'ಗುಂಪುಗಾರಿಕೆ, ಒಳಜಗಳ ನಿಲ್ಲದಿದ್ರೆ ರಾಜ್ಯ ಕಾಂಗ್ರೆಸ್‌ ಚೇತರಿಕೆ ಅಸಾಧ್ಯ'

Published : Jan 15, 2020, 08:56 AM ISTUpdated : Jan 15, 2020, 08:57 AM IST
'ಗುಂಪುಗಾರಿಕೆ, ಒಳಜಗಳ ನಿಲ್ಲದಿದ್ರೆ ರಾಜ್ಯ ಕಾಂಗ್ರೆಸ್‌ ಚೇತರಿಕೆ ಅಸಾಧ್ಯ'

ಸಾರಾಂಶ

ಗುಂಪುಗಾರಿಕೆ, ಒಳಜಗಳ ನಿಲ್ಲದಿದ್ರೆ ರಾಜ್ಯ ಕಾಂಗ್ರೆಸ್‌ ಚೇತರಿಕೆ ಅಸಾಧ್ಯ| ಸೋನಿಯಾಗೆ ನೇರವಾಗಿ ಹೇಳಿದ ಸಿದ್ದರಾಮಯ್ಯ| ‘ನನ್ನನ್ನು ಇನ್ನೂ ವಲಸಿಗ ಎಂದೇ ಬಿಂಬಿಸುತ್ತಿದ್ದಾರೆ’

ಬೆಂಗಳೂರು[ಜ.15]: ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಹಾಗೂ ಗುಂಪುಗಾರಿಕೆಗೆ ಅಂತ್ಯ ಹಾಡದಿದ್ದರೆ ಯಾರಿಗೆ ನಾಯಕತ್ವ ನೀಡಿದರೂ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಚೇತರಿಕೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇರವಾಗಿ ಸೋನಿಯಾ ಗಾಂಧಿ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷ ಮಾತನಾಡಿದ ಸಿದ್ದರಾಮಯ್ಯ ಅವರು, ತಮ್ಮನ್ನು ಇನ್ನೂ ವಲಸಿಗ ಎಂದೇ ಪಕ್ಷದ ಕೆಲ ನಾಯಕರು ಬಿಂಬಿಸಲು ಯತ್ನಿಸುತ್ತಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಇನ್ನೂ ಮೂಲ ಹಾಗೂ ವಲಸಿದ ಕಾಂಗ್ರೆಸ್ಸಿಗ ಎಂಬ ಭಾವನೆ ಬೆಳೆಸಲು ಕೆಲ ನಾಯಕರು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಪಕ್ಷದ ಎರಡನೇ ಹಂತದ ನಾಯಕರು ಒಗ್ಗೂಡಲು ಈ ನಾಯಕರು ಬಿಡುತ್ತಿಲ್ಲ. ಉಪ ಚುನಾವಣೆ ವೇಳೆ ಉದ್ದೇಶಪೂರ್ವಕ ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷಕ್ಕೆ ಹಾನಿಯುಂಟಾಗುವಂತೆ ನಡೆದುಕೊಳ್ಳುತ್ತಾರೆ. ಇಂತಹ ಧೋರಣೆಗೆ ಕಡಿವಾಣ ಹಾಕದಿದ್ದರೆ ಹಾಗೂ ರಾಜ್ಯದ ಎಲ್ಲರೂ ಒಗ್ಗೂಡುವಂತೆ ಮಾಡಲು ಹೈಕಮಾಂಡ್‌ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ರಾಜ್ಯದಲ್ಲಿ ಪಕ್ಷ ಬಲಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು ಎನ್ನಲಾಗಿದೆ.

KPCCಗೆ ಡಿಕೆಶಿ ನೇಮಕ : ಸೋನಿಯಾ v/s ರಾಹುಲ್‌ ಬಣ!

ಅಲ್ಲದೆ, ಉಪ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣಗಳನ್ನು ವಿವರವಾಗಿ ತಿಳಿಸಿದ್ದು, ಅನರ್ಹರನ್ನು ಸಚಿವರನ್ನಾಗಿ ಮಾಡುವ ಪ್ರಲೋಭನೆಯನ್ನು ಬಿಜೆಪಿ ನೀಡಿದ್ದರಿಂದ ಜನರು ಆ ಪಕ್ಷವನ್ನು ಬೆಂಬಲಿಸಿದ್ದಾರೆ. ಆದರೆ, ಈ ಪರಿಸ್ಥಿತಿ ಭವಿಷ್ಯದಲ್ಲೂ ಇರುವುದಿಲ್ಲ. ಬಿಜೆಪಿಯಲ್ಲಿ ಆಂತರಿಕವಾಗಿ ವ್ಯಾಪಕ ಸಮಸ್ಯೆಯಿದೆ. ಇದನ್ನು ಬಳಸಿಕೊಂಡರೆ ಕಾಂಗ್ರೆಸ್‌ಗೆ ಉತ್ತಮ ಅವಕಾಶವಿದೆ. ಆದರೆ, ಕೆಲ ನಾಯಕರು ಮೂಲ ಹಾಗೂ ವಲಸಿಗ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುವುದಕ್ಕೆ ಕಡಿವಾಣ ಬೀಳದಿದ್ದರೆ ಈ ಅವಕಾಶವನ್ನು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ