
ಬೆಂಗಳೂರು (ಆ.4): ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಎರಡು ತಿಂಗಳುಗಳು ಕಳೆದಿವೆ. ವಿವಿಧ ಇಲಾಖೆಗಳ ಸಚಿವರನ್ನು ಕರೆಯಿಸಿ, ಸಮಸ್ಯೆ ಬಗೆಹರಿಸುವ ಯತ್ನವನ್ನು ಸುವರ್ಣ ನ್ಯೂಸ್ ಹಾಗೂ ಸುವರ್ಣ ನ್ಯೂಸ್.ಕಾಮ್ ಮಾಡುತ್ತಿದೆ. ನಮ್ಮ ಇಂದಿನ ಮುಖ್ಯ ಅತಿಥಿ ಪಶು ಸಂಗೋಪನೆ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಅವರು.
ಫೇಸ್ಬುಕ್ನಲ್ಲಿ ಓದುಗರೊಬ್ಬರು ಸಚಿವರ ಶೈಕ್ಷಣಿಕ ಅರ್ಹತೆ ಬಗ್ಗೆಯೂ ಪ್ರಶ್ನೆ ಕೇಳಿದ್ದರು. ಅದಕ್ಕೆ ಅವರು ಉತ್ತರಿಸಿದ್ದು ಹೇಗೆ?
ಇಲಾಖೆಯಲ್ಲಿರುವ ಹತ್ತು ಹಲವು ಸಮಸ್ಯೆಗಳನ್ನು ಪರಹರಿಸಲು ತೆಗೆದುಕೊಂಡಿರುವ ಪರಿಹಾರಗಳು, ತೆಗೆದುಕೊಂಡಿರುವ ಯೋಜನೆಗಳು...ಹೀಗೆ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಓದುಗರ ಪ್ರಶ್ನೆಗಳಿಗೆ ಸಚಿವರು ಫೇಸ್ಬುಕ್ ಲೈವ್ ಮೂಲಕ ಉತ್ತರಿಸಿರುವುದು ಹೀಗೆ....
ಮತ್ಸ್ಯಾಶ್ರಯ ಯೋಜನೆಯಲ್ಲಿ ಮೀನುಗಾರರಿಗೆ ಸೂರು ಕಲ್ಪಿಸಲು ಕೆಲವು ಯೋಜನೆಗಳನ್ನು ರೂಪಿಸಲಾಗಿದೆ. ಸ್ಥಳೀಯ ಶಾಸಕರು ಸಮಿತಿಯ ಅಧ್ಯಕ್ಷರಾಗಲಿದ್ದು, ಅರ್ಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಡಲು ವ್ಯವಸ್ಥೆ ಮಾಡಲು ಯೋಜನೆ ರೂಪಿಸಿದ್ದೇವೆ. ಕರಾವಳಿ ಭಾಗದ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಇಲಾಖೆ ಮುಂದಾಗಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್ನೊಂದಿಗೆ ಕೈ ಜೋಡಿಸಿ, ಕಟ್ಟುತ್ತಿರುವ ಮನೆಗಳನ್ನು ಗಮನಿಸಲು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ನಿಗಧಿತ ಸಮಯದೊಳಗೆ ಮನೆ ಕಟ್ಟಲು ಸೂಕ್ತ ಯೋಜನೆಗಳನ್ನು ಹಾಕಿ ಕೊಂಡಿದ್ದೇವೆ.
- ಕುರಿ ಸಾಕಣೆಯೊಂದು ಇದೀಗ ಒಂದು ಫ್ಯಾಷನ್ ಆಗಿದೆ. ಇಂಥವರನ್ನು ಪ್ರೋತ್ಸಾಹಿಸಲು ಸರಕಾರದ ಯೋಜನೆ ಏನಿದೆ, ಎಂದು ಕೇಳಿರುವ ಪ್ರಶ್ನೆಗೆ ಮಹಿಳೆಯರೆಗೆಂದೇ ಎರಡು ಹಸು ಅಥವಾ ಎರಡು ಎಮ್ಮೆ ಕೊಳ್ಳಬಹುದು. ಒಟ್ಟು 1.20 ಲಕ್ಷ ರೂ. ಮೌಲ್ಯದ ಪಶು ಕೊಳ್ಳಲು ನೆರವು ನೀಡಲಾಗುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ