಕ್ಕೆ ಕೊಂಡೊಯ್ದು ಪೆಟ್ರೋಲ್ ಸುರಿದು ಸುಟ್ಟಿರುವುದಾಗಿ ಆರೋಪಿಸಲಾಗಿದೆ.
Read Full Story

11:05 AM (IST) Aug 02

ಕಾಮಿಡಿ ಕಿಲಾಡಿ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಪ್ರಕರಣದಲ್ಲಿ ರೋಚಕ ತಿರುವು; ಅಮ್ಮ ಹೇಳಿಕೆ ಕೇಳಿ ಎಲ್ಲಿರೂ ಶಾಕ್!

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹ*ತ್ಯೆ ಪ್ರಕರಣದಲ್ಲಿ ಅವರ ತಾಯಿ ಸಂಶಯ ವ್ಯಕ್ತಪಡಿಸಿದ್ದಾರೆ. ಪುತ್ರ ಮತ್ತು ಸೊಸೆಯ ನಡುವಿನ ಜಗಳದ ಹಿನ್ನೆಲೆಯಲ್ಲಿ ಈ ಸಾವಿನಲ್ಲಿ ಸಂಶಯವಿದೆ ಎಂದು ಆರೋಪಿಸಿದ್ದಾರೆ. ಚಂದ್ರಶೇಖರ್ ಪತ್ನಿ ವಿರುದ್ಧ ದೂರು ದಾಖಲಾಗಿದೆ.
Read Full Story

10:38 AM (IST) Aug 02

KIADB land allotment scam - ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಖಾಸಗಿ ದೂರು, ಏನಿದು ಪ್ರಕರಣ?

ದೇವನಹಳ್ಳಿಯಲ್ಲಿ 5 ಎಕರೆ ಜಮೀನು ಕಾನೂನುಬಾಹಿರವಾಗಿ ಮಂಜೂರು ಮಾಡಿಕೊಂಡ ಆರೋಪದ ಮೇಲೆ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ ನೀಡುವಂತೆ ಖಾಸಗಿ ದೂರು ದಾಖಲು. ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಎಫ್‌ಐಆರ್‌ ದಾಖಲಿಸಲು ಮನವಿ.
Read Full Story

10:21 AM (IST) Aug 02

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ - ಹೈಕೋರ್ಟ್ ಮಹತ್ವದ ಆದೇಶ! ಏನಿದು ಪ್ರಕರಣ?

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ ವಿಮಾ ಪರಿಹಾರ ನಿರಾಕರಿಸಲು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಮದ್ಯಪಾನ ಚಾಲನೆ ಪ್ರಕರಣಗಳಲ್ಲಿ ವಿಮಾ ಕಂಪನಿಗಳ ಹೊಣೆಗಾರಿಕೆಯಿಂದ ಮುಕ್ತಿ ನೀಡಬೇಕೆಂದು ನ್ಯಾಯಾಲಯ ಹೇಳಿದೆ.

Read Full Story

08:24 AM (IST) Aug 02

ಅರ್ಚಕನಿಗೆ ಸರ್ಕಾರ ಕೊಟ್ಟಿದ್ದ 35000 ರು.ಗಳ ಚೆಕ್‌ ಬೌನ್ಸ್‌

ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಲಾಗಿದ್ದ ಸರ್ಕಾರಿ ಚೆಕ್ ಬೌನ್ಸ್ ಆಗಿದೆ. ₹35,600 ಮೌಲ್ಯದ ಚೆಕ್‌ನಲ್ಲಿ ಹಣವಿಲ್ಲದ ಕಾರಣ ಅರ್ಚಕರು ಜೀವನ ನಿರ್ವಹಣೆ ಕಷ್ಟಕರ ಎಂದು ಅಳಲು ತೋಡಿಕೊಂಡಿದ್ದಾರೆ. 

Read Full Story

07:53 AM (IST) Aug 02

ಬೆಳಗಾವಿ - ರೋಗಿಯನ್ನು ಆಸ್ಪತ್ರೆಗೆ ಸೇರಿಸಲು8 ಕಿ.ಮೀ. ಚಟ್ಟದ ಮೇಲೆ ಹೊತೊಯ್ದರು!

ಖಾನಾಪುರ ತಾಲೂಕಿನ ದಟ್ಟಾರಣ್ಯದ ಕೊಂಗಳಾ ಗ್ರಾಮದಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಚಟ್ಟದಲ್ಲಿ 8 ಕಿ.ಮೀ. ಆಸ್ಪತ್ರೆಗೆ ಸಾಗಿಸಲಾಗಿದೆ. ಮಳೆಯ ನಡುವೆಯೂ ಪಾಂಡ್ರಿ ನದಿ ದಾಟಿ ರೋಗಿಯನ್ನು ಕೊಂಡೊಯ್ದ ಘಟನೆ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದೆ.
Read Full Story

07:38 AM (IST) Aug 02

ಪ್ರಿಯಕರನ ಜತೆ ಸೇರಿ ಪತಿಯನ್ನ ಕೊಂದು ಪಂಚಮಿ ಹಬ್ಬ ಮಾಡಿದ್ದ ಪತ್ನಿ! ಗಂಡ ಧರ್ಮಸ್ಥಳಕ್ಕೆ ಹೋಗಿದ್ದಾನೆಂದು ಕತೆ ಕಟ್ಟಿದ್ದ ಐನಾತಿ ಸಿಕ್ಕಿಬಿದ್ದಿದ್ದು ಹೇಗೆ?

ಕೊಪ್ಪಳದಲ್ಲಿ ಪತಿಯನ್ನು ಹತ್ಯೆಗೈದು ಸುಟ್ಟುಹಾಕಿದ ಪತ್ನಿ ಪ್ರಿಯಕರನೊಂದಿಗೆ ಬಂಧನಕ್ಕೊಳಗಾಗಿದ್ದಾಳೆ. ನಾಗರ ಪಂಚಮಿ ಆಚರಣೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತದೇಹ ಗುರುತಿಸಲು ಪೊಲೀಸರಿಗೆ ಸವಾಲಾಗಿತ್ತು.
Read Full Story

More Trending News