Kempegowda Awards 2025: ಕೆಂಪೇಗೌಡ ಪ್ರಶಸ್ತಿ ಘೋಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನ ನಾಗಯ್ಯ ಸೇರಿ 52 ಮಂದಿಗೆ ಸಂದ ಗೌರವ

Kannadaprabha News   | Kannada Prabha
Published : Jun 27, 2025, 08:43 AM ISTUpdated : Jun 27, 2025, 09:48 AM IST
kempegowda award 2025

ಸಾರಾಂಶ

ಬಿಬಿಎಂಪಿಯಿಂದ ಪ್ರತಿಷ್ಠಿತ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು, ಏಷ್ಯಾನೆಟ್ ಸುವರ್ಣ ನ್ಯೂಸ್ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಲಭಿಸಿದೆ. 

ಬೆಂಗಳೂರು (ಜೂ.27) : ನಾಡಪ್ರಭು ಕೆಂಪೇಗೌಡ ಜಯಂತಿ ಹೆಸರಲ್ಲಿ ಬಿಬಿಎಂಪಿಯಿಂದ ನೀಡುವ ಪ್ರತಿಷ್ಠಿತ ಕೇಂಪೇಗೌಡ ಪ್ರಶಸ್ತಿ ಪ್ರಕಟಗೊಂಡಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ 52 ಸಾಧಕರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಸಮಾಜಸೇವೆ, ಮಾಧ್ಯಮ, ನ್ಯಾಯವಾದಿ, ಆಡಳಿತ, ವೈದ್ಯಕೀಯ, ಸಾಹಿತ್ಯ ಸೇರಿದಂತೆ ಹಲವು ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಘೋಷಿಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಹಿರಿಯ ನಿರೂಪಕಿ ಭಾವನ ನಾಗಯ್ಯ ಸೇರಿದಂತೆ ಒಟ್ಟು 52 ಮಂದಿಗೆ ಕೇಂಪೇಗೌಡ ಪ್ರಶಸ್ತಿ ಪ್ರಕಟಗೊಂಡಿದೆ.

ಮಾಧ್ಯಮ ಕ್ಷೇತ್ರದ ಸೇವೆಗಾಗಿ ಭಾವನ ನಾಗಯ್ಯ ಅವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಿಸಲಾಗಿದೆ. ಇನ್ನು ನಿವೃತ್ತ ಐಎಎಸ್ ಅಧಿಕಾರಿ ಬಿಎಸ್ ಪಾಟೀಲ್, ಸಿದ್ಧಯ್ಯ ಸೇರಿದಂತೆ ಮಾಧ್ಯಮ ಕ್ಷೇತ್ರದ ಐವರಿಗೆ ಕೆಂಪೇಗೌಡ ಪ್ರಶಸ್ತಿ ಘೋಷಣೆಯಾಗಿದೆ. ನಾಳೆ (ಜೂ.27) ಸಂಜೆ ಆರು ಗಂಟೆಗೆ ಬಿಬಿಎಂಪಿ ಗಾಜಿನ ಮನೆಯಲ್ಲಿ ಈ ಪ್ರಶಸ್ತಿ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಪತ್ರಕರ್ತ ದೀಪಕ್ ತಿಮ್ಮಯ್ಯ, ಪತ್ರಕರ್ತ ಸತೀಶ್ (ದಿ ಹಿಂದೂ), ಪತ್ರಕರ್ತ ಅವಿರಾಜ್ ಸೇರಿದಂತೆ ಕೆಲ ಮಾಧ್ಯಮ ಸಾಧಕರಿಗೂ ಪ್ರಶಸ್ತಿ ಘೋಷಿಸಲಾಗಿದೆ. ಇನ್ನು ಹೆಲಿಕ್ಯಾಪ್ಟರ್ ಪೈಲೆಟ್ ನಂದಕುಮಾರ್, ಕೆಎಎಸ್ ಎಸ್ಐಎ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ಸಮಾಜಸೇವೆ ವಿಭಾಗದಲ್ಲಿ ಅರುಣ್ ಪೈ, ಕಣ್ವ ಆಸ್ಪತ್ರೆಯ ಡಾ. ವೆಂಕಪ್ಪ, ಸರ್ವೋಚ್ಚ ನ್ಯಾಯಾಲಯ ವಕೀಲ ಶ್ಯಾಮ್‌ಸುಂದರ್, ಬ್ಲೈಂಡ್ ಸ್ಕೂಲ್ ಚಂದ್ರಶೇಖರ್ ರಾಜು ಸೇರಿದಂತೆ ಒಟ್ಟು 52 ಸಾಧಕರಿಗೆ ಪ್ರಶಸ್ತಿ ನಾಳೆ ಪ್ರಧಾನ ಮಾಡಲಾಗುತ್ತದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌