
ಕೊಪ್ಪಳ (ಸೆ.15): ಫೈಲ್ ಲೈನ್ ಒಡೆದು ಅಪಾರ ಪ್ರಮಾಣದ ನೀರು ವ್ಯರ್ಥವಾಗಿ ಹರಿಯುತ್ತಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮೂದುಟಗಿ ಗ್ರಾಮದ ಬಳಿ ನಡೆದಿದೆ.
ಬಳಿ ಕೃಷ್ಣಾ ನದಿಯಿಂದ ಯಲಬುರ್ಗಾ ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಪೈಪ್ಲೈನ್ ಒಡೆದ ಪರಿಣಾಮ ಈ ಘಟನೆ ನಡೆದಿದೆ. ರವಿವಾರ ರಾತ್ರಿಯಿಂದ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಹರಿದು ಪೋಲಾಗುತ್ತಿದೆ. ಒಡೆದ ಪೈಪುಗಳಿಂದ ದೊಡ್ಡ ಪ್ರಮಾಣದಲ್ಲಿ ನೀರು ಹೊರಬರುತ್ತಿದ್ದು, ಸುತ್ತಮುತ್ತಲಿನ ರೈತರ ಜಮೀನುಗಳಿಗೆ ನೀರು ನುಗ್ಗುವ ಆತಂಕ ಎದುರಾಗಿದೆ.
ಕೃಷ್ಣಾ ನದಿಯಿಂದ ಕೆರೆ ತುಂಬಿಸುವ ಯೋಜನೆಯ ಈ ಪೈಪ್ಲೈನ್ ಒಡೆದಿರುವುದರಿಂದ ಸ್ಥಳೀಯ ರೈತರು ತಮ್ಮ ಜಮೀನು, ಬೆಳೆಗಳು ಮುಳುಗಡೆಯಾಗುವ ಭಯದಿಂದ ಕಂಗಾಲಾಗಿದ್ದಾರೆ. ಈ ಬಗ್ಗೆ ಸ್ಥಳೀಯರು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತುರ್ತು ಕ್ರಮಕ್ಕಾಗಿ ಕಾಯುತ್ತಿದ್ದಾರೆ.
ಇತ್ತೀಚೆಗೆ ತುಂಗಾಭದ್ರ ಗೇಟ್ ಒಡೆದು ಸುತ್ತಮುತ್ತಲಿನ ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಇದೀಗ ಪೈಪ್ಲೈನ್ ಒಡೆದು ಅಪಾರ ಪ್ರಮಾಣದ ನೀರು ಪಕ್ಕದ ಜಮೀನುಗಳಿಗೆ ನುಗ್ಗುತ್ತಿರುವುದರಿಂದ ಬೆಳೆಹಾನಿಯಾಗುವ ಆತಂಕದಲ್ಲಿ ರೈತರು ತಕ್ಷಣದ ಕ್ರಮಕ್ಕೆ ಎದುರು ನೋಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ