ಸಿಬಿಐ ವಶದಲ್ಲಿ ವಿನಯ್ ಕುಲಕರ್ಣಿ: ಸಿಬಿಐ ರಾಜಕೀಯಕ್ಕೆ ತಲೆ ಬಾಗಬಾರದು, ಡಿಕೆಶಿ

Suvarna News   | Asianet News
Published : Nov 05, 2020, 12:56 PM ISTUpdated : Nov 05, 2020, 04:29 PM IST
ಸಿಬಿಐ ವಶದಲ್ಲಿ ವಿನಯ್ ಕುಲಕರ್ಣಿ: ಸಿಬಿಐ ರಾಜಕೀಯಕ್ಕೆ ತಲೆ ಬಾಗಬಾರದು, ಡಿಕೆಶಿ

ಸಾರಾಂಶ

ವಿನಯ್ ಕುಲಕರ್ಣಿ ಅವರ ಜೊತೆಗಿದ್ದವರನ್ನ ವಿಚಾರಣೆ ನಡೆಸಿದ ಸಿಬಿಐ| ಸಿಬಿಐ ಕಾನೂನು ಬದ್ಧವಾಗಿಯೇ ಹೋಗುತ್ತಿದೆ| ಕಾನೂನು ಬಿಟ್ಟು ಅವರು ಏನನ್ನೂ‌ ಮಾಡಲ್ಲ: ಡಿ.ಕೆ.ಶಿವಕುಮಾರ್‌| 

ಬೆಂಗಳೂರು(ನ.05): ಸ್ವಾಯತ್ತ ಸಂಸ್ಥೆಯಾದ ಸಿಬಿಐ ರಾಜಕೀಯಕ್ಕೆ ತಲೆ ಬಾಗಬಾರದು. ಮಾಜಿ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಎಷ್ಟು ಹಿಂಸೆ ಅನುಭವಿಸಿದ್ದರು. ಅವರಿಗೆ ಎಷ್ಟು ಕಿರುಕುಳ ಕೊಟ್ಟಿದ್ದರು ಎಂಬುದರ ಬಗ್ಗೆ ಗೊತ್ತಿದೆ ರಾಜಕಾರಣದಲ್ಲಿ ಚಕ್ರ ತಿರುಗುತ್ತಿರುತ್ತದೆ. ಸಿಬಿಐ ರಾಜಕೀಯ ವೆಪನ್ ಆಗಬಾರದು. ಕೆಲವು ಬಿಜೆಪಿ ನಾಯಕರು ಖುಷಿ ಪಡುತ್ತಿರಬಹುದು. ಆದರೆ, ದೇಶದ ಕಾನೂನಿ‌ನ ಬಗ್ಗೆ ನಮಗೆ ನಂಬಿಕೆ ಇದೆ. ನಮ್ಮವರು ಯಾರೂ ತಪ್ಪು ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

"

ಧಾರವಾಡ ಜಿಲ್ಲಾ ಪಂಚಾಯತಿ ಸದಸ್ಯೆ ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ವಶಕ್ಕೆ ಪಡೆದಿದೆ. ಈ ವಿಚಾರದ ಬಗ್ಗೆ ಇಂದು(ಗುರುವಾರ) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಅವರನ್ನ ಸಿಬಿಐ ವಶಕ್ಕೆ ಪಡೆದ ಬಗ್ಗೆ ನಾನು ಗಮನಿಸುತ್ತಿದ್ದೇನೆ. ಈ ಹಿಂದೆ ವಿನಯ್ ಕುಲಕರ್ಣಿ ಬಳಿ ಎಲ್ಲವನ್ನೂ ವಿಚಾರಿಸಿದ್ದೇನೆ. ಈಗಾಗಲೇ ಅವರ ಕೇಸ್ ತನಿಖೆ ಮಾಡಲಾಗಿದೆ. ಪೊಲೀಸರು ರಿಪೋರ್ಟ್ ಮಾಡಿದ್ದಾರೆ. ಆ ಭಾಗದ ಬಿಜೆಪಿ ನಾಯಕರು ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಪ್ರಭಾವಿ ಎಂದು ಮಟ್ಟ ಹಾಕೋಕೆ ಹೊರಟಿದ್ದಾರೆ. ಇದೆಲ್ಲ ಸಾಧ್ಯವಾಗೋದಿಲ್ಲ ಎಂದು ಬಿಜೆಪಿಗರಿಗೆ ಟಾಂಗ್‌ ಕೊಟ್ಟಿದ್ದಾರೆ. 

ಕಾಂಗ್ರೆಸ್ ಮಾಜಿ ಸಚಿವ ಬಿಜೆಪಿ ಸೇರ್ತಾರಾ?

ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರ ಜೊತೆಗಿದ್ದವರನ್ನ ವಿಚಾರಣೆ ನಡೆಸಿದ್ದಾರೆ.  ನನ್ನ ಮೇಲೆ ಯಡಿಯೂಪ್ಪ ಕೇಸ್ ಹಾಕಿದ್ದಾರೆ. ಸಿಬಿಐನವರು ಕಾನೂನು ಬದ್ಧವಾಗಿಯೇ ಹೋಗುತ್ತಿದ್ದಾರೆ. ಕಾನೂನು ಬಿಟ್ಟು ಅವರು ಏನನ್ನೂ‌ ಮಾಡಲ್ಲ. ನಮ್ಮ ಲೀಡರ್ಸ್‌ಗಳನ್ನ ಮುಗಿಸೋಕೆ ಇದನ್ನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. 

ಡಿ.ಜೆ ಹಳ್ಳಿ ಗಲಭೆ ವಿಚಾರದ ಬಗ್ಗೆ ಮಾತನಾಡಿದ ಡಿಕೆಶಿ, ಬೆಂಗಳೂರು ಸಿಟಿ ಹ್ಯಾಂಡಲ್ ಮಾಡೋಕೆ ಪೊಲೀಸರಗೆ ಆಗುತ್ತಿಲ್ಲ. ಅದಕ್ಕೆ ನಮ್ಮವರ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಪ್ರೆಜರ್ ಮಾಡೋಕೆ ಬಿಜೆಪಿ ಮಾಡ್ತಿರೋದು, ಇದು ಉದಾಹರಣೆ ಅಷ್ಟೇ ಎಂದಿದ್ದಾರೆ. 

ಪತ್ರಕರ್ತ ಅರ್ನಾಬ್ ಗೋಸ್ವಾಮಿ ಬಂಧನದ ಪ್ರಕರಣ ಕೂಡಾ ಗಮನಿಸುತ್ತಿದ್ದೇವೆ. ದೇಶದಲ್ಲಿ ಪ್ರಜಾಪ್ರಭುತ್ವ ಏನಾಗುತ್ತಿದೆ ಅಂತ ನೋಡುತ್ತಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಅಂತರ್ಜಾತಿ ವಿವಾಹ ಹೆಚ್ಚಾಗಬೇಕು, ಆದ್ರೆ ಒಂದರಿಂದ 2 ಮಕ್ಕಳನ್ನ ಮಾಡಿಕೊಳ್ಳಿ; ಸಿಎಂ ಸಿದ್ದರಾಮಯ್ಯ
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ