ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 10 ಪ್ರಶಸ್ತಿ

Published : Jul 03, 2025, 08:23 AM IST
Kempegowda Airport

ಸಾರಾಂಶ

 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ  ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.

  ಬೆಂಗಳೂರು :  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಎಲ್‌)ವು ತನ್ನ ದೇಶೀಯ ಹಾಗೂ ಅಂತಾರಾಷ್ಟ್ರೀಯ ಲೌಂಜ್‌ಗಳಲ್ಲಿ ಚಾಲ್ತಿಗೆ ತಂದಿರುವ ಆಹಾರ, ಪಾನೀಯ (ಎಫ್‌ಎಬಿ) ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಜಾಗತಿಕವಾಗಿ ಒಟ್ಟು 10 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, ಒಮ್ಮೆಲೆ ಇಷ್ಟು ಪ್ರಮಾಣದ ಪ್ರಶಸ್ತಿ ಪಡೆದ ವಿಮಾನ ನಿಲ್ದಾಣಗಳ ಪೈಕಿ ಒಂದಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕೆಐಎಎಲ್‌ ಮುಖ್ಯ ವಾಣಿಜ್ಯ ಅಧಿಕಾರಿ ಕೆನ್ನೆತ್ ಗುಲ್ಡ್‌ಬ್ಜೆರ್ಗ್, ಇತ್ತೀಚೆಗೆ ಸ್ಪೇನ್‌ನ ಬಾರ್ಸಿಲೋನಾದಲ್ಲಿ ನಡೆದ ‘ವಿಮಾನ ನಿಲ್ದಾಣ ಆಹಾರ, ಪಾನೀಯ ಹಾಗೂ ಆತಿಥ್ಯ ಕ್ಷೇತ್ರದ ಸಮ್ಮೇಳನ- 2025 ರ ಪ್ರಶಸ್ತಿ ಸಮಾರಂಭ’ದಲ್ಲಿ ಈ ಪ್ರಶಸ್ತಿಗಳನ್ನು ಸ್ವೀಕರಿಸಲಾಗಿದೆ.

ಬೆಂಗಳೂರು ವಿಮಾನ ನಿಲ್ದಾಣದ ಲೌಂಜ್‌ ಮತ್ತು ರೆಸ್ಟೋರೆಂಟ್‌ಗಳು ಭಾರತದಲ್ಲಿ ಮಾತ್ರವಲ್ಲದೆ, ಜಾಗತಿಕವಾಗಿಯೂ ತನ್ನ ಶ್ರೇಷ್ಠತೆಯನ್ನು ಸಾಬೀತುಪಡಿಸುತ್ತಿವೆ. ಅದರಲ್ಲೂ ಪ್ರಮುಖವಾಗಿ 080 ಲೌಂಜ್‌ ಒಟ್ಟು ಏಳು ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದೆ ಎಂದು ತಿಳಿಸಿದ್ದಾರೆ.

ಟರ್ಮಿನಲ್ 2 ರಲ್ಲಿರುವ 080 ಲೌಂಜ್‌ ‘ಪ್ರಾದೇಶಿಕ ಮತ್ತು ಜಾಗತಿಕ ವಿಭಾಗದಲ್ಲಿ ವರ್ಷದ ಅತ್ಯುತ್ತಮ ಲೌಂಜ್’ ಪ್ರಶಸ್ತಿಯ ಜೊತೆಗೆ, ಪ್ರಾದೇಶಿಕ ಮತ್ತು ಜಾಗತಿಕ ವಿಭಾಗದಲ್ಲಿ ‘ಏರ್‌ಪೋರ್ಟ್ ಎಫ್ ಅಂಡ್‌ ಬಿ ಆಫರ್ ಆಫ್ ದಿ ಇಯರ್ - ಸೆನ್ಸ್ ಆಫ್ ಪ್ಲೇಸ್’ ಪ್ರಶಸ್ತಿಗೆ ಭಾಜನವಾಗಿದೆ. ಟಿ2 ನಲ್ಲಿರುವ 080 ಪ್ರಾದೇಶಿಕ ಲೌಂಜ್‌ನೊಳಗಿನ ಸಿಗ್ನೇಚರ್ ರೆಸ್ಟೋರೆಂಟ್ ಕಿಲಾ, ಗಮನಾರ್ಹ ವಾಸ್ತುಶಿಲ್ಪ ಮತ್ತು ವಾತಾವರಣಕ್ಕಾಗಿ ‘ಪ್ರಾದೇಶಿಕ ವಿಭಾಗದಲ್ಲಿ ಅತ್ಯುತ್ತಮ ರೆಸ್ಟೋರೆಂಟ್ ವಿನ್ಯಾಸ’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಜೊತೆಗೆ, ಟರ್ಮಿನಲ್ 1 ರಲ್ಲಿರುವ 080 ದೇಶೀಯ ಲೌಂಜ್ ಪ್ರಾದೇಶಿಕ ಮತ್ತು ಜಾಗತಿಕ ವಿಭಾಗದಲ್ಲಿ ‘ವರ್ಷದ ವಿಮಾನ ನಿಲ್ದಾಣ ಲೌಂಜ್ ಓಪನಿಂಗ್’ ಪ್ರಶಸ್ತಿಯನ್ನು ಪಡೆದುಕೊಂಡಿದೆ ಎಂದು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!