ಕೆಆರ್‌ಎಸ್‌ ಜಲಾಶಯದಲ್ಲಿ 101.56 ಅಡಿ ನೀರು ಸಂಗ್ರಹ; ಜು.8ರಿಂದ ಮಂಡ್ಯ ವಿಸಿ ನಾಲೆಗೆ ನೀರು ಹರಿವು

Published : Jul 06, 2024, 08:47 PM IST
ಕೆಆರ್‌ಎಸ್‌ ಜಲಾಶಯದಲ್ಲಿ 101.56 ಅಡಿ ನೀರು ಸಂಗ್ರಹ; ಜು.8ರಿಂದ ಮಂಡ್ಯ ವಿಸಿ ನಾಲೆಗೆ ನೀರು ಹರಿವು

ಸಾರಾಂಶ

ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ 101 ಅಡಿ ತಲುಪಿದ್ದು, ಜು.8 ರಿಂದ ಮಂಡ್ಯದ ವಿಶ್ವೇಶ್ವರಯ್ಯ ನಾಲೆಗೆ ನೀರು ಹರಿಸಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಬೆಂಗಳೂರು (ಜು.06): ಕೆ.ಆರ್.ಎಸ್. ಜಲಾಶಯದಲ್ಲಿ ಶನಿವಾರ ಸಂಜೆ 8 ಗಂಟೆ ವೇಳೆಗೆ ಬರೋಬ್ಬರಿ 101.56 ಅಡಿ ನೀರು ಸಂಗ್ರಹವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಕೆರೆ, ಕಟ್ಟೆಗಳಿಗೆ ನೀರನ್ನು ತುಂಬಿಸುವ ನಿಟ್ಟಿನಲ್ಲಿ ಜು.8ರಿಂದ ವಿಶ್ವೇಶ್ವರಯ್ಯ ನಾಲೆಗೆ (ವಿಸಿ ನಾಲೆ) ನೀರು ಹರಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯ ನಂತರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಳೆದ 10 ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಅಣೆಕಟ್ಟು 100 ಅಡಿ ತುಂಬಿದೆ. ಸಾಮಾನ್ಯವಾಗಿ ಪ್ರತಿವರ್ಷ ಕೆಆರ್ ಎಸ್ ಅಣೆಕಟ್ಟಿನಿಂದ ಜುಲೈ ಎರಡನೇ ವಾರದಿಂದ ವಿ.ಸಿ.ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದರೆ, ಈ ಬಾರಿ ಮಾರ್ಚ್ ನಲ್ಲಿ ನಾಲೆಗೆ ನೀರು  ಹರಿಸದ ಹಿನ್ನಲೆಯಲ್ಲಿ ಜುಲೈ 8 ರ ಸಂಜೆಯಿಂದ ಮುಂದಿನ 15 ದಿನಗಳ ಕಾಲ ವಿ.ಸಿ.ನಾಲೆಗೆ ನೀರು ಹರಿಸಲಾಗುವುದು ಎಂದು ತಿಳಿಸಿದರು.

ಕೆಆರ್‌ಎಸ್‌ಗೆ ಒಳ ಹರಿವು ಹೆಚ್ಚಳ, 100 ಅಡಿ ದಾಟಿದ್ದಕ್ಕೆ ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!

ಇದು ಕೇವಲ ಕೆರೆ ಕಟ್ಟೆ ತುಂಬಿಸಲು ಹಾಗು ಜಾನುವಾರುಗಳ ಹಿತದೃಷ್ಟಿಯಿಂದ ನಾಲೆಗೆ ನೀರು ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಮುಂದಿನ 10 ದಿನಗಲ ನಂತರ ಮುಂಗಾರು ಮಳೆಯ ಪರಿಸ್ಥಿತಿ ಹಾಗು ಕೆಆರ್ ಎಸ್ ಅಣೆಕಟ್ಟಿನ ಒಳಹರಿವು ಗಮನಿಸಿಕೊಂಡು ರೈತರ ಬೆಳೆಗಳಿಗೂ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು. ವಿ.ಸಿ.ನಾಲೆಯ 36 ಕಿಮೀ ಕಾಮಗಾರಿ ಈಗಾಗಲೇ ಮುಕ್ತಾಯವಾಗಿದ್ದು, ಬಾಕಿ 16 ಕಿಮೀ ಕಾಮಗಾರಿ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಿದ ನಂತರ ಮುಕ್ತಾಯಗೊಳಿಸಲಾಗುವುದು ಎಂದು ಹೇಳಿದರು.

ಮಂಡ್ಯದ ಜಿಲ್ಲೆಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಗೆ ಟ್ರಯಲ್ ಬ್ಲಾಸ್ಟ್‌ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಹೈಕೋರ್ಟ್ ಅಡ್ವೋಕೆಟ್ ಜನರಲ್ ಜೊತೆ ಚರ್ಚೆ ಮಾಡಿ ಜುಲೈ 15 ರೊಳಗೆ ತೀರ್ಮಾನ ಕೈಗೊಳ್ಳಲಾಗುವುದು.ಇನ್ನು ಮಂಡ್ಯದಲ್ಲಿ ಟ್ರಯಲ್ ಬ್ಲಾಸ್ಟ್ ಸಾಧಕ ಬಾದಕ ಬಗ್ಗೆ ರೈತರ ಜೊತೆ ಚರ್ಚೆ ನಡೆಸಿರುವುದಾಗಿ ಚಲುವರಾಯಸ್ವಾಮಿ ಹೇಳಿದರು‌‌.

ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಫೋನ್ ವಾಲ್‌ಪೇಪರ್‌ನಲ್ಲಿರುವ ಕರೋಲಿ ಬಾಬಾ ಯಾರು ಗೊತ್ತಾ?

ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ:

  • ಗರಿಷ್ಠ ಮಟ್ಟ - 124.80 ಅಡಿ.
  • ಇಂದಿನ ಮಟ್ಟ - 101.50 ಅಡಿ.
  • ಗರಿಷ್ಠ ಸಾಂದ್ರತೆ - 49.452 ಟಿಎಂಸಿ
  • ಇಂದಿನ ಸಾಂದ್ರತೆ - 24.0010 ಟಿಎಂಸಿ
  • ಒಳ ಹರಿವು - 9,065 ಕ್ಯೂಸೆಕ್
  • ಹೊರ ಹರಿವು - 563 ಕ್ಯೂಸೆಕ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಜೆ ರಾಯ್ ಹಾದಿಯಲ್ಲಿ ಮತ್ತೊಂದು ಬಲಿ: ಇಡಿ ದಾಳಿ ಭೀತಿಯಿಂದ ಬಿಬಿಎಂಪಿ ನಿವೃತ್ತ ಚೀಫ್ ಇಂಜಿನಿಯರ್ ಆತ್ಮ*ಹತ್ಯೆ!
ವರನಟ ಡಾ.ರಾಜ್ ಅಪಹರಣ ಪ್ರಕರಣ, ಬರೋಬ್ಬರಿ 25 ವರ್ಷಗಳ ಬಳಿಕ 9 ಆರೋಪಿಗಳನ್ನು ಆರೋಪ ಮುಕ್ತಗೊಳಿಸಿದ ಮದ್ರಾಸ್ ಹೈಕೋರ್ಟ್!