ನನ್ನನ್ನು ನೋಡಲು ಯಾರೂ ಬರಬೇಡಿ: ಡಿ.ಕೆ.ಶಿವಕುಮಾರ್‌

Kannadaprabha News   | Asianet News
Published : Sep 05, 2020, 12:33 PM IST
ನನ್ನನ್ನು ನೋಡಲು ಯಾರೂ ಬರಬೇಡಿ: ಡಿ.ಕೆ.ಶಿವಕುಮಾರ್‌

ಸಾರಾಂಶ

ಜ್ವರ ಕಡಿಮೆ ಆಗುವವರೆಗೂ ಇನ್ನೂ ಕೆಲವು ದಿನಗಳ ಕಾಲ ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ| ಸದ್ಯಕ್ಕೆ ನನ್ನು ನೋಡಲು ಯಾರೂ ಕೂಡ ಆಸ್ಪತ್ರೆಗೆ ಬರುವುದು ಬೇಡ| ಮನೆಗೂ ಬರುವುದು ಬೇಡ ಎಂದ ಮನವಿ ಮಾಡಿಕೊಂಡ ಶಿವಕುಮಾರ್‌| 

ಬೆಂಗಳೂರು(ಸೆ.05): ನನಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಭಿಮಾನಿಗಳು, ಕಾರ್ಯಕರ್ತರು ಸದ್ಯದ ಮಟ್ಟಿಗೆ ಆಸ್ಪತ್ರೆಗಾಗಲಿ, ಮನೆಗಾಗಲಿ ಆಗಮಿಸುವುದು ಬೇಡ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. 

ಜ್ವರ ಕಡಿಮೆ ಆಗುವವರೆಗೂ ಇನ್ನೂ ಕೆಲವು ದಿನಗಳ ಕಾಲ ನಾನು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲಿದ್ದೇನೆ. ಸದ್ಯಕ್ಕೆ ನನ್ನು ನೋಡಲು ಯಾರೂ ಕೂಡ ಆಸ್ಪತ್ರೆಗೆ ಬರುವುದು ಬೇಡ, ಮನೆಗೂ ಬರುವುದು ಬೇಡ ಎಂದು ಶಿವಕುಮಾರ್‌ ಕೋರಿದ್ದಾರೆ. 

ಗುಣಮುಖರಾಗಿದ್ದ ಡಿಕೆಶಿಗೆ ಮತ್ತೆ ಜ್ವರ, ಆಸ್ಪತ್ರೆಗೆ ದಾಖಲು

ಆ.25ರಂದು ಜ್ವರದ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ದೃಢಪಟ್ಟ ಬಳಿಕ ಗುಣಮುಖರಾಗಿ ಮನೆಗೆ ಮರಳಿದ್ದ ಡಿ.ಕೆ.ಶಿವಕುಮಾರ್‌ ಅವರಿಗೆ ಬುಧವಾರ ಮತ್ತೆ ಜ್ವರ ಕಾಣಿಸಿಕೊಂಡಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್