
ಕಲಬುರಗಿ (ನ.11): ಕೆಇಎ ನೇಮಕಾತಿ ಎಫ್ಡಿಎ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣದ ಕಿಂಗ್ಪಿನ್ ಆರ್ಡಿ ಪಾಟೀಲ್ನನ್ನ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಕಳೆದ ಹನ್ನೆರಡು ದಿನಗಳ ಕಾಲ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಮಹಾರಾಷ್ಟ್ರದಲ್ಲಿ ಬಂಧಿಸಿ ಕರೆತಂದಿರುವ ಪೊಲೀಸರು.
ಇಂದು ಆರೋಪಿ ಆರ್ಡಿ ಪಾಟೀಲ್ನನ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಸಹಿ ಪಡೆದುಕೊಳ್ಳಲು ಕುಟುಂಬಸ್ಥರನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಹೀಗಾಗಿ ಆರ್ ಡಿ ಪಾಟೀಲ್ ಭೇಟಿಗೆ ತೆರಳಿದ್ದ ಪತ್ನಿ. ಪೊಲೀಸ್ ಠಾಣೆಗೆ ಹೋಗಿದ್ದಾಗ ಆರ್ಡಿ ಪಾಟೀಲ್ ಸ್ಥಿತಿ ಕಂಡು ಕಣ್ಣೀರು ಹಾಕಿದ ಪತ್ನಿ. ಕೋಟ್ಯಧಿಪತಿಯಾಗಿ ಮರೆದಿದ್ದ ಆರ್ಡಿ ಪಾಟೀಲ್ ಇದೀಗ ನೆಲದ ಮೇಲೆ ಕೂತಿದ್ದನ್ನು ಕಂಡು ಪತ್ನಿ ಭಾವುಕರಾದ ಆರ್ಡಿ ಪಾಟೀಲನ ಪತ್ನಿ. ದುಃಖ ತಡೆಯಲಾಗದೆ ಪೊಲೀಸ್ ಠಾಣೆಯಿಂದ ಹೊರಬಂದು ಕಣ್ಣೀರು ಹಾಕುತ್ತಾ ದುಪ್ಪಟ್ಟದಿಂದ ಒರೆಸಿಕೊಳ್ಳುತ್ತಳೇ ಕಾರು ಹತ್ತಿದ ಪತ್ನಿ.
ಕೆಇಎ ಪರೀಕ್ಷೆ ಹಗರಣ, ಕಿಂಗ್ ಪಿನ್ ಆರ್ ಡಿ ಪಾಟೀಲ್ ಮಹಾರಾಷ್ಟ್ರದಲ್ಲಿ ಬಂಧನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ