ರಾಜ್ಯ ಸರ್ಕಾರದಿಂದ ಹಸಿರು, ಕಿತ್ತಳೆ, ಕೆಂಪು ವಲಯಗಳ ಮರುವಿಂಗಡಣೆ: ಹೀಗಿದೆ ಪಟ್ಟಿ

Published : May 03, 2020, 06:05 PM ISTUpdated : May 03, 2020, 06:08 PM IST
ರಾಜ್ಯ ಸರ್ಕಾರದಿಂದ ಹಸಿರು, ಕಿತ್ತಳೆ, ಕೆಂಪು ವಲಯಗಳ ಮರುವಿಂಗಡಣೆ: ಹೀಗಿದೆ ಪಟ್ಟಿ

ಸಾರಾಂಶ

ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನಾಗಿ ಈ ಹಿಂದೆ ರೂಪಿಸಿದ್ದ ಪಟ್ಟಿಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ತುಸು ಬದಲಾವಣೆ ಮಾಡಿದ್ದಾರೆ. ಹೊಸ ಆದೇಶದ ಅನ್ವಯ ವಲಯಗಳ ಅಂತಿಮ ಪಟ್ಟಿ ಇಂತಿದೆ.

ಬೆಂಗಳೂರು, (ಮೇ.03) : ಕೊರೋನಾ ಸೋಂಕು ತಡೆಗೆ ದೇಶಾದ್ಯಂತ ಜಾರಿಗೊಳಿಸಿರುವ ಮೂರನೇ ಹಂತದ ಲಾಕ್‌ಡೌನ್ ನಾಳೆಯಿಂದ (ಮೇ.4) ಆರಂಭವಾಗಲಿದ್ದು, ಮೇ 17 ರ ವರೆಗೆ ಜಾರಿಯಲ್ಲಿರುತ್ತದೆ.

ಲಾಕ್ ಡೌನ್ ನಿಯಮಗಳಲ್ಲಿ ಕೊಂಚ ಸಡಿಲಿಕೆ ಮಾಡಲಾಗಿದ್ದು, ರೆಡ್ ಝೋನ್ ಗಳಲ್ಲಿ ಕಠಿಣ ನಿರ್ಬಂಧ ಮುಂದುವರೆಯಲಿದೆ. ಕೇಂದ್ರದ ನಿಯಮಗಳ ಅನುಸಾರ ಆರೆಂಜ್ ಮತ್ತು ಗ್ರೀನ್ ವಲಯದಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.

606ಕ್ಕೆ ಏರಿದ ಕರ್ನಾಟಕದ ಸೋಂಕಿತರ ಸಂಖ್ಯೆ, ಯಾವ ಜಿಲ್ಲೆಯಿಂದ ಎಷ್ಟು?

ಇನ್ನು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನಾಗಿ ಈ ಹಿಂದೆ ರೂಪಿಸಿದ್ದ ಪಟ್ಟಿಯಲ್ಲಿ ರಾಜ್ಯ ಸರ್ಕಾರ ಕೊಂಚ ಬದಲಾವಣೆ ಮಾಡಿದೆ. ಇಂದು (ಭಾನುವಾರ) ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಕೆಂಪು, ಕಿತ್ತಳೆ ಮತ್ತು ಆರೆಂಜ್ ಝೋನ್ ನ ಪಟ್ಟಿ ಈ ಕೆಳಗಿನಂತಿದೆ.

* ಕೆಂಪು ವಲಯದ ಜಿಲ್ಲೆಗಳು: 1. ಬೆಂಗಳೂರು ನಗರ, 2. ಮೈಸೂರು, 3. ಬೆಂಗಳೂರು ಗ್ರಾಮಾಂತರ

* ಕಿತ್ತಳೆ ವಲಯದ ಜಿಲ್ಲೆಗಳು: ಬೆಳಗಾವಿ, ವಿಜಯಪುರ, ಕಲಬುರಗಿ,ಬಾಗಲಕೋಟೆ, ಮಂಡ್ಯ, ಬಳ್ಳಾರಿ, ಧಾರವಾಡ, ದಕ್ಷಿಣ ಕನ್ನಡ, ಬೀದರ್, ಚಿಕ್ಕಬಳ್ಳಾಪುರ, ಗದಗ, ಉತ್ತರ ಕನ್ನಡ, ತುಮಕೂರು

* ಹಸಿರು ವಲಯದ ಜಿಲ್ಲೆಗಳ ಪಟ್ಟಿ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು,ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ, ಯಾದಗಿರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್