ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗಿಗಳನ್ನು ಹುಡುಕಿ ಉದ್ಯೋಗ: ಡಿಕೆಶಿ ಘೋಷಣೆ

Published : Jul 12, 2022, 05:00 AM IST
ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗಿಗಳನ್ನು ಹುಡುಕಿ ಉದ್ಯೋಗ: ಡಿಕೆಶಿ ಘೋಷಣೆ

ಸಾರಾಂಶ

ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರನ್ನು ಹುಡುಕಿ, ಅವರಿಗೆ ಉದ್ಯೋಗ ಸೃಷ್ಟಿಸುವ ಬಗ್ಗೆ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದೆ. ಇದಕ್ಕಾಗಿ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯದ ಪ್ರತಿ ಮನೆ-ಮನೆಗೂ ಹೋಗಿ ನಿರುದ್ಯೋಗಿ ಯುವಕರ ಸಮೀಕ್ಷೆ ನಡೆಸಿ ಅವರ ನಿರೀಕ್ಷೆಗಳನ್ನು ಅರಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಜು.12): ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ನಿರುದ್ಯೋಗಿ ಯುವಕರನ್ನು ಹುಡುಕಿ, ಅವರಿಗೆ ಉದ್ಯೋಗ ಸೃಷ್ಟಿಸುವ ಬಗ್ಗೆ ಕಾರ್ಯಕ್ರಮ ರೂಪಿಸಲು ಚಿಂತನೆ ನಡೆಸಿದೆ. ಇದಕ್ಕಾಗಿ ಕಾಂಗ್ರೆಸ್‌ ಕಾರ್ಯಕರ್ತರು ರಾಜ್ಯದ ಪ್ರತಿ ಮನೆ-ಮನೆಗೂ ಹೋಗಿ ನಿರುದ್ಯೋಗಿ ಯುವಕರ ಸಮೀಕ್ಷೆ ನಡೆಸಿ ಅವರ ನಿರೀಕ್ಷೆಗಳನ್ನು ಅರಿಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಜ್ಯ ಯುವ ಕಾಂಗ್ರೆಸ್‌ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಯುವ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

‘ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಹೆಚ್ಚಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ನರೇಂದ್ರ ಮೋದಿ ಸರ್ಕಾರ ಉದ್ಯೋಗಿಗಳನ್ನೂ ನಿರುದ್ಯೋಗಿಗಳನ್ನಾಗಿಸಿ ಬೀದಿಗೆ ತಳ್ಳಿದೆ. ಆದರೆ, ನಾವು ನಿರುದ್ಯೋಗ ವಿಚಾರವಾಗಿ ಬಿಜೆಪಿ ಟೀಕಿಸಲು ಸೀಮಿತರಾಗುವುದಿಲ್ಲ. ನಿರುದ್ಯೋಗಿ ಯುವಕರಿಗೆ ಸಾಧ್ಯವಾದಷ್ಟುಉದ್ಯೋಗ ಕಲ್ಪಿಸಲು ಕಾರ್ಯಕ್ರಮ ರೂಪಿಸಲಾಗುವುದು. ಇದಕ್ಕಾಗಿ ರಾಜ್ಯದಲ್ಲಿ ಎಷ್ಟುಮಂದಿ ವಿದ್ಯಾವಂತ ಯುವಕರಿದ್ದಾರೆ. ಅದರಲ್ಲಿ ಎಷ್ಟು ಮಂದಿ ಉದ್ಯೋಗಿ ಹಾಗೂ ನಿರುದೋಗಿಗಳಿದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕಬೇಕು’ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

Karnataka Politics: ನಿರುದ್ಯೋಗ ಸಮಸ್ಯೆಗೆ ಕಾಂಗ್ರೆಸ್ ಹೊಸ ಸೂತ್ರ

‘ಜನಸಂಖ್ಯೆ ಹೆಚ್ಚುತ್ತಿದ್ದಂತೆ ಉದ್ಯೋಗಗಳ ಅಗತ್ಯತೆಯೂ ಹೆಚ್ಚಿದೆ. ದೇಶದಲ್ಲಿ 18 ವರ್ಷದಿಂದ 40 ವರ್ಷದ ವಯೋಮಾನದವರು ಶೇ.47 ರಷ್ಟುಜನ ಇದ್ದಾರೆ. ಹೀಗಾಗಿ ನಿರುದ್ಯೋಗಿ ಯುವಕರ ಪರವಾಗಿ ಕಾಂಗ್ರೆಸ್‌ ಪಕ್ಷದ ಮುಂದಿನ ಚಿಂತನೆ ಹೇಗಿರಬೇಕು? ಅವರು ಏನನ್ನು ನಿರೀಕ್ಷಿಸುತ್ತಿದ್ದಾರೆ? ಕೊರೋನಾ ಸಮಯದಲ್ಲಿ ಉದ್ಯೋಗ ಕಳೆದುಕೊಂಡವರು ಯಾರು? ಎಷ್ಟುಮಂದಿ ನಿರುದ್ಯೋಗಿಗಳಿದ್ದಾರೆ? ಎಂಬುದನ್ನು ಅರಿಯಬೇಕು’ ಎಂದು ಸೂಚಿಸಿದರು.

ಮನುಷ್ಯತ್ವವೇ ಇಲ್ಲದ ಅವಿವೇಕಿ ಶಿಕ್ಷಣ ಸಚಿವ ನಾಗೇಶ್‌ ಎಡವಟ್ಟುಗಳು ಒಂದೋ, ಎರಡೋ?: ಸಿದ್ದು

ಆನ್‌ಲೈನ್‌, ಆಫ್‌ಲೈನ್‌ ಸಮೀಕ್ಷೆ: ‘ಮುಂದೆ ನಾವು ಚುನಾವಣೆಗೆ ಹೋಗುವಾಗ ಯುವಕರಿಗೆ ಯಾವ ಭರವಸೆ ನೀಡಬೇಕು? ಪ್ರಣಾಳಿಕೆಯಲ್ಲಿ ಏನನ್ನು ಹೇಳಬೇಕು ಎಂಬುದನ್ನು ನಿರ್ಧರಿಸಲು ಸಮೀಕ್ಷೆಯಿಂದ ಅನುಕೂಲವಾಗಲಿದೆ. ಹೀಗಾಗಿ ಪಕ್ಷ ನಿಮಗೆ ಅಗತ್ಯ ನೆರವು ನೀಡಲಿದ್ದು ಮನೆ ಮನೆಗೂ ಹೋಗಿ ಆಫ್‌ಲೈನ್‌ ಅಥವಾ ಆನ್‌ಲೈನ್‌ ಸಮೀಕ್ಷೆ ಮಾಡಬೇಕು. ಆನ್‌ಲೈನ್‌ ಸಮೀಕ್ಷೆಗೆ ಆ್ಯಪ್‌ ಕೂಡ ಸಿದ್ಧಪಡಿಸಲಾಗಿದೆ. ಆ ಮೂಲಕ ಯುವಕರು ಏನನ್ನು ಬಯಸುತ್ತಿದ್ದಾರೆ ಎಂಬ ಅಭಿಪ್ರಾಯ ಸಂಗ್ರಹಿಸಬೇಕು. ಈ ರೀತಿ ಮಾಡುವುದರಿಂದ ಪಕ್ಷಕ್ಕೆ ಯಾರು ಸ್ಪಂದಿಸುತ್ತಾರೆ, ಯಾರು ಸ್ಪಂದಿಸುವುದಿಲ್ಲ ಎಂಬುದು ತಿಳಿಯುತ್ತದೆ’ ಎಂದರು. ಇದೇ ವೇಳೆ, ಬಿಜೆಪಿಯ ಭ್ರಷ್ಟಾಚಾರ ಹಾಗೂ ಹಗರಣಗಳ ವಿರುದ್ಧ ಹೋರಾಡುವಂತೆ ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ