SHOCKING NEWS: ಕಿತ್ತೂರು ವಿಜಯೋತ್ಸವ ಭಜನಾ ಸ್ಪರ್ಧೆ ವೇಳೆಯೇ ಕಲಾವಿದ ಹೃದಯಾಘಾತದಿಂದ ಸಾವು!

Published : Oct 28, 2024, 02:00 PM ISTUpdated : Oct 28, 2024, 02:02 PM IST
SHOCKING NEWS: ಕಿತ್ತೂರು ವಿಜಯೋತ್ಸವ ಭಜನಾ ಸ್ಪರ್ಧೆ ವೇಳೆಯೇ ಕಲಾವಿದ ಹೃದಯಾಘಾತದಿಂದ ಸಾವು!

ಸಾರಾಂಶ

ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವಿಗೀಡಾದ ಘಟನೆ ನಡೆದಿದೆ.

 ಕಿತ್ತೂರು (ಅ.28): ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವಿಗೀಡಾದ ಘಟನೆ ನಡೆದಿದೆ.

ಕಿತ್ತೂರು ತಾಲೂಕಿನ ಬಸಾಪೂರ ಗ್ರಾಮದ ಈರಪ್ಪ ಪಕ್ಕೀರಪ್ಪ ಬಬಲಿ (48) ಮೃತ ಕಲಾವಿದ. ಕಿತ್ತೂರು ವಿಜಯೋತ್ಸವ ಅಂಗವಾಗಿ ವೇದಿಕೆಯಲ್ಲಿ ಶನಿವಾರ ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಭಜನಾ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿ ವೇದಿಕೆಯಿಂದ ನಿರ್ಗಮಿಸುವ ಸಮಯದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. 

ಕೆರೆ ಕೋಡಿಲ್ಲಿ ಕೊಚ್ಚಿಹೋದ ಪ್ರಕರಣ; ಸಾವನ್ನೇ ಗೆದ್ದು ಬಂದ ಯುವತಿ!

ಕೂಡಲೇ ಕಲಾವಿದನನ್ನು ಸರ್ಕಾರಿ ತಾಲೂಕಾಸ್ಪತ್ರೆಗೆ ಒಯ್ಯಲಾಯಿತಾದರೂ ಅಷ್ಟೊತ್ತಿಗಾಗಲೇ ಅಸುನೀಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು. ಕಲಾವಿದ ಈರಪ್ಪನಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತ ಕಲಾವಿದನ ಮನೆಗೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೇಟಿ ನೀಡಿ ಸಾಂತ್ವನ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?
ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ