
ಕೊಪ್ಪಳ (ಅ.4): ನಾಳೆ ನಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸಲಿರುವ ಹಿನ್ನೆಲೆ ಪಟ್ಟಣದಲ್ಲಿ ಹಾಕಿರುವ ಎಲ್ಲ ಕೇಸರಿ ಬಂಟಿಂಗ್ಸ್ ತೆಗೆಯಲು ಮುಂದಾಗಿರೋ ಪೊಲೀಸರ ನಿರ್ಧಾರದ ವಿರುದ್ಧ ಹಿಂದೂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆ ನಾಡಿದ್ದು ಭಾಗ್ಯನಗರ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಲಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಎಸ್ಎಸ್ಕೆ ಸಮಾಜದವರು ಅಂಬಾಭವಾನಿ ದೇವಾಲಯದ ಮುಂದೆ ಕಟ್ಟಿರುವ ಕೇಸರಿ ಬಂಟಿಗ್ಸ್ಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಇದಕ್ಕೆ ಸ್ಥಳೀಯ ಹಿಂದೂ ಸಮಾಜದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಮುಂದೆ ಹಾದು ಹೋಗಲಿರುವ ಕಾರಣ, ಪೊಲೀಸರು ಕೇಸರಿ ಬಂಟಿಗ್ಸ್ ತೆಗೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರ ಈ ಕ್ರಮಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, 'ಜೈ ಶ್ರೀರಾಮ್' ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಗಮನಿಸಲು ಎಂಎಲ್ಸಿ ಹೇಮಲತಾ ನಾಯಕ್ ಮತ್ತು ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ್ ಕ್ರಮಕ್ಕೆ ವಿರೋಧವಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದು, ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ