
ಬೆಂಗಳೂರು(ಜು.11): ಹಾಲಿಗೆ ಶೇ.5 ರಷ್ಟು ಜಿಎಸ್ಟಿ ತೆರಿಗೆಯಿದ್ದರೆ ಕಂಡೆನ್ಸ್ಡ್ ಹಾಲಿಗೆ (ಮಂದಗೊಳಿಸಿದ ಅಥವಾ ನೀರಿನಾಂಶ ತೆಗೆದ) ಶೇ.12 ರಷ್ಟು ದುಬಾರಿ ತೆರಿಗೆ ವಿಧಿಸಲಾಗುತ್ತಿದ್ದು, ಇದನ್ನು ಕಡಿಮೆ ಮಾಡಲು ಕೇಂದ್ರದ ಮೇಲೆ ಒತ್ತಡ ಹೇರುವಂತೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ ನೇತೃತ್ವದ ನಿಯೋಗವು ಸಚಿವ ಕೃಷ್ಣಬೈರೇಗೌಡ ಅವರನ್ನು ಮನವಿ ಮಾಡಿದೆ.
ಬುಧವಾರ ವಿಧಾನಸೌಧದಲ್ಲಿ ಕಂದಾಯ ಸಚಿವ ಹಾಗೂ ಜಿಎಸ್ಟಿ ಕೌನ್ಸಿಲ್ನ ಕರ್ನಾಟಕ ಪ್ರತಿನಿಧಿಯಾಗಿರುವ ಕೃಷ್ಣ ಬೈರೇಗೌಡ ಅವರನ್ನು ಭೀಮಾನಾಯ್ಕ ಭೇಟಿ ಮಾಡಿದ್ದರು. ಹಾಲಿನ ಮೇಲಿನ ದುಬಾರಿ ತೆರಿಗೆ ಇಳಿಕೆಗೆ ಕೆಎಂಎಫ್ ಆಗ್ರಹ ಹಾಲಿನ ಮೇಲಿನ ದುಬಾರಿ ತೆರಿಗೆ ಕಡಿಮೆ ಮಾಡಿದರೆ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಕ್ಕೆ (ಕೆಎಂಎಫ್) ಪ್ರತಿ ವರ್ಷ 30 ಕೋಟಿ ರು. ಉಳಿತಾಯವಾಗಲಿದೆ.
ಗ್ರಾಹಕರಿಗೆ ಹಾಲಿನ ದರ ಏರಿಕೆ, ರೈತರಿಗೆ ಮಾರಟ ದರ ಇಳಿಕೆ: ಅನ್ನದಾತನಿಗೆ ಕೋಚಿಮುಲ್ನಿಂದ ಬಿಗ್ ಶಾಕ್!
ಹೀಗಾಗಿ ಜಿಎಸ್ಟಿ ಕೌನ್ಸಿಲ್ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಕೇಂದ್ರದ ಮೇಲೆ ಒತ್ತಡ ಹೇರಬೇಕು ಎಂದು ಕೃಷ್ಣಬೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ. ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ. ಜಗದೀಶ್ ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ