ಕೊಪ್ಪಳ: ಕೊಲೆ ಪ್ರಕರಣ ಭೇದಿಸಿದ ಮೊಬೈಲ್ ನೆಟ್ವರ್ಕ್!

Published : May 15, 2025, 12:56 PM IST
ಕೊಪ್ಪಳ: ಕೊಲೆ ಪ್ರಕರಣ ಭೇದಿಸಿದ ಮೊಬೈಲ್ ನೆಟ್ವರ್ಕ್!

ಸಾರಾಂಶ

ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಕೊಪ್ಪಳ (ಮೇ.15): ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.

ಸುರೇಶ್ (27) ಎಂಬ ಯುವಕನ ಕೊಲೆಗೆ ಕಾರಣವಾಗಿದ್ದು, ಗ್ರಾಮದ ಮಹಿಳೆಯೊಂದಿಗಿನ ಅನೈತಿಕ ಸಂಬಂಧ. ಮಧ್ಯರಾತ್ರಿ ಮಹಿಳೆಯ ಜೊತೆ ಇರುವುದನ್ನು ಆಕೆಯ ಪತಿ ಮತ್ತು ಮೈದುನ ಕಂಡಿದ್ದರು. ಇದರಿಂದ ಕೋಪಗೊಂಡ ಪತಿ ಶಿವಕುಮಾರ್, ಮೈದುನ ಮಂಜುನಾಥ್, ಜೊತೆಗೆ ಮಹೇಶ್ವರಿ ಮತ್ತು ಅಮರೇಶ್ ಎಂಬವರು ಸೇರಿ ಸುರೇಶ್‌ನನ್ನು ಕೊಲೆಗೈದಿದ್ದರು. ಕೊಲೆಯ ನಂತರ ಆರೋಪಿಗಳು ಯಾವುದೇ ಸುಳಿವು ಸಿಗದಂತೆ ಯುವಕನ ಕೈ-ಕಾಲು ಕಟ್ಟಿ, ಬಳ್ಳಾರಿ ಜಿಲ್ಲೆಯ ಕೊರೆಕೊಪ್ಪ ಸಮೀಪದ 100 ಅಡಿ ಆಳದ ಕಾಲುವೆಯ ಕಂದಕಕ್ಕೆ ಶವವನ್ನು ಎಸೆದು ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದರು.

ಇದನ್ನೂ ಓದಿ: Karnataka News Live: ಮದುವೆಗೆ ತಂದೆಯನ್ನೇ ಕರೆದಿಲ್ವಾ ಚೈತ್ರಾ ಕುಂದಾಪುರ? ' ಅದ್ದೂರಿ ವಿವಾಹ ಬೆನ್ನಲ್ಲೇ ತಂದೆ ಬಾಲ...

Read more at: https://kannada.asianetnews.com/state/karnataka-news-live-15th-may-2025-india-safest-city-list-published-bengaluru-no-1-sat-swa5jg

ಆದರೆ ಕೊಲೆಯಾದ ಸುರೇಶ್‌ನ ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳನ್ನು ಪರಿಶೀಲಿಸಿದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಕೊಲೆ ಆರೋಪಿಗಳಾದ ಶಿವಕುಮಾರ್, ಮಂಜುನಾಥ್, ಮಹೇಶ್ವರಿ ಮತ್ತು ಅಮರೇಶ್‌ರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!