ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಅನಧಿಕೃತವಾಗಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಅನಾಮಿಕ ದೂರುದಾರ ಗುರುತಿಸಿರುವ 9 ಮತ್ತು 10ನೇ ಸಂಖ್ಯೆಯ ಜಾಗದಲ್ಲಿ ಶನಿವಾರ ಉತ್ಪನನ ನಡೆಸಿದ್ದು, ಯಾವುದೇ ಕುರುಹುಗಳು ಪತ್ತೆಯಾಗಿಲ್ಲ. ಭಾನುವಾರ, ರಜೆಯ ದಿನವಾಗಿದ್ದು, ಕಾರ್ಯಾಚರಣೆ ನಡೆಯುವುದು ಅನುಮಾನವಾಗಿದೆ. ಉತ್ಪನನ ಕಾರ್ಯಾಚರಣೆಯ 5ನೇ ದಿನವಾದ ಶನಿವಾರ, ಬೆಳಗ್ಗೆ 11.4 5ರ ಸುಮಾರಿಗೆ ಅನಾಮಿಕ ತೋರಿಸಿದ 9ನೇ ಪಾಯಿಂಟ್ನಲ್ಲಿ ಅಗೆತ ನಡೆಸಲಾಯಿತು. ಗ್ರಾಮದ ನೇತ್ರಾವತಿ ಸ್ಥಾನಘಟ್ಟದ ಸನಿಹ, ರಾಜ್ಯ ಹೆದ್ದಾ ರಿಯ ಪಕ್ಕದಲ್ಲೇ ಈ ಜಾಗವಿದೆ. ಮತ್ತೊಂದೆಡೆ ನೂರಾರು ಶವ ಹೂತ ಆರೋಪದ ತನಿಖೆ ನಡೆಸುತ್ತಿವ ವಿಶೇಷ ತನಿಖಾ ತಂಡದ ಓರ್ವ ಅಧಿಕಾರಿ ದೂರುದಾರನಿಗೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದೆ. ಈ ಕುರಿತು ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ಇನ್ಸ್ಪೆಕ್ಟರ್ ಹಂತದ ಅಧಿಕಾರಿ ದೂರು ವಾಪಸ್ ಪಡೆಯುವಂತೆ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

10:53 PM (IST) Aug 03
ಓವಲ್ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ ಕೇವಲ 35 ರನ್ ಸಾಕು. ಭಾರತಕ್ಕೆ 4 ವಿಕೆಟ್ ಅವಶ್ಯಕತೆ ಇದೆ. ಆದರೆ ಇಂಗ್ಲೆಂಡ್ ತಂಡ ಇಂದು ಸರಿಯಾಗಿ ನಿದ್ದೆ ಮಾಡಲು ಸಾಧ್ಯವಿಲ್ಲದ ಪರಿಸ್ಥಿತಿ ಎದುರಾಗಿದೆ.
10:08 PM (IST) Aug 03
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ಧಾಣದಿಂದ ಟೇಕ್ ಆಫ್ ಆದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಆಂಧ್ರ ಪ್ರದೇಶ ಗಡಿಯಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
09:30 PM (IST) Aug 03
ತಮನ್ನ ಭಾಟಿಯಾ ಡೇಟಿಂಗ್ ವಿಚಾರದಲ್ಲಿ ಪ್ರಮುಖವಾಗಿ ಕ್ರಿಕೆಟಿಗ ವಿರಾಟ್ ಕೊಹ್ಲಿ ಹೆಸರು ಕೇಳಿಬಂದಿತ್ತು. ಈ ಕುರಿತು ತಮನ್ನ ಭಾಟಿಯಾ ಇದೇ ಮೊದಲ ಬಾರಿ ಮಾತನಾಡಿದ್ದಾರೆ. ನಿಜಕ್ಕೂ ಕೊಹ್ಲಿ ಜೊತೆ ಡೇಟಿಂಗ್ ಮಾಡಿದ್ರಾ ತಮನ್ನಾ?
08:56 PM (IST) Aug 03
ಭಾರತದಲ್ಲಿ ಐಫೋನ್ ಮಾರಾಟ ಹೆಚ್ಚಾಗಿದೆ. ಹೀಗಾಗಿ ಆ್ಯಪಲ್ ತನ್ನ ಸ್ಟೋರ್ ವಿಸ್ತರಿಸಲು ಮುಂದಾಗಿದೆ. ಸದ್ಯ ಭಾರತದ ಯಾವ ನಗರದಲ್ಲಿ ಆ್ಯಪಲ್ ಸ್ಟೋರ್ ಆರಂಭಗೊಳ್ಳುತ್ತಿದೆ.
08:14 PM (IST) Aug 03
ರಾಜ್ಯ ಸಾರಿಗೆ ನೌಕರರು ಆಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ವೇತನ ಹೆಚ್ಚಳ, ಬಾಕಿ ಅರಿಯರ್ಸ್ ಪಾವತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದು, ಸರ್ಕಾರದ ಎಸ್ಮಾ ಎಚ್ಚರಿಕೆಯನ್ನೂ ಲೆಕ್ಕಿಸದೆ ಮುಷ್ಕರಕ್ಕೆ ಮುಂದಾಗಿದ್ದಾರೆ.
07:50 PM (IST) Aug 03
ಐದು ವರ್ಷಗಳಿಂದ ಮಗಳು ಸಿಂಧು ಮನೆಗೆ ಹಿಂದಿರುತ್ತಾಳೆ ಎಂದು ದಾರಿ ಕಾಯುತ್ತಿರುವ ತಾಯಿ ಇದೀಗ ಪೊಲೀಸರ ಬಳಿಕ ಕಣ್ಣೀರಿಟ್ಟು ಮನವಿ ಮಾಡಿದ್ದಾರೆ. ನನ್ನ ಮಗಳಿಗೆ ಏನಾಯ್ತು ಅನ್ನೋದಾದರು ಹೇಳಿ ಎಂದು ಕೈಮುಗಿದು ಬೇಡಿಕೊಂಡಿದ್ದಾರೆ. ಏನಿದು ಸಿಂಧೂ ಪ್ರಕರಣ?
07:44 PM (IST) Aug 03
07:08 PM (IST) Aug 03
ಕೆಆರ್ಎಸ್ ಅಣೆಕಟ್ಟು ನಿರ್ಮಾಣದಲ್ಲಿ ಟಿಪ್ಪು ಸುಲ್ತಾನನ ಪಾತ್ರವಿಲ್ಲ ಎಂದು ಇತಿಹಾಸಕಾರ ತಲಕಾಡು ಚಿಕ್ಕರಂಗೇಗೌಡ ಸ್ಪಷ್ಟಪಡಿಸಿದ್ದಾರೆ. ನಿಜವಾದ ಕೊಡುಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರದ್ದು ಎಂದು ಅವರು ಹೇಳಿದ್ದಾರೆ. ಸಚಿವ ಮಹದೇವಪ್ಪನವರ ಹೇಳಿಕೆಯನ್ನು ಅವರು ಖಂಡಿಸಿದ್ದಾರೆ.
06:57 PM (IST) Aug 03
20 ವರ್ಷದ ಯುವತಿ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದಂತೆ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ತಕ್ಷಣ ಈಕೆಯನ್ನು ಆಸ್ಪತ್ರೆ ದಾಖಲಿಸಲಾಗಿದೆ. ತನ್ನ ದೇಹದಲ್ಲಿ 26 ಐಫೋನ್ ಅಂಟಿಸಿ ಕಳ್ಳಾಸಾಗಾಣೆ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
06:26 PM (IST) Aug 03
06:03 PM (IST) Aug 03
ಬೆಂಗಳೂರಿಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ಗಂಟೆ ಆರೆಂಜ್ ಅಲರ್ಟ ಘೋಷಿಸಲಾಗಿದೆ. ಈಗಾಗಲೇ ನಗರದ ಹಲವೆಡೆ ಭಾರಿ ಮಳೆಯಾಗಿ ಹಲವು ರಸ್ತೆಗಳು ಜಲಾವೃತಗೊಂಡಿದೆ.
05:37 PM (IST) Aug 03
ಸಚಿವ ಮಹಾದೇವಪ್ಪ ಮತ್ತೆ ಟಿಪ್ಪು ವಿವಾದ ಕೆದಕಿ ಇದೀಗ ಹಲವರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಆಕಡೆ ಅಲ್ಲಾಹು ಅಕ್ಬರ್, ಈಕಡೆ ಗಂಟೆ ಟನ್ ಟನ್ ಮೂಲಕ ಟಿಪ್ಪು ಸರ್ವಧರ್ಮ ಸಹಿಷ್ಣುವಾಗಿದ್ದರು. ಕೆಆರ್ಎಸ್ ಡ್ಯಾಂಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಎಂದು ಸಚಿವ ಮಹಾದೇವಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
05:25 PM (IST) Aug 03
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾ1ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯದ ತೀರ್ಪಿನಲ್ಲಿ ಮಹಿಳೆಯರನ್ನು ಪೂಜಿಸುವ ಬಗ್ಗೆ ಸಂಸ್ಕೃತ ಶ್ಲೋಕವನ್ನು ಉಲ್ಲೇಖಿಸಲಾಗಿದೆ. ಈ ಪ್ರಕರಣವು 2024 ರಲ್ಲಿ ಬೆಳಕಿಗೆ ಬಂದಿತ್ತು.
05:02 PM (IST) Aug 03
ಪಂಚ ಗ್ಯಾರಂಟಿಗಳ ಮೇಲೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ಶೂನ್ಯವಾಗಿದ್ದು ಪ್ರಸ್ತುತ ಸರ್ಕಾರ ಐಸಿಯುನಲ್ಲಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
04:51 PM (IST) Aug 03
ಕಂದಾಯ ಇಲಾಖೆ ಮತ್ತು ಅರಣ್ಯ ಇಲಾಖೆ ನಡುವೆ ದೊಡ್ಡ ತಲೆನೋವಾಗಿರುವ ಡೀಮ್ಡ್ ಫಾರೆಸ್ಟ್ ಸರ್ವೇಯನ್ನು ಶೀಘ್ರ ಪೂರ್ಣಗೊಳಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.
04:38 PM (IST) Aug 03
ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ಶಿಸ್ತು ಪಾಲನೆ ಮಾಡುತ್ತಿಲ್ಲ. ಪ್ರತಿಪಕ್ಷವಾಗಿ ಕೆಲಸ ಮಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
04:33 PM (IST) Aug 03
ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ಗೆ ಜಾಮೀನು ನೀಡಿದ ರೀತಿ, ನೇಹಾ ಹಿರೇಮಠ ಪ್ರಕರಣದಲ್ಲಿ ಕೊಲೆ ಆರೋಪಿ ಫಯಾಝ್ಗೆ ಜಾಮೀನು ನೀಡಬೇಕು ಎಂದು ಆರೋಪಿ ವಕೀಲರು ವಾದ ಮಂಡಿಸಿದ್ದಾರೆ ಎಂದು ನೇಹಾ ತಂದೆ ಆಕ್ರೋಶ ಹೊರಹಾಕಿದ್ದಾರೆ. ನಾಳೆ ಜಾಮೀನು ಆದೇಶ ಹೊರಬೀಳಲಿದೆ.
04:18 PM (IST) Aug 03
04:15 PM (IST) Aug 03
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಯೋಜನೆ ಪೈಕಿ ಕಳೆದ ಏಳು ವರ್ಷಗಳಲ್ಲಿ ₹4 ಲಕ್ಷ ಕೋಟಿ ಹಣ ರೈತರಿಗೆ ಸಂದಾಯವಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ₹538 ಕೋಟಿ ರೈತರ ಖಾತೆಗೆ ಜಮಾ ಆಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದರು.
04:06 PM (IST) Aug 03
ಮದುವೆಯಾಗುವುದಾಗಿ ನಂಬಿಸಿ ಮಗು ಕೊಟ್ಟು ಜೈಲು ಸೇರಿರೋ ಬಿಜೆಪಿ ಮುಖಂಡನ 20 ವರ್ಷದ ಪುತ್ರನಿಗಾಗಿ ಯುವತಿ ಕಣ್ಣೀರು ಹಾಕುತ್ತಿದ್ದಾಳೆ. ಅವಳು ಹೇಳಿದ್ದೇನು ಕೇಳಿ...
03:41 PM (IST) Aug 03
ಕಾರಿನಲ್ಲಿ ಪ್ರಯಾಣಿಸಿದ್ದ ಭಾರತೀಯ ಮೂಲದ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ನಾಪತ್ತೆ ಪ್ರಕರಣದ ಬೆನ್ನಲ್ಲೇ ಹೆಲಿಕಾಪ್ಟರ್ ಮೂಲಕ ಸರ್ಚ್ ಆಪರೇಶನ್ ಮಾಡಲಾಗಿದೆ. ಈ ವೇಳೆ ಘಟನೆ ಬಯಲಾಗಿದೆ.
03:35 PM (IST) Aug 03
03:00 PM (IST) Aug 03
ಪೃಥ್ವಿನಾಥ್ ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಬೊಲೆರೋ ಕಾರು ಅಪಘಾತಕ್ಕೀಡಾದ ಘಟನೆ ನಡದಿದೆ. ನಿಯಂತ್ರಣ ತಪ್ಪಿ ಕಾರು ಸರಯು ಕಾಲುವೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ 11 ಭಕ್ತರು ಮೃತಪಟ್ಟಿದ್ದಾರೆ.
02:48 PM (IST) Aug 03
ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹುಟ್ಟುಹಬ್ಬದಂದು ಕೋಟೆ ಮಾರಿಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. 77 ಈಡಗಾಯಿಗಳನ್ನು ದೇವಿಗೆ ಸಮರ್ಪಿಸಿ, ಯುವ ಕಾಂಗ್ರೆಸ್ ಹಾಗೂ ಅಭಿಮಾನಿ ಬಳಗದಿಂದ ಆಚರಣೆ ಮಾಡಲಾಯಿತು.
02:29 PM (IST) Aug 03
ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಪಿಜಿ ಮಾಲೀಕ ಅತ್ಯಾ ೧ಚಾರವೆಸಗಿದ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
01:57 PM (IST) Aug 03
01:55 PM (IST) Aug 03
01:08 PM (IST) Aug 03
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ಗೃಹ ಸಚಿವ ಪರಮೇಶ್ವರ್ 'ಐತಿಹಾಸಿಕ' ಎಂದು ಬಣ್ಣಿಸಿದ್ದಾರೆ. ಎಸ್ಐಟಿ ತಂಡ,ಕರ್ನಾಟಕ ಪೊಲೀಸರ ತನಿಖೆಯನ್ನು ಶ್ಲಾಘಿಸಿ ಇದು ನ್ಯಾಯ, ಸತ್ಯದ ಗೆಲುವು ಎಂದಿದ್ದಾರೆ. ತನಿಖಾ ತಂಡಕ್ಕೆ ಮುಖ್ಯಮಂತ್ರಿ ಪದಕ ನೀಡುವುದಾಗಿ ಘೋಷಿಸಿದ್ದಾರೆ.
12:35 PM (IST) Aug 03
ಹೆಲ್ಮೆಟ್ ಯಾಕೆ ಮತ್ತು ಹೇಗೆ ಸ್ವಚ್ಛಗೊಳಿಸಬೇಕು ಎಂಬುದನ್ನು ಈ ಪೋಸ್ಟ್ನಲ್ಲಿ ತಿಳಿಯಿರಿ.
12:20 PM (IST) Aug 03
12:11 PM (IST) Aug 03
11:59 AM (IST) Aug 03
ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 33,000 ಕ್ಕೂ ಹೆಚ್ಚು ಹದಿಹರೆಯದ ಗರ್ಭಧಾರಣೆ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ನಗರ ಜಿಲ್ಲೆ ಅತಿ ಹೆಚ್ಚು ಪ್ರಕರಣಗಳನ್ನು ದಾಖಲಿಸಿದೆ.
11:22 AM (IST) Aug 03
10:47 AM (IST) Aug 03
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಆಟೋ ಚಾಲಕನೊಬ್ಬ ನಡುರಸ್ತೆಯಲ್ಲಿ ಅಪಾಯಕಾರಿ ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
08:48 AM (IST) Aug 03
08:04 AM (IST) Aug 03
ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮದ ಹೇಳಿಕೆ ಮುಖಾಂತರ ದೇಶ ಮತ್ತು ರಾಜ್ಯದ ಮತದಾರರಿಗೆ ಅವಮಾನ ಮಾಡಿದ್ದಾರೆ.
07:55 AM (IST) Aug 03
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ* ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಯ ಅಧಿಕಾರಿಗಳು ಶನಿವಾರ ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ವ್ಯಾಪ್ತಿಯಲ್ಲಿ 18 ಕಡೆ ದಾಳಿ ನಡೆಸಿದ್ದಾರೆ.
07:39 AM (IST) Aug 03
ರಾಜಧಾನಿ ಬೆಂಗಳೂರಿನ ಸುಮಾರು 1,500 ಕಿ.ಮೀ ಉದ್ದದ 654 ಆರ್ಟಿರಿಯಲ್ ರಸ್ತೆ, ಸಬ್ ಆರ್ಟಿರಿಯಲ್ ರಸ್ತೆ, ಜಂಕ್ಷನ್, ವೃತ್ತ ಸೇರಿದಂತೆ ಬಹುತೇಕ ನಗರದ ಎಲ್ಲೆಡೆ ವಾಣಿಜ್ಯ ಜಾಹೀರಾತು ಪ್ರದರ್ಶನಕ್ಕೆ ಅವಕಾಶ
07:29 AM (IST) Aug 03