
ಬೆಂಗಳೂರು, (ಜೂನ್.11): ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕೆಎಸ್ಆರ್ಟಿಸಿ, ಬಿಎಂಟಿಸಿ, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು (ಗುರುವಾರ) ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದಿದ್ದಾರೆ.
ಕೊರೋನಾ ಆತಂಕ: ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಕೆಎಸ್ಆರ್ಟಿಸಿ
ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್ಡೌನ್ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆಯಾಗಿದೆ.
ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ