ಕೃಷಿ ಕಾಯ್ದೆ ವಾಪಸ್‌ ಪಡೆವಂತೆ ರಾಜ್ಯ ಸರ್ಕಾರಕ್ಕೆ ಕೋಡಿಹಳ್ಳಿ ಒತ್ತಾಯ

Published : Jun 13, 2023, 08:17 PM IST
ಕೃಷಿ ಕಾಯ್ದೆ ವಾಪಸ್‌ ಪಡೆವಂತೆ ರಾಜ್ಯ ಸರ್ಕಾರಕ್ಕೆ   ಕೋಡಿಹಳ್ಳಿ ಒತ್ತಾಯ

ಸಾರಾಂಶ

ಈ ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವ ಕೃಷಿಕಾಯ್ದೆ ಕೂಡಲೆ ವಾಪಸ್‌ ಪಡೆಯಬೇಕೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯಿಸಿದರು.

ಕಲಬುರಗಿ (ಜೂ.13) :  ಈ ಹಿಂದಿನ ಬಿಜೆಪಿ ಸರಕಾರ ರಾಜ್ಯದಲ್ಲಿ ಅನುಷ್ಠಾನಕ್ಕೆ ತಂದಿರುವ ಕೃಷಿಕಾಯ್ದೆ ಕೂಡಲೆ ವಾಪಸ್‌ ಪಡೆಯಬೇಕೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕೃಷಿ ಕಾಯ್ದೆ ವಾಪಸ್‌ ಪಡೆಯುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೀನಮೇಷ ಎಣಿಸಬಾರದು ಎಂದು ಕಿವಿಮಾತು ಹೇಳಿದರು.

 

ಬಿಜೆಪಿಗೆ ರೈತ ಸಂಘ ಬೆಂಬಲ ನೀಡೋದಿಲ್ಲ: ಕೋಡಿಹಳ್ಳಿ ಚಂದ್ರಶೇಖರ್‌

ವಿವಾದಾತ್ಮಕ ಕೃಷಿ ಕಾಯ್ದೆಯನ್ನು ವಾಪಸ್‌ ಪಡೆಯುವುದಾಗಿ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಾಗ್ಯೂ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah)ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದಾರೆ. ಇದರಲ್ಲಿ ಪರಿಶೀಲಿಸುವುದು ಏನಿದೆ? ಈ ಹಿಂದೆ ಪ್ರತಿಪಕ್ಷದ ನಾಯಕರಾಗಿದ್ದಾಗ ಕಾಯ್ದೆಯನ್ನು ವಿರೋಧಿಸಿದವರಿಗೆ ಅದನ್ನು ರದ್ದುಪಡಿಸುವುದರಲ್ಲಿ ತೊಂದರೆ ಏನಿದೆ? ಎಂದು ಕೋಡಿಹಳ್ಳಿ ಪ್ರಶ್ನಿಸಿದರು.

ಕೃಷಿ ಕಾಯ್ದೆ(Agriculture Act) ವಾಪಸ್‌ ಪಡೆಯುವುದಕ್ಕೆ ಕೇವಲ ಕಾನೂನಾತ್ಮಕ ಘೋಷಣೆಯ ಅಗತ್ಯವಿದೆ. ಇದನ್ನು ಮಾಡಲು ಅನಗತ್ಯವಾಗಿ ಸಮಯ ತೆಗೆದುಕೊಳ್ಳಬಾರದು. ಈಗಾಗಲೇ ಎರಡು ಸಚಿವ ಸಂಪುಟ ಸಭೆಗಳಾಗಿವೆ. ಈ ಸಭೆಗಳಲ್ಲಿಯೇ ಕೃಷಿ ಕಾಯ್ದೆ ಹಿಂಪಡೆಯುವ ಕುರಿತು ನಿರ್ಧಾರ ಪ್ರಕಟಿಸಬಹುದಿತ್ತು. ಮುಂಬರುವ ಬಜೆಟ್‌ ಅಧಿವೇಶದಲ್ಲಾದರೂ ಕೃಷಿ ಕಾಯ್ದೆ ರದ್ದುಪಡಿಸಬೇಕು. ಇದರಿಂದ ಸರ್ಕಾರದ ಮೇಲೆ ಯಾವುದೇ ಆರ್ಥಿಕ ಹೊರೆ ಬೀಳುವುದಿಲ್ಲ ಎಂದರು. ಬಸನಗೌಡ, ಮಲ್ಲನಗೌಡ, ದೇವಕಿ ಉಪಸ್ಥಿತರಿದ್ದರು.

 

ಕೃಷಿ ಕಾಯ್ದೆ ಹಿಂಪಡೆಯದಿದ್ದರೆ ರೈತರ ಮತ ಬಿಜೆಪಿಗಿಲ್ಲ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ