ಪ್ರೀತಿಯ 'ಧ್ಯಾನ'ದೀಕ್ಷೆ: ಪೀಠ ತ್ಯಜಿಸಿದ ಸ್ವಾಮೀಜಿ ಫೋಟೋ ವೈರಲ್!

Published : Mar 17, 2019, 01:43 PM ISTUpdated : Mar 17, 2019, 01:46 PM IST
ಪ್ರೀತಿಯ 'ಧ್ಯಾನ'ದೀಕ್ಷೆ: ಪೀಠ ತ್ಯಜಿಸಿದ ಸ್ವಾಮೀಜಿ ಫೋಟೋ ವೈರಲ್!

ಸಾರಾಂಶ

ಪ್ರೀತಿಯ ಬಲೆಗೆ ಬಿದ್ದ ಸರ್ವಸಂಗ ಪರಿತ್ಯಾಗಿ ಸ್ವಾಮೀಜಿ| ಪೀಠ ತ್ಯಜಿಸಿ ನಾಪತ್ತೆಯಾಗಿದ್ದ ಸ್ವಾಮೀಜಿ ಫೋಟೋ ವೈರಲ್| ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ| ಗೆಳತಿಯೊಂದಿಗೆ ಹುಟ್ಟಹಬ್ಬ ಆಚರಿಸಿಕೊಂಡ ಫೋಟೋ ವೈರಲ್|

ಕೊಪ್ಪಳ(ಮಾ.17): ಪ್ರೀತಿಗೆ ಜಗತ್ತು ಗೆಲ್ಲುವ ಶಕ್ತಿ ಇದೆ ಅಂತಾರೆ. ಅಂತದ್ದರಲ್ಲಿ ಸ್ವಾಮೀಜಿಯೊಬ್ಬರ ಮನಸ್ಸು ಬದಲಾಯಿಸಲು ಸಾಧ್ಯವಿಲ್ಲವೇ?. ಇದೆ ಅಂತಾರೆ ಕೊಪ್ಪಳದ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ.

ಹೌದು, ಪ್ರೀತಿಯ ಬಲೆಗೆ ಸಿಕ್ಕ ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಪೀಠತ್ಯಾಗ ಮಾಡಿದ್ದಲ್ಲದೆ ಅವರ ಗೆಳತಿಯೊಡನೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಕಳೆದ ಜನವರಿಯಿಂದ ಪೀಠ ಬಿಟ್ಟು ನಾಪತ್ತೆಯಾಗಿದ್ದ ಸಿದ್ಧಲಿಂಗ ಸ್ವಾಮೀಜಿ, ತಮ್ಮ ಗೆಳತಿಯೊಡನೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಚಿತ್ರ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.

ಮುಂಡರಗಿ ಕಾಲೇಜಿನಲ್ಲಿ ಪಾಠಮಾಡಲು ತೆರಳುತ್ತಿದ್ದ ಸ್ವಾಮೀಜಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಮೆಚ್ಚಿಕೊಂಡಿದ್ದರು. ಸ್ವಾಮೀಜಿ ಆ ಯುವತಿಗಾಗಿ ಪೀಠ ತ್ಯಾಗ ಮಾಡಿ ನಾಪತ್ತೆಯಾಗಿದ್ದು, ಈ ಕುರಿತಂತೆ ಭಕ್ತರು ಪ್ರಶ್ನಿಸಿದಾಗ ಮಠದ ಆಡಳಿತ ಮಂಡಳಿ ಮೌನಕ್ಕೆ ಶರಣಾಗಿತ್ತು.

ಮೂರು ತಿಂಗಳ ಬಳಿಕ ಈಗ ಸ್ವಾಮೀಜಿ ಹಾಗೂ ಯುವತಿ ಜತೆಯಾಗಿ ಹುಟ್ಟುಹಬ್ಬದ ಕೇಕ್ ಕತ್ತರಿಸುತ್ತಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ಕಾಣಿಸಿಕೊಂಡಿದ್ದು ವೈರಲ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ