
ಬೆಂಗಳೂರು (ನ.19): ಶಕ್ತಿ ಯೋಜನೆಯಿಂದ ಬರುವ ಆದಾಯ ಹೊರತುಪಡಿಸಿ, ಶಕ್ತಿ ಯೋಜನೇತರ ಆದಾಯ (ಪುರುಷ ಪ್ರಯಾಣಿಕರ ಟಿಕೆಟ್ ಆದಾಯ) ವೃದ್ಧಿಸುವ ಉದ್ದೇಶದಿಂದಾಗಿ ಕೆಎಸ್ಸಾರ್ಟಿಸಿಯು ತನ್ನ ವ್ಯಾಪ್ತಿಯ ಪ್ರತಿ ಘಟಕದಲ್ಲಿ ಸಂಗ್ರಹವಾಗುತ್ತಿರುವ ಆದಾಯದ ವರದಿ ಪಡೆಯಲು ಮುಂದಾಗಿದೆ.
ರಾಜ್ಯದಲ್ಲಿ ಶಕ್ತಿ ಯೋಜನೆಯಿಂದಾಗಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಅದರಿಂದ ನಿಗಮಗಳಿಗೆ ಬರುವ ಆದಾಯದಲ್ಲೂ ಏರಿಕೆಯಾಗುವಂತಾಗಿದೆ. ಅದರ ಜತೆಗೆ ಶಕ್ತಿ ಯೋಜನೆ ವ್ಯಾಪ್ತಿಗೊಳಪಡದ ಪ್ರಯಾಣಿಕರಿಂದ ನಿಗಮಕ್ಕೆ ಆದಾಯ ಹೆಚ್ಚಿಸಲು ಕೆಎಸ್ಸಾರ್ಟಿಸಿ ಮುಂದಾಗಿದೆ. ಅದಕ್ಕಾಗಿ ಪ್ರತಿ ಘಟಕದಲ್ಲಿ ಕಳೆದ 6 ತಿಂಗಳಲ್ಲಿ ಶಕ್ತಿ ಯೋಜನೆ ಆದಾಯ ಹೆಚ್ಚಾಗಿ ಸಂಗ್ರಹವಾಗುತ್ತಿರುವ 10 ಮಾರ್ಗಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಅದನ್ನಾಧರಿಸಿ ಆ ಮಾರ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕರಿಂದ ಅಭಿಪ್ರಾಯ ಸಂಗ್ರಹಿಸಿ, ಆ ಮಾರ್ಗದಲ್ಲಿ ಹೆಚ್ಚಿನ ಬಸ್ಗಳನ್ನು ಸೇವೆಗೆ ನೀಡುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಲಾಗಿದೆ.
ಶಕ್ತಿ ಯೋಜನೆಯಿಂದ ಬರುವ ಆದಾಯ ಹೊರತುಪಡಿಸಿ, ಶಕ್ತಿ ಯೋಜನೇತರ ಆದಾಯ (ಪುರುಷ ಪ್ರಯಾಣಿಕರ ಟಿಕೆಟ್ ಆದಾಯ) ವೃದ್ಧಿಸುವ ಉದ್ದೇಶದಿಂದಾಗಿ ಕೆಎಸ್ಸಾರ್ಟಿಸಿಯು ತನ್ನ ವ್ಯಾಪ್ತಿಯ ಪ್ರತಿ ಘಟಕದಲ್ಲಿ ಸಂಗ್ರಹವಾಗುತ್ತಿರುವ ಆದಾಯದ ವರದಿ ಪಡೆಯಲು ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ