ಜಗತ್ತಿನಾದ್ಯಂತ ಕಿಲ್ಲರ್ ಕೊರೊನಾ ಸಾವಿನ ರಣಕೇಕೆ ಹಾಕ್ತಿದೆ.. ಭಾರತಕ್ಕೂ ಎಂಟ್ರಿಕೊಟ್ಟಿರೋ ಡೆಡ್ಲಿ ವೈರಸ್, ದೇಶಾದ್ಯಂತ ಈವರೆಗೆ 5 ಮಂದಿಯನ್ನ ಬಲಿ ಪಡೆದುಕೊಂಡಿದ್ರೆ.. 275ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದೆ.. ಕಾಡ್ಗಿಚ್ಚಿನಂತೆ ಹಬ್ಬುತ್ತಿರೋ ಮಾರಕ ಮಹಾಮಾರಿ ವಿರುದ್ಧ ಪ್ರಧಾನಿ ಮೋದಿ ಸಮರ ಸಾರಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಹ ಸಾಥ್ ಕೊಟ್ಟಿದ್ದಾರೆ. ಹಾಗಾದ್ರೆ ಡಿಕೆಶಿ ಏನು ಹೇಳಿದ್ದಾರೆ ಬನ್ನಿ ನೋಡೋಣ
ಬೆಂಗಳೂರು, [ಮಾ.21]: ದೇಶದಾದ್ಯಂತ ಸೋಂಕಿತರ ಸಂಖ್ಯೆ ದಿನದಿನಕ್ಕೆ ಏರುತ್ತಲೇ ಇದೆ. ದೇಶಾದ್ಯಂತ 300ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. ಮಹಾರಾಷ್ಟ್ರದಲ್ಲಂತೂ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಲೇ ಇದ್ದು, ಒಟ್ಟು 65ಕ್ಕೇರಿದೆ.
ಇನ್ನು ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 5 ಜನರಿಗೆ ಕೊರೋನಾ ಇರುವುದು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.ಮತ್ತೊಂದೆಡೆ ಡೆಡ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ಜನತಾ ಕರ್ಫ್ಯೂ ಪಾಲಿಸುವಂತೆ ದೇಶದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ದೇಶದಾದ್ಯಂತ ಪಕ್ಷಾತೀತವಾಗಿ ವ್ಯಾಪಕ ಬೆಂಬಲವಾಕ್ತವಾಗಿದೆ.
ಜನತಾ ಕರ್ಫ್ಯೂ ಬಗ್ಗೆ ಯಡಿಯೂರಪ್ಪ ವಿಶೇಷ ಮನವಿ: ಏನು ಹೇಳಿದ್ದಾರೆ ನೊಡಿ..!
ಇನ್ನು ಈ ಬಗ್ಗೆ ಮಾತನಾಡಿದ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ, ಎಲ್ಲರೂ ಒಟ್ಟಾಗಿ ಸೇರಿ ಇದನ್ನ ಎದುರಿಸಬೇಕಿದೆ. ತಡವಾಯಿತೋ ಇಲ್ಲವೇ ಬೇಗ ಆಯ್ತೋ ಗೊತ್ತಿಲ್ಲ. ಆದರೆ ಜಾಗೃತಿ ಮೂಡಿಸುವ ಕೆಲಸ ಮಾಡ್ತಿದ್ದೇವೆ. ಜನತಾ ಕರ್ಫ್ಯೂ ಕುರಿತ ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ. ನಮ್ಮ ಕಾಂಗ್ರೆಸ್ ಪಕ್ಷ ರೋಗ ನಿಯಂತ್ರಣಕ್ಕೆ ಬೇಕಾದ ಸಹಕಾರ ನೀಡುತ್ತದೆ ಎಂದರು.
ಅಷ್ಟಕ್ಕೂ ಮೋದಿ ಏಕೆ #JanataCurfewಗೆ ಕರೆ ನೀಡಿದ್ದು?
ಜೊತೆಗೆ, ರಾಜ್ಯದ ಜನರೂ ಸಹ ಕೈಜೋಡಿಸಬೇಕಿದೆ. ಕೊರೊನಾ ನಿಯಂತ್ರಣಕ್ಕಾಗಿಯೇ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪ್ರಸ್ತುತ ಬಜೆಟ್ ಅಧಿವೇಶನದಲ್ಲಿಯೇ ಈ ಪ್ಯಾಕೇಜ್ನ್ನು ಘೋಷಿಸಬೇಕು. ಯಾವುದರಲ್ಲಿ ಕಡಿಮೆ ಮಾಡಿದರೂ ಸರಿಯೇ. ಎಲ್ಲ ಸಾಮಾನ್ಯ ವರ್ಗದ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಡಿಕೆಎಸ್ ಇದೇ ವೇಳೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡಿದರು.