ಬೋಟ್ ದುರಂತ : 100 ಕಿ.ಮೀ. ದೂರದಲ್ಲಿ ಶವ ಪತ್ತೆ

Published : Jan 29, 2019, 10:35 AM IST
ಬೋಟ್ ದುರಂತ : 100 ಕಿ.ಮೀ. ದೂರದಲ್ಲಿ ಶವ ಪತ್ತೆ

ಸಾರಾಂಶ

ದೋಟ್ ದುರಂತದಲ್ಲಿ ಮೃತಪಟ್ಟಿದ್ದ ಬಾಲಕನೋರ್ವನ ಮೃತದೇಹ 100 ಕ.ಮೀ ದೂರದಲ್ಲಿ ಪತ್ತೆಯಾಗಿದೆ. ಕಾರವಾರದಲ್ಲಿ ದುರಂತ ಸಂಭವಿಸಿದ್ದು, ಭಟ್ಕಳ ಸಮೀಪ ಮೃತದೇಹ ಪತ್ತೆಯಾಗಿದೆ. 

ಕಾರವಾರ: ಕಳೆದ ಸೋಮವಾರ ಕೂರ್ಮಗಡ ಬೋಟ್‌ ದುರಂತದಲ್ಲಿ ನೀರುಪಾಲಾಗಿದ್ದ ಬಾಲಕನೊಬ್ಬನ ಮೃತದೇಹ ದುರ್ಘಟನಾ ಸ್ಥಳದಿಂದ 100 ಕಿ.ಮೀ. ದೂರದ ಭಟ್ಕಳದಲ್ಲಿ ಪತ್ತೆಯಾಗಿದೆ. 

ನೀರಿನಲ್ಲಿ ತೇಲಿಕೊಂಡು ಹೋಗುತ್ತಿದ್ದ ಸಂದೀಪ ಬೆಳವಳಕೊಪ್ಪನ ಎಂಬ ಬಾಲಕನ ಶವ ಕೊಳೆತ ಸ್ಥಿತಿಯಲ್ಲಿ ದೊರಕಿದ್ದು, ಈ ಮೂಲಕ ನಾಪತ್ತೆಯಾಗಿದ್ದ ಎಲ್ಲರ ಮೃತದೇಹಗಳೂ ಪತ್ತೆಯಾದಂತಾಗಿದೆ. 

ಭಾನುವಾರ ಸಂಜೆ ನೇತ್ರಾಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಕೆಲವು ಮೀನುಗಾರರು ಮೃತದೇಹ ತೇಲಿ ಹೋಗುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಭದ್ರತಾ ಪಡೆಗಳು ಭಟ್ಕಳ ಸುತ್ತಮುತ್ತಲಿನ ಸಮುದ್ರ ಹಾಗೂ ನದಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಸೋಮವಾರ ಭಟ್ಕಳ ಅಳ್ವೇಕೋಡಿ ಬಳಿ ಸಂದೀಪ ದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ