
ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ನೊಂದಿಗೆ ಸೀಟು ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಹೊರಗಿಡಲಾಗಿತ್ತು.
ಜೆಡಿಎಸ್ ಮುಖಂಡರ ಜೊತೆಗೆ ಮುಂದಿನ ಲೋಕಸಭಾ ಚುನಾವಣೆ ಸೀಟು ಹಂಚಿಕೆ ಸಂಬಂಧವಾಗಿ ನಡೆಸುತ್ತಿರುವ ಸಭೆಗೆ ಮಾಹಿತಿ ಸೋರಿಕೆ ಮಾಡುತ್ತಾರೆಂದು ಮಾಧ್ಯಮದವರನ್ನು ಹೊರಗಿಡಲಾಗಿತ್ತು.
ಇವತ್ತಿನ ಸಭೆಯ ಟಿಪಿಯಲ್ಲಿ ಹೆಸರಿದ್ದರೂ ಕೂಡ ದಿನೇಶ್ ಗುಂಡೂರಾವ್ ಅವರನ್ನು ಹೊರಗಿಡಲಾಗಿದೆ. ಕೆಪಿಸಿಸಿ ಅಧ್ಯಕ್ಷರನ್ನೇಕೆ ಹೀಗೆ ನಡೆಸಿಕೊಳ್ಳಲಾಯಿತು ಎಂಬ ಬಗ್ಗೆ ಅನೇಕ ಅನುಮಾನಗಳೆದ್ದಿವೆ.
ದಿನೇಶ್ ಗುಂಡೂರಾವ್ ಹೊರಗಿಟ್ಟು ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಜಿಲ್ಲಾವಾರು ಸಭೆಯನ್ನು ನಡೆಸುತ್ತಿದ್ದು, ಮಾಹಿತಿ ಸೋರಿಕೆ ಮಾಡುತ್ತಾರೆ ಎನ್ನುವ ಶಂಕೆಯನ್ನು ಗುಂಡೂರಾವ್ ಮೇಲೆ ವ್ಯಕ್ತಪಡಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ತಮ್ಮನ್ನೇ ಆಚೆ ಇಟ್ಟು ಸಭೆ ನಡೆಸುತ್ತಿರುವ ಸಂಬಂಧ ದಿನೇಶ್ ಗುಂಡೂರಾವ್ ತಮ್ಮ ಆಪ್ತರೊಂದಿಗೆ ಬೇಸರ ವ್ಯಕ್ತಪಡಿಸಿದ್ದಾರೆಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ