ಬಾಲನಟನಾಗಿ ಗಮನ ಸೆಳೆದಿದ್ದ ನಟ ಕಿಶನ್‌ ಈಗ ರಾಯಭಾರಿ

Kannadaprabha News   | Asianet News
Published : Jan 17, 2021, 09:19 AM IST
ಬಾಲನಟನಾಗಿ ಗಮನ ಸೆಳೆದಿದ್ದ ನಟ ಕಿಶನ್‌ ಈಗ ರಾಯಭಾರಿ

ಸಾರಾಂಶ

ಕೇರ್‌ ಆಫ್ ಫುಟ್‌ಪಾತ್ ಸಿನಿಮಾದ ಮೂಲಕ ಬಾಲನಟನಾಗಿ ಗುರುತಿಸಿಕೊಂಡಿದ್ದ ನಟ ಕಿಶನ್ ಇದೀಗ ಮಹತ್ವದ ಜವಾಬ್ದಾರಿಯೊಂದನ್ನು ವಹಿಸಿಕೊಳ್ಳುತ್ತಿದ್ದಾರೆ. 

ಬೆಂಗಳೂರು (ಜ.17):  ಬಾಲ್ಯದಲ್ಲೇ ‘ಕೇರ್‌ ಆಫ್‌ ಫುಟ್‌ಪಾತ್‌’ ಚಲನಚಿತ್ರ ನಿರ್ದೇಶನ ಮಾಡಿ ಗಮನ ಸೆಳೆದಿದ್ದ ನಟ ಕಿಶನ್‌ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಮಕ್ಕಳ ಹಕ್ಕುಗಳಿಗೆ ಸಂಬಂಧಪಟ್ಟಂತೆ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಸ್ವಯಂ ಪ್ರೇರಿತರಾಗಿ ಮುಂದೆ ಬಂದಿದ್ದಾರೆ.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಲ್ಲಿ ಅಧ್ಯಕ್ಷರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯವನ್ನು ನಟ ಕಿಶನ್‌ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ. ಆಂಥೋನಿ ಸೆಬಾಸ್ಟಿಯನ್‌ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸುಮಾರು 200 ರಾಷ್ಟ್ರಗಳ ರಾಷ್ಟ್ರಗೀತೆಗಳನ್ನು ಹಾಡುವ ಮೂಲಕ ದೇಶದ ಗಮನವನ್ನು ಸೆಳೆದಿರುವ ಯತಾರ್ಥನನ್ನು ಆಯೋಗವು ಸನ್ಮಾನಿಸಿ ಗೌರವಿಸಿತು.

ಬಿರಿಯಾನಿ ವ್ಯಾಪಾರ ಮಾಡಿದ್ರೆ ಸಾಕಾ, ಅಡುಗೆ ಮಾಡೋದು ಬೇಡ್ವಾ?; ಕಿಶನ್ ವಿಡಿಯೋ ವೈರಲ್ ..

ದಕ್ಷಿಣ ಭಾರತದ ಯುನಿಸೆಫ್‌ ಪ್ರತಿನಿಧಿಯಾದ ಸೋನಿ ಕುಟ್ಟಿಜಾಜ್‌ರ್‍, ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಎಂ.ಎಲ್‌. ಪರಶುರಾಮ, ಡಿ. ಶಂಕ್ರಪ್ಪ, ಎಚ್‌.ಸಿ. ರಾಘವೇಂದ್ರ, ಅಶೋಕ ಯರಗಟ್ಟಿ, ಭಾರತಿ ಹಾಗೂ ಆಯೋಗದ ಕಾರ್ಯದರ್ಶಿ ಇಂದಿರಾ, ಸಹಾಯಕ ನಿರ್ದೇಶಕಿ ಕವಿತಾ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲೂ ಸಾಮ್ರಾಜ್ಯ ವಿಸ್ತರಣೆಗೆ ದಳಪತಿ ಸ್ಕೆಚ್.. ಯಾರ ಸಪೋರ್ಟ್, ಏನಾಗ್ತಿದೆ ಇಲ್ಲಿ? ಸೀಕ್ರೆಟ್..
ಸರ್ಕಾರಿ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ; ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ!