ಲೆಕ್ಕ ಸಹಾಯಕರ ಹುದ್ದೆಗೆ ಇಂದು ಬಿಗಿಭದ್ರತೆಯಲ್ಲಿ ಕೆಪಿಎಸ್ಸಿ ಪರೀಕ್ಷೆ, ಈ ವಸ್ತುಗಳು ತರುವಂತಿಲ್ಲ!

Published : Dec 17, 2023, 10:55 AM IST
ಲೆಕ್ಕ ಸಹಾಯಕರ ಹುದ್ದೆಗೆ ಇಂದು ಬಿಗಿಭದ್ರತೆಯಲ್ಲಿ ಕೆಪಿಎಸ್ಸಿ ಪರೀಕ್ಷೆ, ಈ ವಸ್ತುಗಳು ತರುವಂತಿಲ್ಲ!

ಸಾರಾಂಶ

ಇತ್ತೀಚಿನ ಸರ್ಕಾರಿ ಹುದ್ದೆಗಳ ನೇಮಕದ ಪರೀಕ್ಷಾ ಅಕ್ರಮದಿಂದ ರಾಜ್ಯ ಸರ್ಕಾರ ಮತ್ತಷ್ಟು ಎಚ್ಚೆತ್ತಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕರ 67 (ಆರ್.ಪಿ.ಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಕೆಪಿಎಸ್‌ಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಬೆಂಗಳೂರು (ಡಿ.17): ಇತ್ತೀಚಿನ ಸರ್ಕಾರಿ ಹುದ್ದೆಗಳ ನೇಮಕದ ಪರೀಕ್ಷಾ ಅಕ್ರಮದಿಂದ ರಾಜ್ಯ ಸರ್ಕಾರ ಮತ್ತಷ್ಟು ಎಚ್ಚೆತ್ತಿದೆ. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕರ 67 (ಆರ್.ಪಿ.ಸಿ) ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಕೆಪಿಎಸ್‌ಸಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

 ಅಭ್ಯರ್ಥಿಗಳ ನೈಜತೆ ಪತ್ತೆಗೆ 'ಬಯೋಮೆಟ್ರಿಕ್ ಫೇಸ್ ರೆಕಗ್ನಿಷನ್' ವ್ಯವಸ್ಥೆ ಬಳಕೆ ಮಾಡಲಾಗುತ್ತಿದೆ. ಇದೇ ವೇಳೆ, ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಮೊಬೈಲ್ ನೆಟ್ವರ್ಕ್ ಜಾಮರ್‌ ಅಳವಡಿಸಲಾಗಿದ್ದು, ಪರೀಕ್ಷಾ ಉಪ ಕೇಂದ್ರಗಳ ಸಂವೀಕ್ಷಕರಿಗೆ ಬಾಡಿ ಕ್ಯಾಮೆರಾವನ್ನು ಅಳವಡಿಸಲಾಗುತ್ತದೆ. ಈ ಮೂಲಕ ಬ್ಲೂಟೂತ್ ಬಳಸಿ ಪರೀಕ್ಷಾ ಅಕ್ರಮ ನಡೆಸುವ ಹುನ್ನಾರಗಳಿಗೆ ಕಡಿವಾಣ ಹಾಕಲಾಗಿದೆ.

4 ವರ್ಷದಿಂದ ನಡೆಯದ ಎಫ್‌ಡಿಎ, ಎಸ್‌ಡಿಎ ನೇಮಕಾತಿ, 150 ಹುದ್ದೆಗಳ ನೇಮಕಕ್ಕೆ 5 ಲಕ್ಷಕ್ಕೂ ಹೆಚ್ಚು ಅರ್ಜಿ ನಿರೀಕ್ಷೆ!

ಕೇವಲ ಸರ್ಕಾರಿ ಕಾಲೇಜಲ್ಲಿ ಪರೀಕ್ಷೆ: ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ

ಪರೀಕ್ಷಾ ಅಕ್ರಮಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇವಲ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಮಾತ್ರ ಪರೀಕ್ಷಾ ಉಪಕೇಂ ದ್ರಗಳಾಗಿ ಆರಿಸಲಾಗಿದೆ. ಬೆಂಗಳೂರು, ಬೆಳಗಾವಿ, ಕಲಬುರಗಿ, ಧಾರವಾಡ, ಯಾದಗಿರಿ ಸೇರಿ 22 ಜಿಲ್ಲಾ ಕೇಂದ್ರಗಳಲ್ಲಿನ 114 ಪರೀಕ್ಷಾ ಉಪ ಕೇಂದ್ರಗಳಲ್ಲಿ 44 ಸಾವಿರ ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ.

2,000 ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಸಜ್ಜು

ಇವುಗಳು ನಿಷಿದ್ದ

  • ಯಾವುದೇ ಆಧುನಿಕ ಉಪಕರಣ, ಮೊಬೈಲ್ ಫೋನ್, ಬ್ಲೂಟೂತ್, ಕ್ಯಾಲ್ ಕ್ಯುಲೇಟರ್, ವೈಟ್ ಫ್‌ಲ್ಯೂಯೆಡ್, ವೈರ್‌ಲೆಸ್‌ ಸೆಟ್‌ಗಳು, ಪೇಪರ್, ಬುಕ್ ತೆಗೆದುಕೊಂಡು ಹೋಗುವಂತಿಲ್ಲ.
  •  ಮಂಗಳಸೂತ್ರ, ಕಾಲುಂಗರ ಹೊರತುಪಡಿಸಿ ಯಾವುದೇ ಆಭರಣ ಧರಿಸುವಂತಿಲ್ಲ.
  • ಕಿವಿ, ಬಾಯಿ ಮುಚ್ಚಿಕೊಳ್ಳುವಂತೆ ಅಥವಾ ಯಾವುದೇ ಫಿಲ್ಟರ್‌ಇರುವ ಫೇಸ್ ಮಾಸ್ಕ್ ಅನ್ನು ಧರಿಸುವಂತಿಲ್ಲ.
  •  ತುಂಬು ತೋಳಿನ ಶರ್ಟ್, ಪುಲ್ ಓವರ್, ಜಾಕೆಟ್, ಸೈಟರ್ ಧರಿಸುವಂತಿಲ್ಲ.
  • ಲೋಹದ ನೀರಿನ ಬಾಟಲಿ, ಪಾರದರ್ಶಕವಲ್ಲದ ನೀರಿನ ಬಾಟಲಿಗೆ ನಿಷೇಧ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ
'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ