
ಬೆಂಗಳೂರು : ಯಲಹಂಕ ಕೋಗಿಲು ಲೇಔಟ್ ಬಳಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕೋರ್ಟ್ಗೆ ಹಾಜರುಪಡಿಸಿದ ಪೊಲೀಸರು 14 ದಿನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಸ್ಥಳೀಯರಿಂದ ಹಣ ಪಡೆದು ಅನಧಿಕೃತ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್, ವಾಸಿಂ ಉಲ್ಲಾ ಬೇಗ್, ಮುನಿ ಆಂಜನಪ್ಪ ಮತ್ತು ರಾಬೀನ್ ಎಂಬುವರು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಯಲಹಂಕ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ವಿಜಯ್, ವಾಸಿಂ ಉಲ್ಲಾ ಬೇಗ್ ಅವರನ್ನು ಬುಧವಾರ ಬಂಧಿಸಿದ್ದರು. ಆರೋಪಿಗಳನ್ನು ಗುರುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳನ್ನು 14 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಆದೇಶಿಸಿದ್ದಾರೆ. ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಆರೋಪಿಗಳಾದ ವಿಜಯ್ ಮತ್ತು ವಾಸಿಂ ಸ್ಥಳೀಯ ನಿವಾಸಿಗಳಿಂದ 4 ರಿಂದ 7 ಲಕ್ಷ ರು.ವರೆಗೂ ಹಣ ಪಡೆದು ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಅಲ್ಲದೆ ಹಕ್ಕುಪತ್ರಗಳನ್ನು ಕೂಡ ನೀಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತನಿಖೆ ವೇಳೆ ಆರೋಪಿಗಳು ಜಾಗ ಕೊಡಿಸುತ್ತೇವೆಂದು ಹಲವರ ಬಳಿ ಹಣ ಪಡೆದು ವಂಚಿಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಸರ್ಕಾರಿ ಭೂಮಿ ಒತ್ತುವರಿ, ವಂಚನೆ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ. ನಕಲಿ ದಾಖಲೆ ನೀಡಿರುವುದರ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತಿದೆ. ಎಷ್ಟು ಜನರಿಂದ ಹಣ ಪಡೆದಿದ್ದಾರೆ? ಯಾವ ದಾಖಲೆಗಳನ್ನು ನಕಲಿ ಮಾಡಲಾಗಿದೆ ಎಂದು ತನಿಖೆ ಮಾಡುತ್ತಿದ್ದೇವೆ. ಯಾರೆಲ್ಲ ವಂಚನೆಗೊಳಗಾದವರಿಗೆ ದೂರು ನೀಡಲು ಹೇಳಿದ್ದೇವೆ. ಆ ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ