ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸ್ರು: ಕರ್ನಾಟಕದ ಸ್ಥಿತಿ

Published : Jul 05, 2021, 06:20 PM IST
ಮಾಸಿ, ಹರಿದು ಹೋದ ಕನ್ನಡ ಧ್ವಜ ಬದಲಿಸಲು ಹೋದವರನ್ನ ವಶಕ್ಕೆ ಪಡೆದ ಪೊಲೀಸ್ರು: ಕರ್ನಾಟಕದ ಸ್ಥಿತಿ

ಸಾರಾಂಶ

* ಬೆಳಗಾವಿ ಮಹಾನಗರ ಪಾಲಿಕೆ ಎದುರು ಹೈಡ್ರಾಮಾ * ಬಣ್ಣ ಮಾಸಿ ಹರಿದು ಹೋದ ಕನ್ನಡ ಧ್ವಜ ತೆರವು ಮಾಡಿ ಹೊಸ ಧ್ವಜ ಅಳವಡಿಕೆಗೆ ಬಂದಿದ್ದ ಹೋರಾಟಗಾರರು ವಶಕ್ಕೆ * 10ಕ್ಕೂ ಹೆಚ್ಚು ಪ್ರತಿಭಟನಾಕಾರರ‌ನ್ನು ವಶಕ್ಕೆ ಪಡೆದ ಪೊಲೀಸರು

ಬೆಳಗಾವಿ, (ಜುಲೈ.05): ಬಣ್ಣ ಮಾಸಿ ಹರಿದು ಹೋದ ಕನ್ನಡ ಧ್ವಜ ತೆರವು ಮಾಡಿ ಹೊಸ ಧ್ವಜ ಅಳವಡಿಕೆಗೆ ಬಂದಿದ್ದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕನ್ನಡ ಧ್ವಜ ಹಾಗೂ ಹಗ್ಗ ತೆಗೆದುಕೊಂಡು ಬಂದಿರುವ ಕನ್ನಡಪರ ಹೋರಾಟಗಾರರು ಇಂದು (ಸೋಮವಾರ) ಕನ್ನಡಧ್ವಜ ಸ್ತಂಭ ಸುತ್ತ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಲು ಯತ್ನಿಸಿದರು. ಆದ್ರೆ, ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಒತ್ತಾಯಪೂರ್ವಕವಾಗಿ ವಶಕ್ಕೆ ಕರೆದೊಯ್ದಿದರು ಪಡೆದುಕೊಂಡರು.

ಬೆಳಗಾವಿ: ಕನ್ನಡ ಧ್ವಜ ಹಾರಿಸಿದ್ದ ತಾಳೂಕರ ಅಂಗಡಿಗೆ ಬೆಂಕಿ

ಬಣ್ಣ ಮಾಸಿ, ಹರಿದು ಹೋಗಿರುವ ಕನ್ನಡ ಧ್ವಜವನ್ನು ಬದಲಿಸಬೇಕೆಂದು ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಮೂರು ತಿಂಗಳಿಂದ ಮನವಿ ಮಾಡುತ್ತಿದ್ದರೂ ಧ್ಚಜ ಬದಲಾವಣೆ ಮಾಡಿಲ್ಲ. ಉದ್ದೇಶಪೂರ್ವಕವಾಗಿ ಪಾಲಿಕೆ ಹೀಗೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ಹಿಂದೆ ಡಿಸೆಂಬರ್ 28ರಂದು ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜ ಹಾರಾಡಿಸಲಾಗಿತ್ತು. ಈ ವೇಳೆ ಬೆಳಗಾವಿಯಲ್ಲಿ ಪರ ವಿರೋಧ ಪ್ರತಿಭಟನೆಯೂ ನಡೆದಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಿರಿಯಾನಿ ಹೋಟೆಲ್ ಕುಟುಂಬದ ಸಾಮೂಹಿಕ ಆತ್ಮ*ಹತ್ಯೆ ಕೇಸಿಗೆ ಟ್ವಿಸ್ಟ್; ವಿಷ ಸೇವಿಸದ ಅಜ್ಜಿ ಸತ್ತಿದ್ಹೇಗೆ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!