ಬರೆ ಎಳೆದಂತಾಗಿದೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮುಖ್ಯಮಂತ್ರಿಗೆ ಪತ್ರ

Kannadaprabha News   | Asianet News
Published : Nov 09, 2020, 09:15 AM IST
ಬರೆ ಎಳೆದಂತಾಗಿದೆ : ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮುಖ್ಯಮಂತ್ರಿಗೆ ಪತ್ರ

ಸಾರಾಂಶ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೈ ಮುಖಂಡ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ. 

ಬೆಂಗಳೂರು (ನ.09):  ‘ಕೊರೋನಾದಿಂದ ಜನರು ನರಳುತ್ತಿರುವಾಗ ವಿದ್ಯುತ್‌ ದರ ಏರಿಕೆ ಖಂಡನೀಯ. ರಾಜ್ಯ ಸರ್ಕಾರ ಕೂಡಲೇ ವಿದ್ಯುತ್‌ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ‘ಕಳೆದ 9 ತಿಂಗಳಿಂದ ಕೊರೋನಾ ಸೋಂಕು ಜನರನ್ನು ಬಾಧಿಸುತ್ತಿದೆ. ಪರಿಣಾಮ ಜನಸಾಮಾನ್ಯರ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು ಜೀವನ ನಿರ್ವಹಣೆಯೂ ಕಷ್ಟಎಂಬಂತಾಗಿದೆ. ಭಾರೀ ಪ್ರಮಾಣದಲ್ಲಿ ಉದ್ಯೋಗ ನಷ್ಟಉಂಟಾಗಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದಂತಾಗಿದೆ. ವ್ಯಾಪಾರಗಳಿಲ್ಲದೆ ವ್ಯಾಪಾರಿಗಳು ಸಹ ನಷ್ಟಕ್ಕೆ ಗುರಿಯಾಗಿದ್ದಾರೆ. ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ರೈತರ ಉತ್ಪನ್ನಗಳು ಹಾಗೂ ಬದುಕು ಹಾಳಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯುತ್‌ ದರ ಏರಿಕೆ ಮಾಡಿದ್ದು ಬಡವರ ಹೊಟ್ಟೆಯ ಮೇಲೆ ಬರೆ ಎಳೆದಂತಾಗಿದೆ’ ಎಂದು ಕಿಡಿ ಕಾರಿದ್ದಾರೆ.

'ಎಲ್ಲವೂ ಉಲ್ಟಾಪಲ್ಟಾ : ಎರಡೂ ಕಡೆ ಕೈ ಗೆಲುವು ಖಚಿತ' ...

‘ರಾಜ್ಯದಲ್ಲಿ ಈಗಾಗಲೇ ಜನರು ಸಂಕಷ್ಟದಲ್ಲಿರುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುವವರೆಗೆ ವಿದ್ಯುತ್‌ ದರ ಏರಿಕೆಯಂತಹ ನಿರ್ಧಾರಗಳನ್ನು ಕೈಬಿಡಬೇಕು. ಈ ಕೂಡಲೇ ಆದೇಶ ಹಿಂಪಡೆಯಬೇಕು’ ಒತ್ತಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Karnataka News Live: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ - ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್