ಬಿಎಂಟಿಸಿ ನೂತನ ಅಧ್ಯಕ್ಷರಾಗಿ ವಾಗ್ಮಿ ನಿಕೇತ್ ರಾಜ್ ಮೌರ್ಯ ಅಧಿಕಾರ ಸ್ವೀಕಾರ

Published : Sep 27, 2025, 01:17 PM IST
Niketh Raj Maurya

ಸಾರಾಂಶ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವಕ್ತಾರರಾದ ನಿಕೇತ್ ರಾಜ್ ಮೌರ್ಯ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಿಎಂಟಿಸಿಯನ್ನು ಮತ್ತಷ್ಟು ಜನಪರ ಮತ್ತು ಪರಿಣಾಮಕಾರಿಯಾಗಿಸಲು ಶ್ರಮಿಸುವುದಾಗಿ ಅವರು ಭರವಸೆ ನೀಡಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಪೈಕಿ ಪ್ರಮುಖವಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಗೆ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಹಾಗೂ ನಿರ್ದೇಶಕರ ಮಂಡಳಿ ಸದಸ್ಯರು ಹಾಜರಿದ್ದು, ಪುಷ್ಪಗುಚ್ಛ ನೀಡಿ ನೂತನ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆಯ ಭವಿಷ್ಯದ ಅಭಿವೃದ್ಧಿ, ನವೀನ ಯೋಜನೆಗಳು ಹಾಗೂ ಪ್ರಯಾಣಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವ ನಿಟ್ಟಿನಲ್ಲಿ ನಿಕೇತ್ ರಾಜ್ ಮೌರ್ಯ ತಮ್ಮ ನಿಲುವು ವ್ಯಕ್ತಪಡಿಸಿದರು.

ಖ್ಯಾತ ವಾಗ್ಮಿ, ಕಾಂಗ್ರೆಸ್ ವಕ್ತಾರ ಮೌರ್ಯ

ನಿಕೇತ್ ರಾಜ್ ಮೌರ್ಯ ಅವರು ರಾಜಕೀಯ ಕ್ಷೇತ್ರದಲ್ಲಿಯೂ ಚಿರಪರಿಚಿತರಾಗಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವಕ್ತಾರರಾಗಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿ ತಮ್ಮ ಚುರುಕು ಕಾರ್ಯಶೈಲಿ ಹಾಗೂ ಸಂಘಟನಾ ಕೌಶಲ್ಯದಿಂದ ಅವರು ಹೊಸ ಹುದ್ದೆಯಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದ್ದಾರೆ.

ಎಕ್ಸ್ ನಲ್ಲಿ ಸಂತಸ ಹಂಚಿಕೊಂಡ ಮೌರ್ಯ

ಬಿಎಂಟಿಸಿಗೆ ನೂತನ ಅಧ್ಯಕ್ಷರಾಗಿ ನೇಮಕವಾದ ಬೆನ್ನಲ್ಲೇ ಟ್ವೀಟ್ ಮಾಡಿರುವ ನಿಕೇತ್ ರಾಜ್ ಮೌರ್ಯ ಅವರು, ಓರ್ವ ಸಾಮಾನ್ಯ ಕಾರ್ಯಕರ್ತ ನಾಗಿ ಕೆಲಸವನ್ನು ಪ್ರಾರಂಭಿಸಿದ್ದ ನನಗೆ, ಇಂದು ಕರ್ನಾಟಕ ಕಾಂಗ್ರೆಸ್ ಸರ್ಕಾರವು “ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಅಧ್ಯಕ್ಷ” ಸ್ಥಾನದಂತಹ ಮಹೋನ್ನತ ಸ್ಥಾನವನ್ನು ನೀಡಿರುವುದು ನನ್ನ ಜವಾಬ್ದಾರಿಯನ್ನು ಮತ್ತು ಪಕ್ಷದ ಋಣವನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮಹತ್ತರವಾದ ಹೊಣೆಗಾರಿಕೆಯನ್ನು ನನಗೆ ವಹಿಸಿದ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರಿಗೆ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ರವರಿಗೆ, ಗೃಹಸಚಿವ ಶ್ರೀ ಜಿ. ಪರಮೇಶ್ವರ್ ರವರಿಗೆ ಮತ್ತು ಸಾರಿಗೆ ಸಚಿವ ಶ್ರೀ ರಾಮಲಿಂಗ ರೆಡ್ಡಿ ರವರಿಗೆ ನಾನು ಸದಾ ಅಭಾರಿ. ಜನಸೇವೆಯೇ ಧ್ಯೇಯವಾಗಿಸಿಕೊಂಡು, ಸಾರ್ವಜನಿಕರ ವಿಶ್ವಾಸಕ್ಕೆ ತಕ್ಕಂತೆ ಬಿಎಂಟಿಸಿಯನ್ನು ಮತ್ತಷ್ಟು ಜನಪರ ಮತ್ತು ಪರಿಣಾಮಕಾರಿಯಾಗಿಸಲು ನಾನು ಶ್ರಮಿಸುತ್ತೇನೆ ಎಂದು ಈ ಮೂಲಕ ನಾನು ಪ್ರಮಾಣಿಕರಿಸುತ್ತೇನೆ! ಸಹಕರಿಸಿದ ಸರ್ವರಿಗೂ ಕೃತಜ್ಞತೆಗಳು ಎಂದು ಬರೆದು ಕೊಂಡಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!