ಕಾರವಾರ : ಉಳ್ಳಾಲಕ್ಕೆ ಹಿಂಸಾತ್ಮಕವಾಗಿ ಒಂಟೆಗಳ ಸಾಗಿಸುತ್ತಿದ್ದ ಮೂವರ ಬಂಧನ: 8 ಒಂಟೆಗಳ ರಕ್ಷಣೆ

Published : Apr 22, 2026, 05:43 PM IST
camel

ಸಾರಾಂಶ

ಭಟ್ಕಳದಲ್ಲಿ ಅಕ್ರಮವಾಗಿ ಒಂಟೆಗಳನ್ನು ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಹಿಂಸಾತ್ಮಕವಾಗಿ ಲಾರಿಯಲ್ಲಿ ಸಾಗಿಸುತ್ತಿದ್ದ 8 ಒಂಟೆಗಳನ್ನು ರಕ್ಷಿಸಲಾಗಿದ್ದು, ಆರೋಪಿಗಳ ವಿರುದ್ಧ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅಕ್ರಮವಾಗಿ ಒಂಟೆ ಸಾಗಣೆ: ಮೂವರ ಬಂಧನ

ಕಾರವಾರ : ಅಕ್ರಮವಾಗಿ ಒಂಟೆಗಳ ಸಾಗಿಸುತ್ತಿದ್ದ ಮೂವರನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ. ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 8 ಒಂಟೆಗಳನ್ನು ಪೊಲೀಸರು ವಶಕ್ಕೆ ಪಡೆದು ರಕ್ಷಿಸಿದ್ದಾರೆ. ಮಹಾರಾಷ್ಟ್ರ ನೋಂದಣಿ ಸಂಖ್ಯೆಯ ಲಾರಿಯಲ್ಲಿ ಒಂಟೆಗಳನ್ನು ಸಾಗಿಸಲಾಗುತ್ತಿತ್ತು. ಭಟ್ಕಳದ ಶಿರಾಲಿ ಯಿಂದ ಉಳ್ಳಾಲದತ್ತ ಈ ಒಂಟೆಗಳನ್ನು ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಬಂಧಿತರನ್ನು ಮಧ್ಯಪ್ರದೇಶ ಮೂಲದ ಕರಣ್ ಬಾಬರ್, ಮಹಾರಾಷ್ಟ್ರದ ಸುಹಾಸ್ ಸೂರ್ಯವಂಶಿ ಹಾಗೂ ಯಶ ಗೋಟಕಿಂಡೆ ಎಂದು ಗುರುತಿಸಲಾಗಿದೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ರ ಅಡಿಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇಡಿ ದಾಳಿ ಮೂಲಕ ಕಾಂಗ್ರೆಸ್‌ ಟಾರ್ಗೆಟ್‌, ಬಿಜೆಪಿಯವರ ಮೇಲೆ ದಾಳಿ ಆಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ ಆರೋಪ
ದೇಶಾದ್ಯಂತ 2026ರಲ್ಲಿ ಮಳೆ ಕೊರತೆ; ಬೆಂಗಳೂರಿಗೆ 'ಸನ್ ಶಾಕ್', ರೈತರಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!