ಕೊಪ್ಪಳಕ್ಕೆ ಸಿಎಂ ಆಗಮನ ಹಿನ್ನೆಲೆ, ಕೇಸರಿ ಬಂಟಿಂಗ್ಸ್ ತೆಗೆಯಲು ಸೂಚನೆ, ಪೊಲೀಸರ ನಿರ್ಧಾರಕ್ಕೆ ಹಿಂದೂ ಸಮುದಾಯ ಆಕ್ರೋಶ

Published : Oct 04, 2025, 08:06 PM IST
Koppal saffron flag controversy

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಪ್ಪಳ ಭೇಟಿಯ ಹಿನ್ನೆಲೆಯಲ್ಲಿ, ದಸರಾ ಹಬ್ಬಕ್ಕಾಗಿ ಹಾಕಲಾಗಿದ್ದ ಕೇಸರಿ ಬಂಟಿಂಗ್ಸ್‌ಗಳನ್ನು ತೆಗೆಯಲು ಪೊಲೀಸರು ಮುಂದಾಗಿದ್ದಾರೆ. ಈ ಕ್ರಮಕ್ಕೆ ಹಿಂದೂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಪ್ಪಳ (ಅ.4): ನಾಳೆ ನಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಪ್ಪಳಕ್ಕೆ ಆಗಮಿಸಲಿರುವ ಹಿನ್ನೆಲೆ ಪಟ್ಟಣದಲ್ಲಿ ಹಾಕಿರುವ ಎಲ್ಲ ಕೇಸರಿ ಬಂಟಿಂಗ್ಸ್ ತೆಗೆಯಲು ಮುಂದಾಗಿರೋ ಪೊಲೀಸರ ನಿರ್ಧಾರದ ವಿರುದ್ಧ ಹಿಂದೂ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಳೆ ನಾಡಿದ್ದು ಭಾಗ್ಯನಗರ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಆಗಮಿಸಲಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಎಸ್‌ಎಸ್‌ಕೆ ಸಮಾಜದವರು ಅಂಬಾಭವಾನಿ ದೇವಾಲಯದ ಮುಂದೆ ಕಟ್ಟಿರುವ ಕೇಸರಿ ಬಂಟಿಗ್ಸ್‌ಗಳನ್ನು ತೆರವುಗೊಳಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಇದಕ್ಕೆ ಸ್ಥಳೀಯ ಹಿಂದೂ ಸಮಾಜದವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಚು. ಆಯೋಗದಿಂದ 6 ರಾಜಕೀಯ ಪಕ್ಷಗಳಿಗೆ ಶಾಕ್: ಅಂಬೇಡ್ಕರ್ ಪೀಪಲ್ಸ್ ಪಾರ್ಟಿ, ವಾಟಾಳ್ ಪಾರ್ಟಿ ಸೇರಿ ನೋಂದಾಯಿತ ಮಾನ್ಯತೆ ಪಡೆಯದ್ದಕ್ಕೆ ಶೋಕಾಸ್ ನೋಟೀಸ್

ಸಿಎಂ ಸಿದ್ದರಾಮಯ್ಯ ಅವರು ದೇವಾಲಯದ ಮುಂದೆ ಹಾದು ಹೋಗಲಿರುವ ಕಾರಣ, ಪೊಲೀಸರು ಕೇಸರಿ ಬಂಟಿಗ್ಸ್ ತೆಗೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಪೊಲೀಸರ ಈ ಕ್ರಮಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, 'ಜೈ ಶ್ರೀರಾಮ್' ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದರು. ಪರಿಸ್ಥಿತಿಯನ್ನು ಗಮನಿಸಲು ಎಂಎಲ್‌ಸಿ ಹೇಮಲತಾ ನಾಯಕ್ ಮತ್ತು ಬಿಜೆಪಿ ಮುಖಂಡ ಡಾ. ಬಸವರಾಜ ಕ್ಯಾವಟರ್ ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸ್ ಕ್ರಮಕ್ಕೆ ವಿರೋಧವಾಗಿ ಜನರ ಆಕ್ರೋಶ ಹೆಚ್ಚಾಗುತ್ತಿದ್ದು, ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ