ಕೊಪ್ಪಳ: ಚಂದ್ರಗ್ರಹಣದ ಹಿನ್ನೆಲೆ ಹನುಮ ಜನ್ಮಸ್ಥಳ ಅಂಜನಾದ್ರಿ ದೇಗುಲ ಬಂದ್

Published : Sep 07, 2025, 08:03 PM IST
Lunar eclipse 2025

ಸಾರಾಂಶ

ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ದೇಗುಲವನ್ನು ಬಂದ್ ಮಾಡಲಾಗಿದೆ. ಪೂಜೆ ಬಳಿಕ ದೇವಾಲಯದ ಬಾಗಿಲು ಮುಚ್ಚಲಾಗಿದ್ದು, ನಾಳೆ ಬೆಳಿಗ್ಗೆ ಶುದ್ಧೀಕರಣದ ನಂತರ ತೆರೆಯಲಾಗುವುದು.

ಕೊಪ್ಪಳ (ಸೆ.7): ಇಂದು ಚಂದ್ರ ಗ್ರಹಣ ಗೋಚರ ಹಿನ್ನೆಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮ ಜನ್ಮಸ್ಥಳ ಅಂಜನಾದ್ರಿ ದೇಗುಲ ಬಂದ್ ಮಾಡಲಾಯಿತು. ಪವಿತ್ರ ಅಂಜನಾದ್ರಿ ಬೆಟ್ಟದಲ್ಲಿ ದೇಗುಲ ಬಂದ್ ಮಾಡುವ ಮುನ್ನ ಪೂಜೆ ಮಾಡಲಾಯಿತು. ಸಂಜೆ ದೇವಸ್ಥಾನದ ಪ್ರಧಾನ ಅರ್ಚಕ ವಿದ್ಯಾದಾಸಬಾಬಾ ಅವರು ವಿಶೇಷ ಮಹಾಮಂಗಳಾರತಿಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಭಕ್ತರು ಭಕ್ತಿಭಾವದ ಪೂಜಿಸಿದರು. ಪೂಜೆಯ ಬಳಿಕ ದೇವಸ್ಥಾನದ ಸಿಬ್ಬಂದಿಗಳು ಬಾಗಿಲನ್ನು ಬಂದ್ ಮಾಡಿದರು.

ಚಂದ್ರಗ್ರಹಣದ ಕಾರಣದಿಂದ ದೇವಸ್ಥಾನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ಭಕ್ತರು ಬೆಟ್ಟದಿಂದ ಕೆಳಗಿಳಿಯುವ ದೃಶ್ಯ ಕಂಡುಬಂತು.

ಅಂಜನಾದ್ರಿ ಬೆಟ್ಟವು ಶ್ರೀ ಹನುಮಂತನ ಜನ್ಮಸ್ಥಳವೆಂದು ಪರಿಗಣಿತವಾಗಿದ್ದು, ದೇಶದಾದ್ಯಂತ ಭಕ್ತರಿಗೆ ಪವಿತ್ರ ಯಾತ್ರಾಸ್ಥಳವಾಗಿದೆ. ಚಂದ್ರಗ್ರಹಣದ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಯಾವುದೇ ಪೂಜಾ ಕಾರ್ಯಕ್ರಮಗಳನ್ನು ನಡೆಸದಿರುವುದು ಶಾಸ್ತ್ರೀಯ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನವನ್ನು ಮುಚ್ಚಲಾಗಿದೆ

ನಾಳೆ ಬೆಳಗ್ಗೆ ಶುದ್ಧೀಕರಣ ಕಾರ್ಯಕ್ರಮಗಳನ್ನು ನಡೆಸಿದ ಬಳಿಕ ದೇವಸ್ಥಾನವನ್ನು ಎಂದಿನಂತೆ ಭಕ್ತರಿಗಾಗಿ ತೆರೆಯಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌