
ಬೆಂಗಳೂರು [ಡಿ.21]: ತಮಿಳುನಾಡಿನ ಮೇಲ್ ಮರವತ್ತೂರಿನ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಸಾಂದರ್ಭಿಕ ಒಪ್ಪಂದದ ಮೇಲೆ ಬಸ್ಗಳನ್ನು ಕೆಎಸ್ಆರ್ಟಿಸಿ ಒದಗಿಸಲಿದೆ.
ಭಕ್ತಾದಿಗಳು ಬಸ್ ಪಡೆಯಲು ಅನುಕೂಲವಾಗುವಂತೆ ಬೆಂಗಳೂರು ನಗರದ ಮೆಜೆಸ್ಟಿಕ್ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆಯ ಬಸ್ ನಿಲ್ದಾಣದ ಘಟಕ 5 ಮತ್ತು 6ರಲ್ಲಿ ವಿಶೇಷ ಕೌಂಟರ್ ತೆರೆಯಲಾಗಿದೆ.
55 ಆಸನ ಸಾಮರ್ಥ್ಯದ ಕರ್ನಾಟಕ ಸಾರಿಗೆ (ಕೆಂಪು ಬಸ್) ಬಸ್ಗೆ ಪ್ರತಿ ಕಿ.ಮೀ.41 ರು. ಇದೆ. ಅಂತರ್ರಾಜ್ಯ ಪರ್ಮಿಟ್ ದರಗಳೊಂದಿಗೆ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್ಗಳನ್ನು ಒದಗಿಸಲಾಗುತ್ತದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ...
ಬೆಂಗಳೂರು ನಗರ ಹೊರತುಪಡಿಸಿ ಇತರೆ ಸ್ಥಳಗಳಿಂದ ಬಸ್ಗಳ ಅಗತ್ಯವಿದ್ದರೆ ಸಮೀಪದ ಬಸ್ ನಿಲ್ದಾಣ ಮತ್ತು ಬಸ್ ಡಿಪೋಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760990535ಗೆ ಸಂಪರ್ಕಿಸಬಹುದು ಎಂದು ನಿಗಮ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ