ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Published : Jan 20, 2024, 11:12 PM IST
ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಸಾರಾಂಶ

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. 

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ವೇವ್ಸ್ ಶ್ರೇಣಿಯ 10 ಬಗೆಯ ಪ್ರೀಮಿಯಂ ಮೈಸೂರು ಸ್ಯಾಂಡಲ್ ಸಾಬೂನುಗಳು, 3 ಬಗೆಯ ಶವರ್ ಜೆಲ್, 6 ತರಹದ ಸೋಪ್ ಕಿಟ್, ಹ್ಯಾಂಡ್ ವಾಶ್ ಮತ್ತು ಕುಡಿಯುವ ನೀರು ಸೇರಿವೆ.

ಬಳಿಕ ಮಾತನಾಡಿದ ಮುಖ್ಯಮಂತ್ರಿ, 107 ವರ್ಷಗಳ ಇತಿಹಾಸ ಹೊಂದಿರುವ ಕೆಎಸ್ಡಿಎಲ್, ಒಂದೇ ಬಾರಿಗೆ 21 ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲ ಬಾರಿಯಾಗಿದೆ. ಸಂಸ್ಥೆಯು ಈಗಿನ ತಲೆಮಾರಿನ ಯುವಜನರ ನಿರೀಕ್ಷೆಗೆ ತಕ್ಕಂತೆ ಶವರ್ ಜೆಲ್ ಸೇರಿದಂತೆ ಬಗೆಬಗೆಯ ಉತ್ಪನ್ನಗಳನ್ನು ಉತ್ಪಾದಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ಮುಂದುವರಿಯಬೇಕು ಎಂದರು.

ಈ ಬಾರಿ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ ಕಾರಣ ಇಲ್ಲಿದೆ

ಹಿಂದಿನ ಸಾಲಿನಲ್ಲಿ ಸಂಸ್ಥೆಯು 132 ಕೋಟಿ ರೂ. ಲಾಭ ಮಾಡಿತ್ತು. ಎಂಬಿ ಪಾಟೀಲರು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮೇಲೆ, ಕಳೆದ ಎಂಟು ತಿಂಗಳಲ್ಲಿ ಲಾಭವು 182 ಕೋಟಿ ರೂ.ಗಳಿಗೇರಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಅವರು ಹಲವು ಮಹತ್ವಾಕಾಂಕ್ಷಿ ಉಪಕ್ರಮಗಳನ್ನು ಕೈಗೊಂಡಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ಅವರು ಸಚಿವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜ.22 ರಂದು ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಸರ್ಕಾರಿ ರಜೆ ನೀಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್